Homeಕರ್ನಾಟಕಬೆಳ್ತಂಗಡಿ | ಸುಂದರ ಮಲೆಕುಡಿಯ ಬೆರಳು ಕತ್ತರಿಸಿದ ಪ್ರಕರಣ : ನಾಲ್ವರಿಗೆ ಜೈಲು ಶಿಕ್ಷೆ, ದಂಡ

ಬೆಳ್ತಂಗಡಿ | ಸುಂದರ ಮಲೆಕುಡಿಯ ಬೆರಳು ಕತ್ತರಿಸಿದ ಪ್ರಕರಣ : ನಾಲ್ವರಿಗೆ ಜೈಲು ಶಿಕ್ಷೆ, ದಂಡ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಕಾಟಾಜೆಯಲ್ಲಿ ಮಲೆಕುಡಿಯ ವ್ಯಕ್ತಿಯ ಕೈ ಬೆರಳುಗಳನ್ನು ಕತ್ತರಿಸಿ, ಅವರ ಮಗನಿಗೆ ಮೆಣಸಿನ ಹುಡಿ ಎರಚಿ, ಅವರ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ (ಫೆ.19) ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ನೆರಿಯ ಅಣಿಯೂರು ಗ್ರಾಮದ ಗೋಪಾಲ ಗೌಡ (67), ಬಂದಾರು ಗ್ರಾಮದ ಎ.ದಮಯಂತಿ, ವಸಂತ, ನೆರಿಯ ಅಣಿಯೂರು ಗ್ರಾಮದ ಪುಷ್ಪಲತಾ ಶಿಕ್ಷೆಗೆ ಒಳಗಾದವರು.

ಗೋಪಾಲ ಗೌಡಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ, ದಮಯಂತಿ, ವಸಂತ ಹಾಗೂ ಪುಷ್ಪಲತಾ ಅವರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ತಲಾ 15 ಸಾವಿರ ರೂಪಾಯಿ ದಂಡ ವಿಧಿಸಿ ಒಂದನೇ ಹೆಚ್ಚುರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೆಚ್.ಎಸ್ ಅವರು ಆದೇಶ ಹೊರಡಿಸಿದ್ದಾರೆ.

ಗೋಪಾಲ ಗೌಡ ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳು ಹೆಚ್ಚುವರಿಯಾಗಿ ಸಾದಾ ಜೈಲು ಶಿಕ್ಷೆ ಹಾಗೂ ಉಳಿದ ಅಪರಾಧಿಗಳು ದಂಡ ಪಾವತಿಸಲು ವಿಫಲರಾದರೆ ಮೂರು ತಿಂಗಳು ಹೆಚ್ಚುವರಿ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು. ಜೀವ ಬೆದರಿಕೆ ಒಡ್ಡಿದ್ದಕ್ಕೆ ನಾಲ್ವರು ಅಪರಾಧಿಗಳು ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ದಂಡದ ಮೊತ್ತ 1.45 ಲಕ್ಷ ರೂಪಾಯಿಯನ್ನು ಸಂತ್ರಸ್ತ ಸುಂದರ ಮಲೆಕುಡಿಯ ಅವರಿಗೆ ನೀಡಬೇಕು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಅವರಿಗೆ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ : ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಕಾಟಾಜೆಯ ಬಿ.ಎ ಸುಂದರ ಮಲೆಕುಡಿಯ ಅವರು 2015ರ ಜುಲೈ 26ರಂದು ಪತ್ನಿ ರೇವತಿ, ಮಕ್ಕಳಾದ ಪೂರ್ಣೇಶ್ ಮತ್ತು ಪೂರ್ಣಿಮಾ ಅವರೊಂದಿಗೆ ತಮ್ಮ ಸ್ವಾಧೀನದ ಜಮೀನಿನಲ್ಲಿ ಕಾಡು ಕಡಿಯುತ್ತಿದ್ದರು.

ಆಗ ಅಪರಾಧಿಗಳು ಸ್ಥಳಕ್ಕೆ ಬಂದು “ನಮ್ಮ ಜಾಗದಲ್ಲಿ ಏಕೆ ಕಾಡು ಕಡಿಯುತ್ತಿದ್ದೀರಿ?” ಎಂದು ಆಕ್ಷೇಪಿಸಿದ್ದರು. ಆಗ ಸುಂದರ ಮಲೆಕುಡಿಯ ಅವರು, “ಈ ಜಾಗ ಅರಣ್ಯ ಇಲಾಖೆಯವರು ನಮಗೆ ಬಿಟ್ಟುಕೊಟ್ಟದ್ದು” ಎಂದಿದ್ದಾರೆ. ಆಗ ಗೋಪಾಲ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಂದರ ಮಲೆಕುಡಿಯ ಅವರ ಬೆರಳುಗಳನ್ನು ಕತ್ತರಿಸಿ ಕೊಲೆಗೆ ಯತ್ನಿಸಿದ್ದರು. ಅಲ್ಲದೆ, ಸುಂದರ ಅವರ ಮಗ ಪೂರ್ಣೇಶ್ ಅವರ ಮೇಲೆ ಮೆಣಸಿನ ಹುಡಿ ಎರಚಿದ್ದರು. “ಇನ್ನು ಈ ಜಾಗಕ್ಕೆ ಬಂದರೆ ಕೊಲ್ಲದೇ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಒಟ್ಟು 29 ಸಾಕ್ಷಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. 52 ದಾಖಲೆಗಳನ್ನು ಗುರುತಿಸಿದೆ. ಅಲ್ಲದೆ, ಸುಂದರ ಮಲೆಕುಡಿಯ ಅವರಿಗೆ ಚಿಕಿತ್ಸೆ ನೀಡಿದ್ದ ಮಂಗಳೂರಿನ ವೆನ್ಲಾಕ್‌ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ನಮ್ರತ್ ಭಾನು ಮತ್ತು ಎ.ಜೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ದಿನೇಶ್ ಕದಮ್ ಸಾಕ್ಷ್ಯ ನುಡಿದಿದ್ದರು ಎಂದು ವರದಿಯಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಸಿಕ್ಕಿದ್ದ ಬೆರಳಿನ ತುಂಡು ಸುಂದರ ಮಲೆಕುಡಿಯ ಅವರದ್ದು ಎಂದು ಡಾ. ಶಹನಾಝ್ ಫಾತಿಮಾ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಡಿಎನ್ಎ ವಿಭಾಗ ತಜ್ಞರು ಸಾಕ್ಷ್ಯ ನುಡಿದಿದ್ದರು ಎಂದು ವರದಿಗಳು ಹೇಳಿವೆ.

ಬಂಟ್ವಾಳ ಉಪವಿಭಾಗದ ಅಂದಿನ ಡಿವೈಎಸ್ಪಿ ರಾಹುಲ್ ಕುಮಾರ್ ಪ್ರಕರಣದ ತನಿಖೆ ನಡೆಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಜನಪರ ಸಂಘಟನೆಗಳ ಹೋರಾಟಕ್ಕೆ ಜಯ

ಸುಂದರ ಮಲೆಕುಡಿಯ ಮತ್ತು ಅವರ ಕುಟುಂಬದ ಮೇಲೆ ದೌರ್ಜನ್ಯ ಎಸಗಿದ ಆಪರಾಧಿಗಳಾದ ಗೋಪಾಲಗೌಡ ಮತ್ತು ಇತರರ ಬಂಧನ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿತ್ತು. ಆ ಹೋರಾಟಕ್ಕೆ ನ್ಯಾಯಾಲಯದ ತೀರ್ಪಿನ ಮೂಲಕ ಜಯ ಸಿಕ್ಕಂತಾಗಿದೆ.

ಗೋಪಾಲಗೌಡ ಅವರ ಫೋಟೋಗೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ ಸಂದರ್ಭ (ದಿ. 23 ಆ.2015)

 

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...