Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...