Homeಮುಖಪುಟ’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

ಬಿಜೆಪಿ ಆಡಳಿತದ ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಅಸ್ತಿತ್ವದಲ್ಲಿದೆ ಎಂದು ಬಿಜೆಪಿ ನಾಯಕರೇ ಒಪ್ಪಿಕೊಂಡಿರುವುದು ಒಳ್ಳೆಯದು ಎಂದು ಟಿಎಂಸಿ ವ್ಯಂಗ್ಯವಾಡಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಮತ್ತು ಕ್ರಮೇಣ ಇದು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವ  ಉತ್ತರ ಪ್ರದೇಶ ಮತ್ತು ಬಿಹಾರ ಎರಡು ರಾಜ್ಯಗಳಲ್ಲಿ ಮಾಫಿಯಾ-ರಾಜ್ ಅಸ್ತಿತ್ವದಲ್ಲಿದೆ ಎಂದು ಒಪ್ಪಿಕೊಳ್ಳುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿದೆ.

‘ಪಶ್ಚಿಮ ಬಂಗಾಳವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ-ರಾಜ್‌ ವ್ಯವಸ್ಥೆಗೆ ಜಾರುತ್ತಿದೆ.  ಸ್ಟೆನ್‌ಗನ್ ಬಳಸಿ ಪೊಲೀಸ್ ಠಾಣೆಯ ಮುಂದೆಯೇ ಕೌನ್ಸಿಲರ್‌ನನ್ನು ಗುಂಡಿಕ್ಕಿ ಕೊಂದಿದ್ದು ನಾಚಿಕೆಗೇಡಿನ ಘಟನೆ’ ಎಂದು ಘೋಷ್‌ ಹೇಳಿದ್ದರು.

ಉತ್ತರ 24 ಪರಗಣ ಜಿಲ್ಲೆಯ ತಿತಾಗರ್‌ನಲ್ಲಿ ಬಿಜೆಪಿ ನಾಯಕ ಮನೀಶ್ ಶುಕ್ಲಾ‍ ಅವರನ್ನು ಭಾನುವಾರ ಇಬ್ಬರು ಬೈಕ್‌ನಲ್ಲಿ ಬಂದ ದುರ್ಷ್ಕಮಿಗಳು ಗುಂಡಿಟ್ಟು ಕೊಂದಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

“ದಿನ ಕಳೆದಂತೆ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ 120 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹತರಾಗಿದ್ದಾರೆ. ಇಂತಹ ಅರಾಜಕ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಯುತ ಮತದಾನ ಸಾಧ್ಯವೇ..?’ ಎಂದು ಘೋಷ್ ಪ್ರಶ್ನಿಸಿದ್ದಾರೆ. ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಆರೋಪಕ್ಕೆ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು ಘೋಷ್ ಅವರ ಟೀಕೆಗಳನ್ನು ಅಪಹಾಸ್ಯ ಮಾಡಿದೆ.

“ಬಿಜೆಪಿ ಆಡಳಿತದ ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಅಸ್ತಿತ್ವದಲ್ಲಿದೆ ಎಂದು ಅವರು ಒಪ್ಪಿಕೊಂಡಿರುವುದು ಒಳ್ಳೆಯದು. ಒಮ್ಮೆಯಾದರೂ ಅವರು ಸತ್ಯವನ್ನು ಮಾತನಾಡಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಟಿಎಂಸಿಯ ಹಿರಿಯ ಮುಖಂಡ ಮತ್ತು ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.

ಇದೇ ವಿಷಯಕ್ಕೆ ಟ್ವೀಟ್ ಮಾಡಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ’ ದಿಲೀಪ್ ಘೋಷ್‌ ನಿಮಗೆ ತುಂಬಾ ತುಂಬಾ ಧನ್ಯವಾದಗಳು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಬಿಹಾರದ ನಿತೀಶ್ ಕುಮಾರ್ ಸರ್ಕಾರದಲ್ಲಿ ಮಾಫಿಯಾ ರಾಜ್ ನಡೆಯುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದ’ ಎಂದಿದ್ದಾರೆ.


ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...