Homeಮುಖಪುಟಬಂಗಾಳ ಬಜೆಟ್ ಅಧಿವೇಶನ | ವಿಪಕ್ಷ ನಾಯಕ ಸೇರಿ 4 ಬಿಜೆಪಿ ಶಾಸಕರು ಅಮಾನತು

ಬಂಗಾಳ ಬಜೆಟ್ ಅಧಿವೇಶನ | ವಿಪಕ್ಷ ನಾಯಕ ಸೇರಿ 4 ಬಿಜೆಪಿ ಶಾಸಕರು ಅಮಾನತು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ಮೂವರು ಬಿಜೆಪಿ ಶಾಸಕರನ್ನು ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಸ್ಪೀಕರ್ ಸೋಮವಾರ ಬಜೆಟ್ ಅಧಿವೇಶನದಿಂದ ಅಮಾನತುಗೊಳಿಸಿದ್ದಾರೆ. ಇದೇ ವೇಳೆ ತಾವು ಮತ್ತು ಇತರ ಕೆಲವು ಪಕ್ಷದ ಶಾಸಕರು ಮಂಡಿಸಿದ ನಿಲುವಳಿ ಸೂಚನೆಯ ಮೇಲಿನ ಚರ್ಚೆಗೆ ಸ್ಪೀಕರ್ ನಿರಾಕರಿಸಿದ್ದನ್ನು ಪ್ರತಿಭಟಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದಾರೆ.

ಸುವೇಂದು ಅಧಿಕಾರಿ ಹೊರತುಪಡಿಸಿ ಬಿಜೆಪಿ ಅಗ್ನಿಮಿತ್ರ ಪಾಲ್, ಬಂಕಿಮ್ ಘೋಷ್ ಮತ್ತು ಬಿಸ್ವನಾಥ್ ಕರಕ್ ಅವರನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಪಶ್ಚಿಮ ಬಂಗಾಳ ವಿಧಾನಸಭೆಯ ಈ ಅಧಿವೇಶನದ ಅಂತ್ಯದವರೆಗೆ ಅಥವಾ 30 ದಿನಗಳವರೆಗೆ ಅಮಾನತುಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿಲುವಳಿ ಸೂಚನೆಯ ಕುರಿತು ಚರ್ಚೆ ನಡೆಸಲು ಸ್ಪೀಕರ್ ನಿರಾಕರಿಸಿದ ಕಾರಣಕ್ಕೆ ಸುವೇಂಧು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದು, ವ್ಯವಹಾರ ಪತ್ರಗಳನ್ನು ಹರಿದು ಎಸೆದಿದ್ದಾರೆ. ಅದರ ನಂತರ ಬಿಜೆಪಿ ಶಾಸಕರು ಸದನದಿಂದ ಹೊರನಡೆದಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸರಸ್ವತಿ ಪೂಜೆಯನ್ನು ಆಯೋಜಿಸುವುದಕ್ಕೆ ರಾಜ್ಯದ ಕೆಲವು ಸ್ಥಳಗಳಲ್ಲಿ ಬೆದರಿಕೆ ಇದೆ ಎಂದು ಆರೋಪಿಸಿ ಬಿಜೆಪಿ ಈ ನಿಲುವಳಿ ಸೂಚನೆಯನ್ನು ಮಂಡಿಸಿತ್ತು.

ಘಟನೆ ನಂತರ ವಿಧಾನಸಭೆಯ ಹೊರಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಬಿಜೆಪಿ ಶಾಸಕ ಅತ್ನಿಮಿತ್ರ ಪಾಲ್, ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ಕೋಲ್ಕತ್ತಾದ ಕಾನೂನು ಕಾಲೇಜು ಸೇರಿದಂತೆ ರಾಜ್ಯದ ಕೆಲವು ಸ್ಥಳಗಳಲ್ಲಿ ಪೊಲೀಸ್ ರಕ್ಷಣೆಯೊಂದಿಗೆ ಸರಸ್ವತಿ ಪೂಜೆಯನ್ನು ನಡೆಸಬೇಕಾಯಿತು ಎಂದು ಹೇಳಿದ್ದಾರೆ.

ಸ್ಪೀಕರ್, ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ, ಒಬ್ಬ ಬಿಜೆಪಿ ಶಾಸಕರಿಗೆ ಪ್ರಸ್ತಾವನೆಯನ್ನು ಓದಲು ಅವಕಾಶ ನೀಡಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಅಗ್ನಿಮಿತ್ರ ಪಾಲ್ ಅವರು ಸದನದಲ್ಲಿ ಪ್ರಸ್ತಾವನೆಯನ್ನು ಓದಿದ ನಂತರ, ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಮತ್ತು ಫಲಕಗಳನ್ನು ಹಿಡಿದು ಪ್ರತಿಭಟಿಸಲು ಪ್ರಾರಂಭಿಸಿದರು. ಚುನಾವಣಾ ಲಾಭಕ್ಕಾಗಿ ಆಡಳಿತ ಟಿಎಂಸಿಯ ತುಷ್ಟೀಕರಣ ಎಂದು ಈ ವೇಳೆ ಆರೋಪಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯ ಸಚೇತಕ ನಿರ್ಮಲ್ ಘೋಷ್ ಅವರು ಬಿಜೆಪಿ ಶಾಸಕರ ಪ್ರತಿಭಟನಾ ಕೃತ್ಯಗಳು ಶಾಸಕಾಂಗ ಸಂಸ್ಕೃತಿಯ ಹೊರಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂಓದಿ:  ಮುಖ್ಯಮಂತ್ರಿ ನೇಮಿಸುವಲ್ಲಿ ವಿಳಂಬ; ದೆಹಲಿ ಆಳುವ ಮುಖ ಬಿಜೆಪಿಯಲ್ಲಿ ಇಲ್ಲ ಎಎಪಿ.

ಮುಖ್ಯಮಂತ್ರಿ ನೇಮಿಸುವಲ್ಲಿ ವಿಳಂಬ; ದೆಹಲಿ ಆಳುವ ಮುಖ ಬಿಜೆಪಿಯಲ್ಲಿ ಇಲ್ಲ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...