HomeUncategorizedಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

ಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

- Advertisement -
- Advertisement -

ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಬಂಕುರಾ ಜಿಲ್ಲೆಯ ನಿಧಿರಾಂಪುರ ಗ್ರಾಮದಲ್ಲಿ ಅವರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ನಾಯಕ ಶುಭದೀಪ್ ಮಿಶ್ರಾ ಅಲಿಯಾಸ್ ದೀಪು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅವರನ್ನು ಕೊಲೆ ಮಾಡಿ ನಂತರ ಮರಕ್ಕೆ ನೇಣು ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನೂ ಆರಂಭಿಸಿದರು. ವೈಯಕ್ತಿಕ ಕಲಹದಿಂದ ಈ ಘಟನೆ ನಡೆದಿದೆಯೇ ಅಥವಾ ರಾಜಕೀಯ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಮಿಶ್ರಾ ಅವರು ಅನೈತಿಕ ಸಂಬಂಧ ಹೊಂದಿದ್ದ ಗ್ರಾಮದ ವಿವಾಹಿತ ಮಹಿಳೆಯ ಕುಟುಂಬದವರು ಅವರನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬ ಹೇಳಿಕೊಂಡಿದೆ.

”ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಆಜ್ಞೆಯ ಮೇರೆಗೆ ಮಿಶ್ರಾ ಅವರನ್ನು ಕೊಲೆ ಮಾಡಲಾಗಿದೆ” ಎಂದು ಬಿಜೆಪಿ ಆರೋಪಿಸಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದೆ.

ಈ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ”ಟಿಎಂಸಿ ಗೂಂಡಾಗಳು ಸುಭದೀಪ್ ಮಿಶ್ರಾ ಅವರನ್ನು ಹತ್ಯೆಗೈದು ಕೈಗಳನ್ನು ಕಟ್ಟಿ ಮರಕ್ಕೆ ನೇತು ಹಾಕಿದ್ದಾರೆ. ಬಂಕುರಾ ಜಿಲ್ಲೆಯ ಸುಭದೀಪ್ ಮಿಶ್ರಾ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು, 2023ರ ಪಂಚಾಯತ್ ಚುನಾವಣೆಯಲ್ಲಿ ನಿಧಿರಾಂಪುರದಿಂದ ಸಾಲ್ತೋರಾ ವಿಧಾನಸಭಾ ಕ್ಷೇತ್ರದ ಗಂಗಾಜಲಘಾಟಿ ಬ್ಲಾಕ್‌ನ ಲೋಟಿಯಬೋನಿ ಆಂಚಲ್‌ನಲ್ಲಿ ಸ್ಪರ್ಧಿಸಿದ್ದರು. ಟಿಎಂಸಿ ಕಳ್ಳರು ಮತ್ತು ಗೂಂಡಾಗಳು ಅವರ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಭ್ರಷ್ಟಾಚಾರದ ವಿರುದ್ಧದ ನಿಲುವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಅವರನ್ನು ಹತ್ಯೆ ಮಾಡಲಾಗಿದೆ” ಎಂದು ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

”ಇದೊಂದು ಕೊಲೆ. ಶವದ ವಿಡಿಯೋವನ್ನು ಪೋಸ್ಟ್ ಮಾಡಿದ್ದೇನೆ, ಅದರಲ್ಲಿ ಮುಖವನ್ನು ಮಸುಕುಗೊಳಿಸಲಾಗಿದೆ. ಅವನ ಕೈಗಳನ್ನು ಕಟ್ಟಿಹಾಕಲಾಗಿದೆ ಎಂದು ಸ್ಪಷ್ಟವಾಗಿ ತೋರಿಸಲಾಗಿದೆ. ಯಾರೂ ತಮ್ಮ ಕೈಗಳನ್ನು ಕಟ್ಟಿದ ನಂತರ ಮರಕ್ಕೆ ನೇಣು ಹಾಕಿಕೊಳ್ಳಲು ಸಾಧ್ಯವಿಲ್ಲ. ಅವರ ಕೈಗಳನ್ನು ಕಟ್ಟಿರುವುದು ಸ್ಪಷ್ಟವಾಗಿ ಕಾಣುತ್ತದೆ. ಅವರ ಕೈಗಳನ್ನು ಕಟ್ಟಿಹಾಕಿ ನಂತರ ಮರಕ್ಕೆ ನೇಣು ಹಾಕಲಾಯಿತು.ಇದು ರಾಜಕೀಯ ಕೊಲೆ ಎಂದು ನಾವು ಭಾವಿಸುತ್ತೇವೆ. ಕುಟುಂಬದ ಬೇಡಿಕೆಯನ್ನು ನಾವು ಒಪ್ಪುತ್ತೇವೆ ಮತ್ತು ನಾವು ಕೂಡ ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ” ಎಂದು ಅಧಿಕಾರಿ  ಪೋಸ್ಟ್ ಮಾಡಿದ್ದಾರೆ.

ಅಧಿಕಾರಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡಲು ಹೋಗುತ್ತಿದೆ ಹೇಳಿದೆ.

ತೃಣಮೂಲದ ಹಿರಿಯ ನಾಯಕ ಹಾಗೂ ಸಂಪುಟ ಸಚಿವ ಶಶಿ ಪಂಜ ಸುದ್ದಿಗಾರರೊಂದಿಗೆ ಮಾತನಾಡಿ, ”ಇಲ್ಲಿ ಬಿಜೆಪಿಯ ಪಾತ್ರವೇನು? ಅದು ಬಿಜೆಪಿ ಬೆಂಬಲಿಗ ಅಥವಾ ಟಿಎಂಸಿ ಬೆಂಬಲಿಗರಾಗಿರಬಹುದು, ಆದರೆ ಕುಟುಂಬವು ಏನು ಹೇಳುತ್ತದೆ ಎಂಬುದನ್ನು ನಾವು ನೋಡಬೇಕು. ಕುಟುಂಬ ಸದಸ್ಯರು ಇನ್ನೊಬ್ಬರತ್ತ ಬೆರಳು ತೋರಿಸುತ್ತಿದ್ದಾರೆ. ವೈಯಕ್ತಿಕ ಸಮಸ್ಯೆ ಈ ಸಾವಿಗೆ ಕಾರಣವಾಯಿತು ಎಂದು ಹೇಳುತ್ತಿದ್ದಾರೆ,  ಈ ಸಾವು ಸಂಭವಿಸಿದ ಕೆಲವೇ ಕ್ಷಣದಲ್ಲಿ ಬಿಜೆಪಿ ಹೋರಾಟಕ್ಕೆ ಧುಮುಕುತ್ತದೆ, ಇದು ರಣಹದ್ದು ರಾಜಕೀಯ” ಎಂದು ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...