Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ...

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...