Homeಮುಖಪುಟಬಂಗಾಳ ಬಜೆಟ್ ಅಧಿವೇಶನ | ವಿಪಕ್ಷ ನಾಯಕ ಸೇರಿ 4 ಬಿಜೆಪಿ ಶಾಸಕರು ಅಮಾನತು

ಬಂಗಾಳ ಬಜೆಟ್ ಅಧಿವೇಶನ | ವಿಪಕ್ಷ ನಾಯಕ ಸೇರಿ 4 ಬಿಜೆಪಿ ಶಾಸಕರು ಅಮಾನತು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ಮೂವರು ಬಿಜೆಪಿ ಶಾಸಕರನ್ನು ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಸ್ಪೀಕರ್ ಸೋಮವಾರ ಬಜೆಟ್ ಅಧಿವೇಶನದಿಂದ ಅಮಾನತುಗೊಳಿಸಿದ್ದಾರೆ. ಇದೇ ವೇಳೆ ತಾವು ಮತ್ತು ಇತರ ಕೆಲವು ಪಕ್ಷದ ಶಾಸಕರು ಮಂಡಿಸಿದ ನಿಲುವಳಿ ಸೂಚನೆಯ ಮೇಲಿನ ಚರ್ಚೆಗೆ ಸ್ಪೀಕರ್ ನಿರಾಕರಿಸಿದ್ದನ್ನು ಪ್ರತಿಭಟಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದಾರೆ.

ಸುವೇಂದು ಅಧಿಕಾರಿ ಹೊರತುಪಡಿಸಿ ಬಿಜೆಪಿ ಅಗ್ನಿಮಿತ್ರ ಪಾಲ್, ಬಂಕಿಮ್ ಘೋಷ್ ಮತ್ತು ಬಿಸ್ವನಾಥ್ ಕರಕ್ ಅವರನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಪಶ್ಚಿಮ ಬಂಗಾಳ ವಿಧಾನಸಭೆಯ ಈ ಅಧಿವೇಶನದ ಅಂತ್ಯದವರೆಗೆ ಅಥವಾ 30 ದಿನಗಳವರೆಗೆ ಅಮಾನತುಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿಲುವಳಿ ಸೂಚನೆಯ ಕುರಿತು ಚರ್ಚೆ ನಡೆಸಲು ಸ್ಪೀಕರ್ ನಿರಾಕರಿಸಿದ ಕಾರಣಕ್ಕೆ ಸುವೇಂಧು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದು, ವ್ಯವಹಾರ ಪತ್ರಗಳನ್ನು ಹರಿದು ಎಸೆದಿದ್ದಾರೆ. ಅದರ ನಂತರ ಬಿಜೆಪಿ ಶಾಸಕರು ಸದನದಿಂದ ಹೊರನಡೆದಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸರಸ್ವತಿ ಪೂಜೆಯನ್ನು ಆಯೋಜಿಸುವುದಕ್ಕೆ ರಾಜ್ಯದ ಕೆಲವು ಸ್ಥಳಗಳಲ್ಲಿ ಬೆದರಿಕೆ ಇದೆ ಎಂದು ಆರೋಪಿಸಿ ಬಿಜೆಪಿ ಈ ನಿಲುವಳಿ ಸೂಚನೆಯನ್ನು ಮಂಡಿಸಿತ್ತು.

ಘಟನೆ ನಂತರ ವಿಧಾನಸಭೆಯ ಹೊರಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಬಿಜೆಪಿ ಶಾಸಕ ಅತ್ನಿಮಿತ್ರ ಪಾಲ್, ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ಕೋಲ್ಕತ್ತಾದ ಕಾನೂನು ಕಾಲೇಜು ಸೇರಿದಂತೆ ರಾಜ್ಯದ ಕೆಲವು ಸ್ಥಳಗಳಲ್ಲಿ ಪೊಲೀಸ್ ರಕ್ಷಣೆಯೊಂದಿಗೆ ಸರಸ್ವತಿ ಪೂಜೆಯನ್ನು ನಡೆಸಬೇಕಾಯಿತು ಎಂದು ಹೇಳಿದ್ದಾರೆ.

ಸ್ಪೀಕರ್, ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ, ಒಬ್ಬ ಬಿಜೆಪಿ ಶಾಸಕರಿಗೆ ಪ್ರಸ್ತಾವನೆಯನ್ನು ಓದಲು ಅವಕಾಶ ನೀಡಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಅಗ್ನಿಮಿತ್ರ ಪಾಲ್ ಅವರು ಸದನದಲ್ಲಿ ಪ್ರಸ್ತಾವನೆಯನ್ನು ಓದಿದ ನಂತರ, ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಮತ್ತು ಫಲಕಗಳನ್ನು ಹಿಡಿದು ಪ್ರತಿಭಟಿಸಲು ಪ್ರಾರಂಭಿಸಿದರು. ಚುನಾವಣಾ ಲಾಭಕ್ಕಾಗಿ ಆಡಳಿತ ಟಿಎಂಸಿಯ ತುಷ್ಟೀಕರಣ ಎಂದು ಈ ವೇಳೆ ಆರೋಪಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯ ಸಚೇತಕ ನಿರ್ಮಲ್ ಘೋಷ್ ಅವರು ಬಿಜೆಪಿ ಶಾಸಕರ ಪ್ರತಿಭಟನಾ ಕೃತ್ಯಗಳು ಶಾಸಕಾಂಗ ಸಂಸ್ಕೃತಿಯ ಹೊರಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂಓದಿ:  ಮುಖ್ಯಮಂತ್ರಿ ನೇಮಿಸುವಲ್ಲಿ ವಿಳಂಬ; ದೆಹಲಿ ಆಳುವ ಮುಖ ಬಿಜೆಪಿಯಲ್ಲಿ ಇಲ್ಲ ಎಎಪಿ.

ಮುಖ್ಯಮಂತ್ರಿ ನೇಮಿಸುವಲ್ಲಿ ವಿಳಂಬ; ದೆಹಲಿ ಆಳುವ ಮುಖ ಬಿಜೆಪಿಯಲ್ಲಿ ಇಲ್ಲ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...