Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...