Homeಮುಖಪುಟಬೇಂದ್ರೆ 125; ಬೇಂದ್ರೆ ಮತ್ತು ಬೆಳಗಾವಿ : ಕನ್ನಡ ಮತ್ತು ಮರಾಠಿ ಮನಸ್ಸುಗಳ ನಡುವೆ ಸೌಹಾರ್ದ...

ಬೇಂದ್ರೆ 125; ಬೇಂದ್ರೆ ಮತ್ತು ಬೆಳಗಾವಿ : ಕನ್ನಡ ಮತ್ತು ಮರಾಠಿ ಮನಸ್ಸುಗಳ ನಡುವೆ ಸೌಹಾರ್ದ ಸೇತುವೆ

- Advertisement -
- Advertisement -

ಮರಾಠಿ ಮಾತೃಭಾಷೆಯಾಗಿದ್ದರೂ ಕನ್ನಡ ಸಾಹಿತ್ಯದಲ್ಲಿ ಅತ್ಯುನ್ನತ ಸ್ಥಾನ ಮತ್ತು ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದುಕೊಂಡ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ-ಮರಾಠಿ ಸಾಹಿತ್ಯದ ನಡುವೆ ಪ್ರಮುಖ ಕೊಂಡಿಗಳಲ್ಲಿ ಒಬ್ಬರು. ಪುಣೆಯ ಫರ್ಗೂಸನ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಬೇಂದ್ರೆಯವರಿಗೆ ಪುನೇರಿ ಎನ್ನಬೇಕೋ? ಕಾನಡಿ ಎನ್ನಬೇಕೋ? ಯಾಕೆಂದರೆ ಕನ್ನಡದ ವರಕವಿ ಅವರು. ಈ ಹಿನ್ನೆಲೆಯಲ್ಲಿ, ಇವತ್ತಿನ ಕನ್ನಡ-ಮರಾಠಿ ಅಥವಾ ಕರ್ನಾಟಕ-ಮಹಾರಾಷ್ಟ್ರ ಅಥವಾ ಬೆಳಗಾವಿ ಗಡಿ ವಿವಾದವನ್ನು ಯಾವ ರೀತಿ ಗ್ರಹಿಸಬೇಕು ಅನ್ನುವ ಪ್ರಶ್ನೆ ಎದ್ದೇಳುತ್ತದೆ. ಭಾಷೆ ಹಾಗೂ ಮನಸ್ಸಿಗೆ ಯಾವುದೇ ಗಡಿ ಇಲ್ಲವೆಂಬುವುದಕ್ಕೆ ಬೇಂದ್ರ್ರೆಯವರಿಗಿಂತ ಉತ್ತಮ ಉದಾಹರಣೆ ಬೇಕೇ? ಪೂನಾದ ಕಾಮರ್ಸ ಕಾಲೇಜಿನಲ್ಲಿ 1942-1943ರ ನಡುವೆ ಮತ್ತು 1994ರಲ್ಲಿ ಸೊಲ್ಲಾಪುರದ ಡಿ.ಎ.ವಿ. ಕಾಲೇಜಿನಲ್ಲಿ ಕನ್ನಡ ಅಧ್ಯಾಪಕ ವೃತ್ತಿ ಮಾಡಿದರು. ಇವರ ಮೂಲ ವಂಶಜರು ಮಹಾರಾಷ್ಟ್ರದ ರತ್ನಾಗಿರಿಯಿಂದ ಬಂದು ಕರ್ನಾಟಕದ ಶಿರಹಟ್ಟಿಯಲ್ಲಿ ನೆಲೆಸಿದರು. ಹೀಗೆ ಕನ್ನಡ-ಮರಾಠಿ ದ್ವಿಭಾಷಾ ಪರಿಸರದಲ್ಲಿ ಬೆಳೆದ ಕನ್ನಡದ ಶ್ರೇಷ್ಠ ಕವಿಗಳಲ್ಲಿ ಒಬ್ಬರಾದ ಬೇಂದ್ರೆಯವರ ಮೇಲೆ ದ್ವಿಸಂಸ್ಕೃತಿಗಳ ಪ್ರಭಾವ ವಿಫುಲವಾಗಿದೆ ಎನ್ನುವುದನ್ನು ಅಲ್ಲಗಳೆಯುವುದಿಲ್ಲ.

1929ರಲ್ಲಿ ಬೆಳಗಾವಿಯಲ್ಲಿ ಮಾಸ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ’ಹಕ್ಕಿ ಹಾರುತಿದೆ ನೋಡಿದಿರಾ’ ಕವನವನ್ನು ವಾಚಿಸಿದಾಗ, ಸಭಿಕರೆಲ್ಲಾ ಮಂತ್ರಮುಗ್ಧರಾಗಿದ್ದು ಈಗ ದಂತಕಥೆ. ಆಗ ಬೇಂದ್ರೆಯವರಿಗೆ ಕೇವಲ ಮೂವತ್ಮೂರು ವರ್ಷ.

1930ರಲ್ಲಿ ಮೊದಲ ಬಾರಿಗೆ ಜಯ ಕರ್ನಾಟಕ ಪತ್ರಿಕೆಯಲ್ಲಿ ಅವರ ’ನರಬಲಿ’ ಕವನ ಪ್ರಕಟವಾಯಿತು. ತದನಂತರದಲ್ಲಿ 1932ರಲ್ಲಿ ಪ್ರಕಟವಾದ ’ಗರಿ’ ಕವನ ಸಂಕಲನದಲ್ಲಿ ’ನರಬಲಿ’ ಕವನ ಮರುಪ್ರಕಟವಾಯಿತು. ’ನರಬಲಿ’ ಕವನ ಪುಸ್ತಕ ರೂಪದಲ್ಲಿ ಬಂದಂತಹ ಸಂದರ್ಭದಲ್ಲಿ, ಅಂದಿನ ಸರಕಾರ ಬೇಂದ್ರೆ ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಿ, (ಬಂಗಾಳದಲ್ಲಿ ನಡೆದ ಮಾರಣಹೋಮವನ್ನು ಕುರಿತು ಬರೆದದ್ದು ’ನರಬಲಿ’ ಕವಿತೆ) ಅಂದಿನ ಸರಕಾರ ಅವರನ್ನು 3 ತಿಂಗಳ ಕಾಲ ಬೆಳಗಾವಿಯ ಹಿಂಡಲಗಿ ಸೆರೆಮನೆಗೆ ಕಳುಹಿಸಿತ್ತು ಹಾಗೂ ಬಿಡುಗಡೆಯ ನಂತರವೂ ಬೇಂದ್ರೆಯವರಿಗೆ ಯಾರೂ ನೌಕರಿ ಕೊಡಬಾರದೆನ್ನುವ ಆದೇಶ ಹೊರಡಿಸಿತ್ತು. 1932ರ ಈ ಐತಿಹಾಸಿಕ ಘಟನೆಯ ಕುರಿತು ಹೆಳವನಿದ್ದಲ್ಲಿ ಹೊಳೆ ಬಂದಿತು (ಸಖೀಗೀತ) ಎಂದು ನೆನಪಿಸಿಕೊಂಡಿದ್ದಾರೆ.

ಬೇಂದ್ರೆಯವರ ಕೃತಿಗಳು ಕನ್ನಡದಲ್ಲಿ ನಾಟಕಗಳನ್ನು, ವಿಮರ್ಶಾ ಗ್ರಂಥಗಳನ್ನು, ಕವನ ಸಂಕಲನಗಳನ್ನು ಒಳಗೊಂಡಿವೆ; ಕೆ. ವಿ. ಅಯ್ಯರ್ ಅವರ ’ಶಾಂತಲಾ’ ಕಾದಂಬರಿಯನ್ನು ಮರಾಠಿಗೆ ಅನುವಾದಿಸಿದ್ದಾರೆ. ಗೀತಾ ಜಾಗರಣ(ವ್ಯಾಖ್ಯಾನ), ವಿಠ್ಠಲ ಪಾಂಡುರಂಗ (ಕವನ ಸಂಕಲನ), ವಿಠ್ಠಲ ಸಂಪ್ರದಾಯ (ವ್ಯಾಖ್ಯಾನ), ಸಂತ ಮಹತಾಂಚಾ ಪೂರ್ಣ ಶಂಭು ವಿಠ್ಠಲ (ವ್ಯಾಖ್ಯಾನ), ಸಂವಾದ ಕವಿತಾ ಸಂಗ್ರಹಗಳು ಮರಾಠಿಯಲ್ಲಿರುವ ಬೇಂದ್ರೆ ಅವರ ಇತರ ಕೃತಿಗಳು. ಮಹಾರಾಷ್ಟ್ರದಿಂದ ಹೊರಡುವ ’ಸನ್ಮತಿ’ ಎನ್ನುವ ಮರಾಠಿ ಭಾಷೆಯ ಪತ್ರಿಕೆಯಲ್ಲಿಯೂ ಬೇಂದ್ರೆಯವರು ಲೇಖನಗಳನ್ನು ಬರೆದಿದ್ದುಂಟು. 1965ರಲ್ಲಿ ಮರಾಠಿಯಲ್ಲಿ ರಚಿಸಿದ ’ಸಂವಾದ’ ಕೃತಿಗೆ ಕೇಳ್ಕರ್ ಬಹುಮಾನ ಪಡೆದಿದ್ದಾರೆ.

ಮಹಾಜನ ಆಯೋಗ ವರದಿಯ ಸಮಯ ಹಾಗೂ 1970ರಲ್ಲಿ ಬೆಳಗಾವಿಯಲ್ಲಿ ಗಡಿ ತಗಾದೆ ತಾರಕಕ್ಕೇರಿದಾಗ, ಕೆಲ ಪುಂಡರು ಧಾರವಾಡದಲ್ಲಿರುವ (ಇವಾಗಲೂ ಬೆಳಗಾವಿ ರಸ್ತೆಯಲ್ಲಿದೆ) ’ಮರಾಠಿ ಮಂಡಳ’ ಎಂಬ ಕಟ್ಟಡಕ್ಕೆ ಬೆಂಕಿ ಹಚ್ಚಿದಾಗ ಬೇಂದ್ರೆಯವರು ಅದನ್ನು ಖಂಡಿಸಿದ್ದಲ್ಲದೇ, ’ನಮ್ಮ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸೀಮಾಭೂಮಿ ರುದ್ರ ಭೂಮಿಯಾಗದೇ ಶಿವಭೂಮಿಯಾಗಬೇಕು’ ಅನ್ನುವ ಮಾತನ್ನು ಅವರು ಆಡಿದ್ದು, ಅಂದಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ರುದ್ರ ಅಂದರೆ ಭಯಂಕರ ಹಾಗೂ ಶಿವ ಅಂದರೆ ಸೌಮ್ಯ, ಒಳ್ಳೆಯದು ಎಂಬ ಹಿನ್ನೆಲೆಯಲ್ಲಿ ಅವರ ಮಾತನ್ನು ಇವತ್ತು ಮರಾಠಿ ಹಾಗೂ ಕನ್ನಡ ಬಂಧುಗಳು ಗ್ರಹಿಸಬಹುದಾಗಿದೆ.

1971 ಸಪ್ಟೆಂಬರ್ 12ರಲ್ಲಿ ಬೆಳಗಾವಿಯ ಆಝಾದ ಟಾಕೀಸ್‌ನಲ್ಲಿ (ಇವಾಗ ಈ ಟಾಕೀಸ್ ಬಂದ್ ಆಗಿದೆ) ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅಂದಿನ ನಗರಸಭಾಧ್ಯಕ್ಷ ಶಿವಾಜಿರಾವ್ ಕಾಕತಕರ್ ಅವರು ಪ್ರೋತ್ಸಾಹ ನೀಡಿದ್ದನ್ನು ಬೆಳಗಾವಿ ಜನತೆ ನೆನಪಿಸಿಕೊಳ್ಳುತ್ತಿರುತ್ತದೆ. ಆ ಕಾರ್ಯಕ್ರಮದ ಸಮಾರೋಪದ ಅತಿಥಿ ಬೇಂದ್ರೆಯವರಾಗಿದ್ದರು.

ಇವತ್ತಿನ ಸಂದರ್ಭದಲ್ಲಿ ಬೆಳಗಾವಿಯನ್ನು ಕೇಂದ್ರವಾಗಿಸಿಕೊಂಡು ಗಡಿ ವಿವಾದಕ್ಕೆ ಮತ್ತೆ ಕಿಡಿ ಹಚ್ಚುವ ಕೆಲಸ ಆಗಾಗ್ಗೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಬೇಂದ್ರೆಯಂತಹ ಕವಿಗೆ ಮರಾಠಿ ಹಾಗೂ ಕನ್ನಡ ಪರಿಸರಗಳು ವೈರತ್ವವಾಗಿ ಕಾಣಲಿಲ್ಲ. ಅದೇ ರೀತಿ ಓದುಗ ರಸಿಕರಿಗೂ ಬೇಂದ್ರೆಯಾಗಲಿ ಅಥವಾ ಕನ್ನಡ-ಮರಾಠಿ ಸಾಹಿತ್ಯದಲ್ಲಾಗಲಿ, ವಾತಾವರಣದಲ್ಲಾಗಲಿ ವೈರ ಭಾವ ಕಾಣಲಿಲ್ಲ.

ಹಾಗೆಯೇ ಪೂನಾದ ಚಿತಳೆಯ ಬಾಕರವಡಿ ಹಾಗೂ ಧಾರವಾಡದ ಬಾಬುಸಿಂಗ ಪೇಡಾದ ಕಥೆ ಭಿನ್ನವಾಗಿಲ್ಲ. ವಂಶ ಪಾರಂಪರ್‍ಯವಾಗಿ ಮೂರ್‍ನಾಲ್ಕು ಪೀಳಿಗೆಗಳು ನಡೆಸಿಕೊಂಡು ಬರುತ್ತಿರುವ ಈ ತಿಂಡಿ ತಿನಿಸುಗಳಿಗೆ ಯಾವ ಗಡಿ ಇಲ್ಲ. ಬಾಕರವಡಿ ಹಾಗೂ ಪೇಡಾದ ನಡುವೆ ಬೆಳೆದ ಬೇಂದ್ರೆ ಕನ್ನಡಿಗರಿಗೆಷ್ಟೋ ಅಷ್ಟೇ ಮರಾಠಿಗರಿಗೂ ಪ್ರಿಯವಾದ ಕವಿ.

2021ನೇ ಸಾಲಿನ ಅಂಬಿಕಾತನಯದತ್ತ ಪ್ರಶಸ್ತಿಗೆ ಭಾಜನರಾದ ಪ್ರೊ ಎಚ್.ಎಸ್. ಶಿವಪ್ರಕಾಶ್ ಅವರು ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಬರೆದುಕೊಂಡಂತೆ: “ನನ್ನ ವ್ಯಾವಸ್ಥೆಯಲ್ಲಿ ಕಾವ್ಯ ಕಸುಬಿನ ಹಲವು ಗುಟ್ಟುಗಳನ್ನು ನಾನು ಕಲಿತದ್ದು ಬೇಂದ್ರೆ ಕಾವ್ಯದ ಮುಖೇಣ.” ಹೀಗೆ ಕನ್ನಡದ ಹಲವು ಹಿರಿಯ ಹಾಗೂ ಕಿರಿಯ ಕವಿಗಳಿಗೆ ಕನ್ನಡದ ವರಕವಿಯ ಪ್ರಭಾವವಾಗಿರುವುದನ್ನು ಅಲ್ಲಗಳೆಯುವಂತಿಲ್ಲ.

ಅವರೊಬ್ಬ ’ಮರಾಠಿ ಮಾನುಸ್ ಅಂದು ಕನ್ನಡದ ಯಾವ ಮನಸ್ಸುಗಳೂ ಅವರನ್ನು ದೂರ ಇಟ್ಟಿಲ್ಲ. ಇದು ಇವತ್ತಿನ ಸೀಮಾಭೂಮಿ ಬೆಳಗಾವಿ ಜನರ (ಕನ್ನಡ ಹಾಗೂ ಮರಾಠಿ) ಸ್ಥಿತಿ ಹಾಗೂ ಮನಸ್ಥಿತಿಯೂ ಹೌದು. ಶತಮಾನ ಕಳೆದ ಮರಾಠಿ ಮಾತೃಭಾಷಿಕ ಕನ್ನಡದ ವರಕವಿ ಬೇಂದ್ರೆಯನ್ನು ಒಪ್ಪಿ ಅಪ್ಪಿಕೊಂಡವರ ಹಾಗೂ ಅರ್ಧ ಶತಮಾನ ಕಳೆದರೂ ಮಹಾಜನ ವರದಿಯನ್ನು ಒಪ್ಪದವರ ನಡುವೆ ಸಿಲುಕಿ ಬೇಯುತ್ತಿರುವುದು ಕನ್ನಡ-ಮರಾಠಿ ಎನ್ನುವ ಭೇದಭಾವವಿಲ್ಲದ ಬದುಕುತ್ತಿರುವ ಮುಗ್ಧ ಮನಸ್ಸುಗಳೇ ಹೊರತು ರಾಜಕಾರಣಿಗಳಲ್ಲ.

ಶೋಭಾ ನಾಯಕ್

ಶೋಭಾ ನಾಯಕ್
ಶೋಭಾ ನಾಯಕ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರು. ೬ ಸುವರ್ಣ ಪದಕಗಳೊಂದಿಗೆ ಕರ್ನಾಟಕ ವಿ.ವಿ ಸ್ನಾತಕೋತ್ತರ ಪದವಿ ಪಡೆದರು. ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...