Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...