Homeಕರ್ನಾಟಕಬೆಳ್ತಂಗಡಿ | ಸುಂದರ ಮಲೆಕುಡಿಯ ಬೆರಳು ಕತ್ತರಿಸಿದ ಪ್ರಕರಣ : ನಾಲ್ವರಿಗೆ ಜೈಲು ಶಿಕ್ಷೆ, ದಂಡ

ಬೆಳ್ತಂಗಡಿ | ಸುಂದರ ಮಲೆಕುಡಿಯ ಬೆರಳು ಕತ್ತರಿಸಿದ ಪ್ರಕರಣ : ನಾಲ್ವರಿಗೆ ಜೈಲು ಶಿಕ್ಷೆ, ದಂಡ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಕಾಟಾಜೆಯಲ್ಲಿ ಮಲೆಕುಡಿಯ ವ್ಯಕ್ತಿಯ ಕೈ ಬೆರಳುಗಳನ್ನು ಕತ್ತರಿಸಿ, ಅವರ ಮಗನಿಗೆ ಮೆಣಸಿನ ಹುಡಿ ಎರಚಿ, ಅವರ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ (ಫೆ.19) ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ನೆರಿಯ ಅಣಿಯೂರು ಗ್ರಾಮದ ಗೋಪಾಲ ಗೌಡ (67), ಬಂದಾರು ಗ್ರಾಮದ ಎ.ದಮಯಂತಿ, ವಸಂತ, ನೆರಿಯ ಅಣಿಯೂರು ಗ್ರಾಮದ ಪುಷ್ಪಲತಾ ಶಿಕ್ಷೆಗೆ ಒಳಗಾದವರು.

ಗೋಪಾಲ ಗೌಡಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ, ದಮಯಂತಿ, ವಸಂತ ಹಾಗೂ ಪುಷ್ಪಲತಾ ಅವರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ತಲಾ 15 ಸಾವಿರ ರೂಪಾಯಿ ದಂಡ ವಿಧಿಸಿ ಒಂದನೇ ಹೆಚ್ಚುರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೆಚ್.ಎಸ್ ಅವರು ಆದೇಶ ಹೊರಡಿಸಿದ್ದಾರೆ.

ಗೋಪಾಲ ಗೌಡ ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳು ಹೆಚ್ಚುವರಿಯಾಗಿ ಸಾದಾ ಜೈಲು ಶಿಕ್ಷೆ ಹಾಗೂ ಉಳಿದ ಅಪರಾಧಿಗಳು ದಂಡ ಪಾವತಿಸಲು ವಿಫಲರಾದರೆ ಮೂರು ತಿಂಗಳು ಹೆಚ್ಚುವರಿ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು. ಜೀವ ಬೆದರಿಕೆ ಒಡ್ಡಿದ್ದಕ್ಕೆ ನಾಲ್ವರು ಅಪರಾಧಿಗಳು ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ದಂಡದ ಮೊತ್ತ 1.45 ಲಕ್ಷ ರೂಪಾಯಿಯನ್ನು ಸಂತ್ರಸ್ತ ಸುಂದರ ಮಲೆಕುಡಿಯ ಅವರಿಗೆ ನೀಡಬೇಕು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಅವರಿಗೆ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ : ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಕಾಟಾಜೆಯ ಬಿ.ಎ ಸುಂದರ ಮಲೆಕುಡಿಯ ಅವರು 2015ರ ಜುಲೈ 26ರಂದು ಪತ್ನಿ ರೇವತಿ, ಮಕ್ಕಳಾದ ಪೂರ್ಣೇಶ್ ಮತ್ತು ಪೂರ್ಣಿಮಾ ಅವರೊಂದಿಗೆ ತಮ್ಮ ಸ್ವಾಧೀನದ ಜಮೀನಿನಲ್ಲಿ ಕಾಡು ಕಡಿಯುತ್ತಿದ್ದರು.

ಆಗ ಅಪರಾಧಿಗಳು ಸ್ಥಳಕ್ಕೆ ಬಂದು “ನಮ್ಮ ಜಾಗದಲ್ಲಿ ಏಕೆ ಕಾಡು ಕಡಿಯುತ್ತಿದ್ದೀರಿ?” ಎಂದು ಆಕ್ಷೇಪಿಸಿದ್ದರು. ಆಗ ಸುಂದರ ಮಲೆಕುಡಿಯ ಅವರು, “ಈ ಜಾಗ ಅರಣ್ಯ ಇಲಾಖೆಯವರು ನಮಗೆ ಬಿಟ್ಟುಕೊಟ್ಟದ್ದು” ಎಂದಿದ್ದಾರೆ. ಆಗ ಗೋಪಾಲ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಂದರ ಮಲೆಕುಡಿಯ ಅವರ ಬೆರಳುಗಳನ್ನು ಕತ್ತರಿಸಿ ಕೊಲೆಗೆ ಯತ್ನಿಸಿದ್ದರು. ಅಲ್ಲದೆ, ಸುಂದರ ಅವರ ಮಗ ಪೂರ್ಣೇಶ್ ಅವರ ಮೇಲೆ ಮೆಣಸಿನ ಹುಡಿ ಎರಚಿದ್ದರು. “ಇನ್ನು ಈ ಜಾಗಕ್ಕೆ ಬಂದರೆ ಕೊಲ್ಲದೇ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಒಟ್ಟು 29 ಸಾಕ್ಷಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. 52 ದಾಖಲೆಗಳನ್ನು ಗುರುತಿಸಿದೆ. ಅಲ್ಲದೆ, ಸುಂದರ ಮಲೆಕುಡಿಯ ಅವರಿಗೆ ಚಿಕಿತ್ಸೆ ನೀಡಿದ್ದ ಮಂಗಳೂರಿನ ವೆನ್ಲಾಕ್‌ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ನಮ್ರತ್ ಭಾನು ಮತ್ತು ಎ.ಜೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ದಿನೇಶ್ ಕದಮ್ ಸಾಕ್ಷ್ಯ ನುಡಿದಿದ್ದರು ಎಂದು ವರದಿಯಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಸಿಕ್ಕಿದ್ದ ಬೆರಳಿನ ತುಂಡು ಸುಂದರ ಮಲೆಕುಡಿಯ ಅವರದ್ದು ಎಂದು ಡಾ. ಶಹನಾಝ್ ಫಾತಿಮಾ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಡಿಎನ್ಎ ವಿಭಾಗ ತಜ್ಞರು ಸಾಕ್ಷ್ಯ ನುಡಿದಿದ್ದರು ಎಂದು ವರದಿಗಳು ಹೇಳಿವೆ.

ಬಂಟ್ವಾಳ ಉಪವಿಭಾಗದ ಅಂದಿನ ಡಿವೈಎಸ್ಪಿ ರಾಹುಲ್ ಕುಮಾರ್ ಪ್ರಕರಣದ ತನಿಖೆ ನಡೆಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಜನಪರ ಸಂಘಟನೆಗಳ ಹೋರಾಟಕ್ಕೆ ಜಯ

ಸುಂದರ ಮಲೆಕುಡಿಯ ಮತ್ತು ಅವರ ಕುಟುಂಬದ ಮೇಲೆ ದೌರ್ಜನ್ಯ ಎಸಗಿದ ಆಪರಾಧಿಗಳಾದ ಗೋಪಾಲಗೌಡ ಮತ್ತು ಇತರರ ಬಂಧನ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿತ್ತು. ಆ ಹೋರಾಟಕ್ಕೆ ನ್ಯಾಯಾಲಯದ ತೀರ್ಪಿನ ಮೂಲಕ ಜಯ ಸಿಕ್ಕಂತಾಗಿದೆ.

ಗೋಪಾಲಗೌಡ ಅವರ ಫೋಟೋಗೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ ಸಂದರ್ಭ (ದಿ. 23 ಆ.2015)

 

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...