Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....