Homeಕರ್ನಾಟಕಬೆಳ್ತಂಗಡಿ | ಸುಂದರ ಮಲೆಕುಡಿಯ ಬೆರಳು ಕತ್ತರಿಸಿದ ಪ್ರಕರಣ : ನಾಲ್ವರಿಗೆ ಜೈಲು ಶಿಕ್ಷೆ, ದಂಡ

ಬೆಳ್ತಂಗಡಿ | ಸುಂದರ ಮಲೆಕುಡಿಯ ಬೆರಳು ಕತ್ತರಿಸಿದ ಪ್ರಕರಣ : ನಾಲ್ವರಿಗೆ ಜೈಲು ಶಿಕ್ಷೆ, ದಂಡ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಕಾಟಾಜೆಯಲ್ಲಿ ಮಲೆಕುಡಿಯ ವ್ಯಕ್ತಿಯ ಕೈ ಬೆರಳುಗಳನ್ನು ಕತ್ತರಿಸಿ, ಅವರ ಮಗನಿಗೆ ಮೆಣಸಿನ ಹುಡಿ ಎರಚಿ, ಅವರ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ (ಫೆ.19) ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ನೆರಿಯ ಅಣಿಯೂರು ಗ್ರಾಮದ ಗೋಪಾಲ ಗೌಡ (67), ಬಂದಾರು ಗ್ರಾಮದ ಎ.ದಮಯಂತಿ, ವಸಂತ, ನೆರಿಯ ಅಣಿಯೂರು ಗ್ರಾಮದ ಪುಷ್ಪಲತಾ ಶಿಕ್ಷೆಗೆ ಒಳಗಾದವರು.

ಗೋಪಾಲ ಗೌಡಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ, ದಮಯಂತಿ, ವಸಂತ ಹಾಗೂ ಪುಷ್ಪಲತಾ ಅವರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ತಲಾ 15 ಸಾವಿರ ರೂಪಾಯಿ ದಂಡ ವಿಧಿಸಿ ಒಂದನೇ ಹೆಚ್ಚುರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೆಚ್.ಎಸ್ ಅವರು ಆದೇಶ ಹೊರಡಿಸಿದ್ದಾರೆ.

ಗೋಪಾಲ ಗೌಡ ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳು ಹೆಚ್ಚುವರಿಯಾಗಿ ಸಾದಾ ಜೈಲು ಶಿಕ್ಷೆ ಹಾಗೂ ಉಳಿದ ಅಪರಾಧಿಗಳು ದಂಡ ಪಾವತಿಸಲು ವಿಫಲರಾದರೆ ಮೂರು ತಿಂಗಳು ಹೆಚ್ಚುವರಿ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು. ಜೀವ ಬೆದರಿಕೆ ಒಡ್ಡಿದ್ದಕ್ಕೆ ನಾಲ್ವರು ಅಪರಾಧಿಗಳು ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ದಂಡದ ಮೊತ್ತ 1.45 ಲಕ್ಷ ರೂಪಾಯಿಯನ್ನು ಸಂತ್ರಸ್ತ ಸುಂದರ ಮಲೆಕುಡಿಯ ಅವರಿಗೆ ನೀಡಬೇಕು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಅವರಿಗೆ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ : ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಕಾಟಾಜೆಯ ಬಿ.ಎ ಸುಂದರ ಮಲೆಕುಡಿಯ ಅವರು 2015ರ ಜುಲೈ 26ರಂದು ಪತ್ನಿ ರೇವತಿ, ಮಕ್ಕಳಾದ ಪೂರ್ಣೇಶ್ ಮತ್ತು ಪೂರ್ಣಿಮಾ ಅವರೊಂದಿಗೆ ತಮ್ಮ ಸ್ವಾಧೀನದ ಜಮೀನಿನಲ್ಲಿ ಕಾಡು ಕಡಿಯುತ್ತಿದ್ದರು.

ಆಗ ಅಪರಾಧಿಗಳು ಸ್ಥಳಕ್ಕೆ ಬಂದು “ನಮ್ಮ ಜಾಗದಲ್ಲಿ ಏಕೆ ಕಾಡು ಕಡಿಯುತ್ತಿದ್ದೀರಿ?” ಎಂದು ಆಕ್ಷೇಪಿಸಿದ್ದರು. ಆಗ ಸುಂದರ ಮಲೆಕುಡಿಯ ಅವರು, “ಈ ಜಾಗ ಅರಣ್ಯ ಇಲಾಖೆಯವರು ನಮಗೆ ಬಿಟ್ಟುಕೊಟ್ಟದ್ದು” ಎಂದಿದ್ದಾರೆ. ಆಗ ಗೋಪಾಲ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಂದರ ಮಲೆಕುಡಿಯ ಅವರ ಬೆರಳುಗಳನ್ನು ಕತ್ತರಿಸಿ ಕೊಲೆಗೆ ಯತ್ನಿಸಿದ್ದರು. ಅಲ್ಲದೆ, ಸುಂದರ ಅವರ ಮಗ ಪೂರ್ಣೇಶ್ ಅವರ ಮೇಲೆ ಮೆಣಸಿನ ಹುಡಿ ಎರಚಿದ್ದರು. “ಇನ್ನು ಈ ಜಾಗಕ್ಕೆ ಬಂದರೆ ಕೊಲ್ಲದೇ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಒಟ್ಟು 29 ಸಾಕ್ಷಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. 52 ದಾಖಲೆಗಳನ್ನು ಗುರುತಿಸಿದೆ. ಅಲ್ಲದೆ, ಸುಂದರ ಮಲೆಕುಡಿಯ ಅವರಿಗೆ ಚಿಕಿತ್ಸೆ ನೀಡಿದ್ದ ಮಂಗಳೂರಿನ ವೆನ್ಲಾಕ್‌ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ನಮ್ರತ್ ಭಾನು ಮತ್ತು ಎ.ಜೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ದಿನೇಶ್ ಕದಮ್ ಸಾಕ್ಷ್ಯ ನುಡಿದಿದ್ದರು ಎಂದು ವರದಿಯಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಸಿಕ್ಕಿದ್ದ ಬೆರಳಿನ ತುಂಡು ಸುಂದರ ಮಲೆಕುಡಿಯ ಅವರದ್ದು ಎಂದು ಡಾ. ಶಹನಾಝ್ ಫಾತಿಮಾ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಡಿಎನ್ಎ ವಿಭಾಗ ತಜ್ಞರು ಸಾಕ್ಷ್ಯ ನುಡಿದಿದ್ದರು ಎಂದು ವರದಿಗಳು ಹೇಳಿವೆ.

ಬಂಟ್ವಾಳ ಉಪವಿಭಾಗದ ಅಂದಿನ ಡಿವೈಎಸ್ಪಿ ರಾಹುಲ್ ಕುಮಾರ್ ಪ್ರಕರಣದ ತನಿಖೆ ನಡೆಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಜನಪರ ಸಂಘಟನೆಗಳ ಹೋರಾಟಕ್ಕೆ ಜಯ

ಸುಂದರ ಮಲೆಕುಡಿಯ ಮತ್ತು ಅವರ ಕುಟುಂಬದ ಮೇಲೆ ದೌರ್ಜನ್ಯ ಎಸಗಿದ ಆಪರಾಧಿಗಳಾದ ಗೋಪಾಲಗೌಡ ಮತ್ತು ಇತರರ ಬಂಧನ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿತ್ತು. ಆ ಹೋರಾಟಕ್ಕೆ ನ್ಯಾಯಾಲಯದ ತೀರ್ಪಿನ ಮೂಲಕ ಜಯ ಸಿಕ್ಕಂತಾಗಿದೆ.

ಗೋಪಾಲಗೌಡ ಅವರ ಫೋಟೋಗೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ ಸಂದರ್ಭ (ದಿ. 23 ಆ.2015)

 

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...