Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...