Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ...

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...