Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...