Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...