HomeUncategorizedಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

ಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

- Advertisement -
- Advertisement -

ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಬಂಕುರಾ ಜಿಲ್ಲೆಯ ನಿಧಿರಾಂಪುರ ಗ್ರಾಮದಲ್ಲಿ ಅವರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ನಾಯಕ ಶುಭದೀಪ್ ಮಿಶ್ರಾ ಅಲಿಯಾಸ್ ದೀಪು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅವರನ್ನು ಕೊಲೆ ಮಾಡಿ ನಂತರ ಮರಕ್ಕೆ ನೇಣು ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನೂ ಆರಂಭಿಸಿದರು. ವೈಯಕ್ತಿಕ ಕಲಹದಿಂದ ಈ ಘಟನೆ ನಡೆದಿದೆಯೇ ಅಥವಾ ರಾಜಕೀಯ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಮಿಶ್ರಾ ಅವರು ಅನೈತಿಕ ಸಂಬಂಧ ಹೊಂದಿದ್ದ ಗ್ರಾಮದ ವಿವಾಹಿತ ಮಹಿಳೆಯ ಕುಟುಂಬದವರು ಅವರನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬ ಹೇಳಿಕೊಂಡಿದೆ.

”ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಆಜ್ಞೆಯ ಮೇರೆಗೆ ಮಿಶ್ರಾ ಅವರನ್ನು ಕೊಲೆ ಮಾಡಲಾಗಿದೆ” ಎಂದು ಬಿಜೆಪಿ ಆರೋಪಿಸಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದೆ.

ಈ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ”ಟಿಎಂಸಿ ಗೂಂಡಾಗಳು ಸುಭದೀಪ್ ಮಿಶ್ರಾ ಅವರನ್ನು ಹತ್ಯೆಗೈದು ಕೈಗಳನ್ನು ಕಟ್ಟಿ ಮರಕ್ಕೆ ನೇತು ಹಾಕಿದ್ದಾರೆ. ಬಂಕುರಾ ಜಿಲ್ಲೆಯ ಸುಭದೀಪ್ ಮಿಶ್ರಾ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು, 2023ರ ಪಂಚಾಯತ್ ಚುನಾವಣೆಯಲ್ಲಿ ನಿಧಿರಾಂಪುರದಿಂದ ಸಾಲ್ತೋರಾ ವಿಧಾನಸಭಾ ಕ್ಷೇತ್ರದ ಗಂಗಾಜಲಘಾಟಿ ಬ್ಲಾಕ್‌ನ ಲೋಟಿಯಬೋನಿ ಆಂಚಲ್‌ನಲ್ಲಿ ಸ್ಪರ್ಧಿಸಿದ್ದರು. ಟಿಎಂಸಿ ಕಳ್ಳರು ಮತ್ತು ಗೂಂಡಾಗಳು ಅವರ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಭ್ರಷ್ಟಾಚಾರದ ವಿರುದ್ಧದ ನಿಲುವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಅವರನ್ನು ಹತ್ಯೆ ಮಾಡಲಾಗಿದೆ” ಎಂದು ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

”ಇದೊಂದು ಕೊಲೆ. ಶವದ ವಿಡಿಯೋವನ್ನು ಪೋಸ್ಟ್ ಮಾಡಿದ್ದೇನೆ, ಅದರಲ್ಲಿ ಮುಖವನ್ನು ಮಸುಕುಗೊಳಿಸಲಾಗಿದೆ. ಅವನ ಕೈಗಳನ್ನು ಕಟ್ಟಿಹಾಕಲಾಗಿದೆ ಎಂದು ಸ್ಪಷ್ಟವಾಗಿ ತೋರಿಸಲಾಗಿದೆ. ಯಾರೂ ತಮ್ಮ ಕೈಗಳನ್ನು ಕಟ್ಟಿದ ನಂತರ ಮರಕ್ಕೆ ನೇಣು ಹಾಕಿಕೊಳ್ಳಲು ಸಾಧ್ಯವಿಲ್ಲ. ಅವರ ಕೈಗಳನ್ನು ಕಟ್ಟಿರುವುದು ಸ್ಪಷ್ಟವಾಗಿ ಕಾಣುತ್ತದೆ. ಅವರ ಕೈಗಳನ್ನು ಕಟ್ಟಿಹಾಕಿ ನಂತರ ಮರಕ್ಕೆ ನೇಣು ಹಾಕಲಾಯಿತು.ಇದು ರಾಜಕೀಯ ಕೊಲೆ ಎಂದು ನಾವು ಭಾವಿಸುತ್ತೇವೆ. ಕುಟುಂಬದ ಬೇಡಿಕೆಯನ್ನು ನಾವು ಒಪ್ಪುತ್ತೇವೆ ಮತ್ತು ನಾವು ಕೂಡ ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ” ಎಂದು ಅಧಿಕಾರಿ  ಪೋಸ್ಟ್ ಮಾಡಿದ್ದಾರೆ.

ಅಧಿಕಾರಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡಲು ಹೋಗುತ್ತಿದೆ ಹೇಳಿದೆ.

ತೃಣಮೂಲದ ಹಿರಿಯ ನಾಯಕ ಹಾಗೂ ಸಂಪುಟ ಸಚಿವ ಶಶಿ ಪಂಜ ಸುದ್ದಿಗಾರರೊಂದಿಗೆ ಮಾತನಾಡಿ, ”ಇಲ್ಲಿ ಬಿಜೆಪಿಯ ಪಾತ್ರವೇನು? ಅದು ಬಿಜೆಪಿ ಬೆಂಬಲಿಗ ಅಥವಾ ಟಿಎಂಸಿ ಬೆಂಬಲಿಗರಾಗಿರಬಹುದು, ಆದರೆ ಕುಟುಂಬವು ಏನು ಹೇಳುತ್ತದೆ ಎಂಬುದನ್ನು ನಾವು ನೋಡಬೇಕು. ಕುಟುಂಬ ಸದಸ್ಯರು ಇನ್ನೊಬ್ಬರತ್ತ ಬೆರಳು ತೋರಿಸುತ್ತಿದ್ದಾರೆ. ವೈಯಕ್ತಿಕ ಸಮಸ್ಯೆ ಈ ಸಾವಿಗೆ ಕಾರಣವಾಯಿತು ಎಂದು ಹೇಳುತ್ತಿದ್ದಾರೆ,  ಈ ಸಾವು ಸಂಭವಿಸಿದ ಕೆಲವೇ ಕ್ಷಣದಲ್ಲಿ ಬಿಜೆಪಿ ಹೋರಾಟಕ್ಕೆ ಧುಮುಕುತ್ತದೆ, ಇದು ರಣಹದ್ದು ರಾಜಕೀಯ” ಎಂದು ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....