Homeಮುಖಪುಟಬೇಂದ್ರೆ 125; ಬೇಂದ್ರೆ ಮತ್ತು ಬೆಳಗಾವಿ : ಕನ್ನಡ ಮತ್ತು ಮರಾಠಿ ಮನಸ್ಸುಗಳ ನಡುವೆ ಸೌಹಾರ್ದ...

ಬೇಂದ್ರೆ 125; ಬೇಂದ್ರೆ ಮತ್ತು ಬೆಳಗಾವಿ : ಕನ್ನಡ ಮತ್ತು ಮರಾಠಿ ಮನಸ್ಸುಗಳ ನಡುವೆ ಸೌಹಾರ್ದ ಸೇತುವೆ

- Advertisement -
- Advertisement -

ಮರಾಠಿ ಮಾತೃಭಾಷೆಯಾಗಿದ್ದರೂ ಕನ್ನಡ ಸಾಹಿತ್ಯದಲ್ಲಿ ಅತ್ಯುನ್ನತ ಸ್ಥಾನ ಮತ್ತು ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದುಕೊಂಡ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ-ಮರಾಠಿ ಸಾಹಿತ್ಯದ ನಡುವೆ ಪ್ರಮುಖ ಕೊಂಡಿಗಳಲ್ಲಿ ಒಬ್ಬರು. ಪುಣೆಯ ಫರ್ಗೂಸನ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಬೇಂದ್ರೆಯವರಿಗೆ ಪುನೇರಿ ಎನ್ನಬೇಕೋ? ಕಾನಡಿ ಎನ್ನಬೇಕೋ? ಯಾಕೆಂದರೆ ಕನ್ನಡದ ವರಕವಿ ಅವರು. ಈ ಹಿನ್ನೆಲೆಯಲ್ಲಿ, ಇವತ್ತಿನ ಕನ್ನಡ-ಮರಾಠಿ ಅಥವಾ ಕರ್ನಾಟಕ-ಮಹಾರಾಷ್ಟ್ರ ಅಥವಾ ಬೆಳಗಾವಿ ಗಡಿ ವಿವಾದವನ್ನು ಯಾವ ರೀತಿ ಗ್ರಹಿಸಬೇಕು ಅನ್ನುವ ಪ್ರಶ್ನೆ ಎದ್ದೇಳುತ್ತದೆ. ಭಾಷೆ ಹಾಗೂ ಮನಸ್ಸಿಗೆ ಯಾವುದೇ ಗಡಿ ಇಲ್ಲವೆಂಬುವುದಕ್ಕೆ ಬೇಂದ್ರ್ರೆಯವರಿಗಿಂತ ಉತ್ತಮ ಉದಾಹರಣೆ ಬೇಕೇ? ಪೂನಾದ ಕಾಮರ್ಸ ಕಾಲೇಜಿನಲ್ಲಿ 1942-1943ರ ನಡುವೆ ಮತ್ತು 1994ರಲ್ಲಿ ಸೊಲ್ಲಾಪುರದ ಡಿ.ಎ.ವಿ. ಕಾಲೇಜಿನಲ್ಲಿ ಕನ್ನಡ ಅಧ್ಯಾಪಕ ವೃತ್ತಿ ಮಾಡಿದರು. ಇವರ ಮೂಲ ವಂಶಜರು ಮಹಾರಾಷ್ಟ್ರದ ರತ್ನಾಗಿರಿಯಿಂದ ಬಂದು ಕರ್ನಾಟಕದ ಶಿರಹಟ್ಟಿಯಲ್ಲಿ ನೆಲೆಸಿದರು. ಹೀಗೆ ಕನ್ನಡ-ಮರಾಠಿ ದ್ವಿಭಾಷಾ ಪರಿಸರದಲ್ಲಿ ಬೆಳೆದ ಕನ್ನಡದ ಶ್ರೇಷ್ಠ ಕವಿಗಳಲ್ಲಿ ಒಬ್ಬರಾದ ಬೇಂದ್ರೆಯವರ ಮೇಲೆ ದ್ವಿಸಂಸ್ಕೃತಿಗಳ ಪ್ರಭಾವ ವಿಫುಲವಾಗಿದೆ ಎನ್ನುವುದನ್ನು ಅಲ್ಲಗಳೆಯುವುದಿಲ್ಲ.

1929ರಲ್ಲಿ ಬೆಳಗಾವಿಯಲ್ಲಿ ಮಾಸ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ’ಹಕ್ಕಿ ಹಾರುತಿದೆ ನೋಡಿದಿರಾ’ ಕವನವನ್ನು ವಾಚಿಸಿದಾಗ, ಸಭಿಕರೆಲ್ಲಾ ಮಂತ್ರಮುಗ್ಧರಾಗಿದ್ದು ಈಗ ದಂತಕಥೆ. ಆಗ ಬೇಂದ್ರೆಯವರಿಗೆ ಕೇವಲ ಮೂವತ್ಮೂರು ವರ್ಷ.

1930ರಲ್ಲಿ ಮೊದಲ ಬಾರಿಗೆ ಜಯ ಕರ್ನಾಟಕ ಪತ್ರಿಕೆಯಲ್ಲಿ ಅವರ ’ನರಬಲಿ’ ಕವನ ಪ್ರಕಟವಾಯಿತು. ತದನಂತರದಲ್ಲಿ 1932ರಲ್ಲಿ ಪ್ರಕಟವಾದ ’ಗರಿ’ ಕವನ ಸಂಕಲನದಲ್ಲಿ ’ನರಬಲಿ’ ಕವನ ಮರುಪ್ರಕಟವಾಯಿತು. ’ನರಬಲಿ’ ಕವನ ಪುಸ್ತಕ ರೂಪದಲ್ಲಿ ಬಂದಂತಹ ಸಂದರ್ಭದಲ್ಲಿ, ಅಂದಿನ ಸರಕಾರ ಬೇಂದ್ರೆ ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಿ, (ಬಂಗಾಳದಲ್ಲಿ ನಡೆದ ಮಾರಣಹೋಮವನ್ನು ಕುರಿತು ಬರೆದದ್ದು ’ನರಬಲಿ’ ಕವಿತೆ) ಅಂದಿನ ಸರಕಾರ ಅವರನ್ನು 3 ತಿಂಗಳ ಕಾಲ ಬೆಳಗಾವಿಯ ಹಿಂಡಲಗಿ ಸೆರೆಮನೆಗೆ ಕಳುಹಿಸಿತ್ತು ಹಾಗೂ ಬಿಡುಗಡೆಯ ನಂತರವೂ ಬೇಂದ್ರೆಯವರಿಗೆ ಯಾರೂ ನೌಕರಿ ಕೊಡಬಾರದೆನ್ನುವ ಆದೇಶ ಹೊರಡಿಸಿತ್ತು. 1932ರ ಈ ಐತಿಹಾಸಿಕ ಘಟನೆಯ ಕುರಿತು ಹೆಳವನಿದ್ದಲ್ಲಿ ಹೊಳೆ ಬಂದಿತು (ಸಖೀಗೀತ) ಎಂದು ನೆನಪಿಸಿಕೊಂಡಿದ್ದಾರೆ.

ಬೇಂದ್ರೆಯವರ ಕೃತಿಗಳು ಕನ್ನಡದಲ್ಲಿ ನಾಟಕಗಳನ್ನು, ವಿಮರ್ಶಾ ಗ್ರಂಥಗಳನ್ನು, ಕವನ ಸಂಕಲನಗಳನ್ನು ಒಳಗೊಂಡಿವೆ; ಕೆ. ವಿ. ಅಯ್ಯರ್ ಅವರ ’ಶಾಂತಲಾ’ ಕಾದಂಬರಿಯನ್ನು ಮರಾಠಿಗೆ ಅನುವಾದಿಸಿದ್ದಾರೆ. ಗೀತಾ ಜಾಗರಣ(ವ್ಯಾಖ್ಯಾನ), ವಿಠ್ಠಲ ಪಾಂಡುರಂಗ (ಕವನ ಸಂಕಲನ), ವಿಠ್ಠಲ ಸಂಪ್ರದಾಯ (ವ್ಯಾಖ್ಯಾನ), ಸಂತ ಮಹತಾಂಚಾ ಪೂರ್ಣ ಶಂಭು ವಿಠ್ಠಲ (ವ್ಯಾಖ್ಯಾನ), ಸಂವಾದ ಕವಿತಾ ಸಂಗ್ರಹಗಳು ಮರಾಠಿಯಲ್ಲಿರುವ ಬೇಂದ್ರೆ ಅವರ ಇತರ ಕೃತಿಗಳು. ಮಹಾರಾಷ್ಟ್ರದಿಂದ ಹೊರಡುವ ’ಸನ್ಮತಿ’ ಎನ್ನುವ ಮರಾಠಿ ಭಾಷೆಯ ಪತ್ರಿಕೆಯಲ್ಲಿಯೂ ಬೇಂದ್ರೆಯವರು ಲೇಖನಗಳನ್ನು ಬರೆದಿದ್ದುಂಟು. 1965ರಲ್ಲಿ ಮರಾಠಿಯಲ್ಲಿ ರಚಿಸಿದ ’ಸಂವಾದ’ ಕೃತಿಗೆ ಕೇಳ್ಕರ್ ಬಹುಮಾನ ಪಡೆದಿದ್ದಾರೆ.

ಮಹಾಜನ ಆಯೋಗ ವರದಿಯ ಸಮಯ ಹಾಗೂ 1970ರಲ್ಲಿ ಬೆಳಗಾವಿಯಲ್ಲಿ ಗಡಿ ತಗಾದೆ ತಾರಕಕ್ಕೇರಿದಾಗ, ಕೆಲ ಪುಂಡರು ಧಾರವಾಡದಲ್ಲಿರುವ (ಇವಾಗಲೂ ಬೆಳಗಾವಿ ರಸ್ತೆಯಲ್ಲಿದೆ) ’ಮರಾಠಿ ಮಂಡಳ’ ಎಂಬ ಕಟ್ಟಡಕ್ಕೆ ಬೆಂಕಿ ಹಚ್ಚಿದಾಗ ಬೇಂದ್ರೆಯವರು ಅದನ್ನು ಖಂಡಿಸಿದ್ದಲ್ಲದೇ, ’ನಮ್ಮ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸೀಮಾಭೂಮಿ ರುದ್ರ ಭೂಮಿಯಾಗದೇ ಶಿವಭೂಮಿಯಾಗಬೇಕು’ ಅನ್ನುವ ಮಾತನ್ನು ಅವರು ಆಡಿದ್ದು, ಅಂದಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ರುದ್ರ ಅಂದರೆ ಭಯಂಕರ ಹಾಗೂ ಶಿವ ಅಂದರೆ ಸೌಮ್ಯ, ಒಳ್ಳೆಯದು ಎಂಬ ಹಿನ್ನೆಲೆಯಲ್ಲಿ ಅವರ ಮಾತನ್ನು ಇವತ್ತು ಮರಾಠಿ ಹಾಗೂ ಕನ್ನಡ ಬಂಧುಗಳು ಗ್ರಹಿಸಬಹುದಾಗಿದೆ.

1971 ಸಪ್ಟೆಂಬರ್ 12ರಲ್ಲಿ ಬೆಳಗಾವಿಯ ಆಝಾದ ಟಾಕೀಸ್‌ನಲ್ಲಿ (ಇವಾಗ ಈ ಟಾಕೀಸ್ ಬಂದ್ ಆಗಿದೆ) ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅಂದಿನ ನಗರಸಭಾಧ್ಯಕ್ಷ ಶಿವಾಜಿರಾವ್ ಕಾಕತಕರ್ ಅವರು ಪ್ರೋತ್ಸಾಹ ನೀಡಿದ್ದನ್ನು ಬೆಳಗಾವಿ ಜನತೆ ನೆನಪಿಸಿಕೊಳ್ಳುತ್ತಿರುತ್ತದೆ. ಆ ಕಾರ್ಯಕ್ರಮದ ಸಮಾರೋಪದ ಅತಿಥಿ ಬೇಂದ್ರೆಯವರಾಗಿದ್ದರು.

ಇವತ್ತಿನ ಸಂದರ್ಭದಲ್ಲಿ ಬೆಳಗಾವಿಯನ್ನು ಕೇಂದ್ರವಾಗಿಸಿಕೊಂಡು ಗಡಿ ವಿವಾದಕ್ಕೆ ಮತ್ತೆ ಕಿಡಿ ಹಚ್ಚುವ ಕೆಲಸ ಆಗಾಗ್ಗೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಬೇಂದ್ರೆಯಂತಹ ಕವಿಗೆ ಮರಾಠಿ ಹಾಗೂ ಕನ್ನಡ ಪರಿಸರಗಳು ವೈರತ್ವವಾಗಿ ಕಾಣಲಿಲ್ಲ. ಅದೇ ರೀತಿ ಓದುಗ ರಸಿಕರಿಗೂ ಬೇಂದ್ರೆಯಾಗಲಿ ಅಥವಾ ಕನ್ನಡ-ಮರಾಠಿ ಸಾಹಿತ್ಯದಲ್ಲಾಗಲಿ, ವಾತಾವರಣದಲ್ಲಾಗಲಿ ವೈರ ಭಾವ ಕಾಣಲಿಲ್ಲ.

ಹಾಗೆಯೇ ಪೂನಾದ ಚಿತಳೆಯ ಬಾಕರವಡಿ ಹಾಗೂ ಧಾರವಾಡದ ಬಾಬುಸಿಂಗ ಪೇಡಾದ ಕಥೆ ಭಿನ್ನವಾಗಿಲ್ಲ. ವಂಶ ಪಾರಂಪರ್‍ಯವಾಗಿ ಮೂರ್‍ನಾಲ್ಕು ಪೀಳಿಗೆಗಳು ನಡೆಸಿಕೊಂಡು ಬರುತ್ತಿರುವ ಈ ತಿಂಡಿ ತಿನಿಸುಗಳಿಗೆ ಯಾವ ಗಡಿ ಇಲ್ಲ. ಬಾಕರವಡಿ ಹಾಗೂ ಪೇಡಾದ ನಡುವೆ ಬೆಳೆದ ಬೇಂದ್ರೆ ಕನ್ನಡಿಗರಿಗೆಷ್ಟೋ ಅಷ್ಟೇ ಮರಾಠಿಗರಿಗೂ ಪ್ರಿಯವಾದ ಕವಿ.

2021ನೇ ಸಾಲಿನ ಅಂಬಿಕಾತನಯದತ್ತ ಪ್ರಶಸ್ತಿಗೆ ಭಾಜನರಾದ ಪ್ರೊ ಎಚ್.ಎಸ್. ಶಿವಪ್ರಕಾಶ್ ಅವರು ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಬರೆದುಕೊಂಡಂತೆ: “ನನ್ನ ವ್ಯಾವಸ್ಥೆಯಲ್ಲಿ ಕಾವ್ಯ ಕಸುಬಿನ ಹಲವು ಗುಟ್ಟುಗಳನ್ನು ನಾನು ಕಲಿತದ್ದು ಬೇಂದ್ರೆ ಕಾವ್ಯದ ಮುಖೇಣ.” ಹೀಗೆ ಕನ್ನಡದ ಹಲವು ಹಿರಿಯ ಹಾಗೂ ಕಿರಿಯ ಕವಿಗಳಿಗೆ ಕನ್ನಡದ ವರಕವಿಯ ಪ್ರಭಾವವಾಗಿರುವುದನ್ನು ಅಲ್ಲಗಳೆಯುವಂತಿಲ್ಲ.

ಅವರೊಬ್ಬ ’ಮರಾಠಿ ಮಾನುಸ್ ಅಂದು ಕನ್ನಡದ ಯಾವ ಮನಸ್ಸುಗಳೂ ಅವರನ್ನು ದೂರ ಇಟ್ಟಿಲ್ಲ. ಇದು ಇವತ್ತಿನ ಸೀಮಾಭೂಮಿ ಬೆಳಗಾವಿ ಜನರ (ಕನ್ನಡ ಹಾಗೂ ಮರಾಠಿ) ಸ್ಥಿತಿ ಹಾಗೂ ಮನಸ್ಥಿತಿಯೂ ಹೌದು. ಶತಮಾನ ಕಳೆದ ಮರಾಠಿ ಮಾತೃಭಾಷಿಕ ಕನ್ನಡದ ವರಕವಿ ಬೇಂದ್ರೆಯನ್ನು ಒಪ್ಪಿ ಅಪ್ಪಿಕೊಂಡವರ ಹಾಗೂ ಅರ್ಧ ಶತಮಾನ ಕಳೆದರೂ ಮಹಾಜನ ವರದಿಯನ್ನು ಒಪ್ಪದವರ ನಡುವೆ ಸಿಲುಕಿ ಬೇಯುತ್ತಿರುವುದು ಕನ್ನಡ-ಮರಾಠಿ ಎನ್ನುವ ಭೇದಭಾವವಿಲ್ಲದ ಬದುಕುತ್ತಿರುವ ಮುಗ್ಧ ಮನಸ್ಸುಗಳೇ ಹೊರತು ರಾಜಕಾರಣಿಗಳಲ್ಲ.

ಶೋಭಾ ನಾಯಕ್

ಶೋಭಾ ನಾಯಕ್
ಶೋಭಾ ನಾಯಕ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರು. ೬ ಸುವರ್ಣ ಪದಕಗಳೊಂದಿಗೆ ಕರ್ನಾಟಕ ವಿ.ವಿ ಸ್ನಾತಕೋತ್ತರ ಪದವಿ ಪಡೆದರು. ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...