Homeಚಳವಳಿ'ಆಟ ಶುರು - ಬಂಗಾಳದಲ್ಲಿ ಬಿಜೆಪಿ ತೊಲಗಿಸಿ': ರಾಕೇಶ್ ಟಿಕಾಯತ್ ಕರೆ

‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ದುರದೃಷ್ಟಕರ ಎಂದು ಕರೆದಿರುವ ರಾಕೇಶ್‌ ಟಿಕಾಯತ್, ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂಗಾಳದಾದ್ಯಂತ ಪ್ರಯಾಣಿಸುವುದಾಗಿ ಹೇಳಿದ್ದಾರೆ.

- Advertisement -
- Advertisement -

ಸುಮಾರು 110 ದಿನಗಳಿಂದ, ಐದು ಲಕ್ಷಕ್ಕೂ ಹೆಚ್ಚು ರೈತರು ದೆಹಲಿಯ ಗಡಿಗಳಲ್ಲಿ ತಮ್ಮ ಹಕ್ಕುಗಳಿಗಾಗಿ ಕುಳಿತು ಹೋರಾಡುತ್ತಿದ್ದಾರೆ. ಅಲ್ಲೆ ರಸ್ತೆ ಪಕ್ಕ ಶಾಶ್ವತ ಮನೆಗಳನ್ನು ನಿರ್ಮಿಸಿರುವ 5 ಲಕ್ಷಕ್ಕೂ ಹೆಚ್ಚು ಜನರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಬಿಜೆಪಿಗೆ ಚುನಾವಣಾ ಭಾಷೆ ಮಾತ್ರ ಅರ್ಥವಾಗುತ್ತದೆ. ಹಾಗಾಗಿ ಖೇಲಾ ಹೊಬೆ (ಆಟ ಶುರು) ಆರಂಭವಾಗಿದೆ, ಬಂಗಾಳದಲ್ಲಿ ಬಿಜೆಪಿ ತೊಲಗಿಸಿ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬಂಗಾಳ ಚುನಾವಣೆಯಲ್ಲಿಯೇ ತೀವ್ರ ಪೈಪೋಟಿ ಮತ್ತು ಕುತೂಹಲ ಹುಟ್ಟಿಸಿದರು ನಂದಿಗ್ರಾಮದಲ್ಲಿ ನಡೆದ ರೈತ ಮಹಾ ಪಂಚಾಯತ್‌ ಉದ್ದೇಶಿಸಿ ಮಾತನಾಡಿದ ಅವರು “ಇನ್ನು ಮುಂದೆ ಆಟ ಶುರುವಾಗಲಿದೆ ಎಂದು ಹೇಳುತ್ತಾ, ಬಂಗಾಳಿ ಭಾಷೆಯಲ್ಲಿ ಖೇಲಾ ಹೋಬ್ (ಗೇಮ್ ಆನ್) ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಮಹಾಪಂಚಾಯತ್‌ನಲ್ಲಿ ನೆರೆದಿದ್ದ ಜನಸಮೂಹ ಖೇಲಾ ಹೋಬ್ ಎಂದು ಘೋಷಣೆಗಳನ್ನು ಕೂಗಿ ಟಿಕಾಯತ್‌ ಮಾತಿಗೆ ಸಮ್ಮತಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

“ಇದು ಬಂಗಾಳದ ಜನರಿಗೆ ನನ್ನ ಸಂದೇಶವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಲೂಟಿ ಮಾಡಿದೆ. ಅವರಿಗೆ ಮತ ನೀಡಬೇಡಿ. ಬಿಜೆಪಿ ನಾಯಕರು ನಿಮ್ಮ ಬಳಿ ಮತ ಕೇಳಲು ಬಂದಾಗ, ಅವರಿಗೆ ನಮ್ಮ ಬೆಳೆಗಳಿಗೆ ಎಂಎಸ್‌ಪಿ ಯಾವಾಗ ನೀಡುತ್ತಿರಿ ಎಂದು ಪ್ರಶ್ನಿಸಿ” ಎಂದು ಕರೆ ನೀಡಿದ್ದಾರೆ.
ದೆಹಲಿ-ಉತ್ತರ ಪ್ರದೇಶ ಗಡಿಯಾದ ಗಾಝಿಪುರ್‌‌ ಗಡಿಯಲ್ಲಿ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಬೃಹತ್ ರೈತರ ಪ್ರತಿಭಟನೆಯನ್ನು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮುನ್ನಡೆಸುತ್ತಿದ್ದಾರೆ.

ಒಕ್ಕೂಟ ಸರ್ಕಾರದ ವಿರುದ್ಧ ಪ್ರಚಾರ ನಡೆಸಲು ಆರಂಭಿಸಿರುವ ರೈತರು ಇಂದು ಪಶ್ಚಿಮ ಬಂಗಾಳದಲ್ಲಿ ಮಹಾಪಂಚಾಯತ್‌ ನಡೆಸುತ್ತಿದ್ದಾರೆ. ರೈತ ಮುಖಂಡ ಟಿಕಾಯತ್‌ ಅವರನ್ನು ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ ಸಂಸದ ಡೋಲಾ ಸೇನ್ ಅವರು ಸ್ವಾಗತಿಸಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ದುರದೃಷ್ಟಕರ ಎಂದು ಕರೆದಿರುವ ರಾಕೇಶ್‌ ಟಿಕಾಯತ್, ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂಗಾಳದಾದ್ಯಂತ ಪ್ರಯಾಣಿಸುವುದಾಗಿ ಹೇಳಿದ್ದಾರೆ. ಆದರೆ, ಇಂತಹ ಪಕ್ಷಕ್ಕೆ ಮತ ನೀಡಿ ಎಂದು ಯಾರಿಗೂ ತಿಳಿಸುವುದಿಲ್ಲ ಎಂದು ಈ ಮೊದಲೇ ರೈತ ನಾಯಕರು ತಿಳಿಸಿದ್ದರು.

ಬಿಜೆಪಿ ವಿರುದ್ಧ ಪಂಚರಾಜ್ಯಗಳಲ್ಲೂ ಪ್ರಚಾರ ನಡೆಸುವುದಾಗಿ ಈಗಾಗಲೇ ರೈತರು ಪ್ರಕಟಿಸಿದ್ದಾರೆ. ಆದರೆ ಯಾವುದೇ ಪಕ್ಷದ ಪರವಾಗಿ ಮತ ಯಾಚನೆ ಮಾಡುವುದಿಲ್ಲ, ಪ್ರಚಾರ ನಡೆಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ, ಬಿಜೆಪಿಗೆ ಮತ ನೀಡದಂತೆ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...