Homeಕರ್ನಾಟಕಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಮುಖಭಂಗ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆ ಆದೇಶಕ್ಕೆ ತಡೆ

ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಮುಖಭಂಗ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆ ಆದೇಶಕ್ಕೆ ತಡೆ

- Advertisement -
- Advertisement -

ಅರಣ್ಯ ಇಲಾಖೆಯ ಕರ್ತವ್ಯನಿಷ್ಟ ಮಹಿಳಾ ಅಧಿಕಾರಿಯನ್ನು ಬೀದರ್‌ಗೆ ವರ್ಗಾಯಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಭಾರಿ ಮುಖಭಂಗ ಉಂಟಾಗಿದೆ. ಬೀದರ್‌ಗೆ ವರ್ಗಾವಣೆ ಮಾಡಿ ಆದೇಶಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ ತಡೆ ನೀಡಿದೆ.

ಅರಣ್ಯ ಸಂಚಾರಿ ದಳದ ಅಧಿಕಾರಿಯಾಗಿದ್ದ ಮಹಿಳಾ ಅಧಿಕಾರಿ ಸಂಧ್ಯಾ ಸಚಿನ್ ಅವರನ್ನ ವರ್ಗಾವಣೆ ಮಾಡಿಸಿದಕ್ಕೆ ಕೋರ್ಟ್ ಛೀಮಾರಿ ಹಾಕಿದೆ. ಸಂಧ್ಯಾ ಅವರು ಮೊದಲಿದ್ದ ಹುದ್ದೆಯಲ್ಲೇ ಮರು ನೇಮಕಗೊಳಿಸಿ ಆದೇಶಿಸಿದೆ.

ಸರ್ಕಾರದ ಆದೇಶದ ವಿರುದ್ಧ ಅಧಿಕಾರಿ ಸಂಧ್ಯಾ ಸಚಿನ್ ಕೆಎಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಪೀಠ)ಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಇದು ರಾಜಕೀಯ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ, ವರ್ಗಾವಣೆ ಮಾಡಬೇಕಾದರೇ ಯಾವುದೇ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಯಾವುದೇ ಅನುಮತಿ ಇಲ್ಲದೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮರಗಳನ್ನು ಬಿಜೆಪಿ ನಾಯಕ ಎನ್ನಲಾದ ಪಂಚಮುಖಿ ಬಾಲಕೃಷ್ಣ ಶೆಟ್ಟಿ ಎಂಬುವವರು ಕಡೆಸಿದ್ದರು.  ಸ್ಥಳೀಯರ ದೂರಿನ ಬೆನ್ನಲ್ಲೇ ಸ್ಥಳಕ್ಕೆ ತೆರಳಿದ್ದ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಬೆಲೆ ಬಾಳುವ ಮರಗಳ ಜೊತೆಗೆ ಬಾಲಕೃಷ್ಣ ಶೆಟ್ಟಿಗೆ ಸೇರಿದ ಲಾರಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದರು.

ಇದರಿಂದ ಅರಣ್ಯ ಸಂಚಾರಿ ದಳದಲ್ಲಿ ನಿಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಅರಣ್ಯ ಅಧಿಕಾರಿ ಸಂಧ್ಯಾ ಸಚಿನ್‌ರನ್ನು ಬೀದರ್‌ಗೆ ವರ್ಗಾಯಿಸುವಂತೆ ಶಾಸಕ ಹರೀಶ್ ಪೂಂಜಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ಮತ್ತು ವರ್ಗಾಯಿಸುವುದು ಎಂದು ಬರೆದು ಸಿಎಂ ಸಹಿ ಹಾಕಿರುವ ಪತ್ರ ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಜತೆಗೆ ಅರಣ್ಯಾಧಿಕಾರಿ ಸಂಧ್ಯಾ ಮರಗಳ್ಳರ ಮೇಲೆ ತಾನು ನಿಷ್ಟುರ ಕ್ರಮಕೈಗೊಂಡಿದ್ದಕ್ಕೆ ಸೇಡಿನಿಂದ ವರ್ಗಾ ಮಾಡಲಾಗಿದೆ ಎಂದು ಬರೆದ ಪತ್ರವೂ ವೈರಲ್ ಆಗಿತ್ತು. ಈಗ ನ್ಯಾಯಾಲಯ ಹರೀಶ್ ಪೂಂಜಾಗೆ ಛೀಮಾರಿ ಹಾಕಿ, ರಾಜಕೀಯ ದುರದ್ದೇಶದಿಂದ ವರ್ಗಾವಣೆ ಮಾಡಿಸಲಾಗಿದೆ ಎಂದು ಆದೇಶ ನೀಡಿದೆ.

ನ್ಯಾಯಾಲಯದ ಆದೇಶ ಪ್ರತಿ ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರು: ಸಚಿವ ಸುಧಾಕರ್‌ ಹೇಳಿಕೆಗೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...