HomeUncategorizedಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

ಪ.ಬಂಗಾಳ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

- Advertisement -
- Advertisement -

ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಬಂಕುರಾ ಜಿಲ್ಲೆಯ ನಿಧಿರಾಂಪುರ ಗ್ರಾಮದಲ್ಲಿ ಅವರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ನಾಯಕ ಶುಭದೀಪ್ ಮಿಶ್ರಾ ಅಲಿಯಾಸ್ ದೀಪು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅವರನ್ನು ಕೊಲೆ ಮಾಡಿ ನಂತರ ಮರಕ್ಕೆ ನೇಣು ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನೂ ಆರಂಭಿಸಿದರು. ವೈಯಕ್ತಿಕ ಕಲಹದಿಂದ ಈ ಘಟನೆ ನಡೆದಿದೆಯೇ ಅಥವಾ ರಾಜಕೀಯ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಮಿಶ್ರಾ ಅವರು ಅನೈತಿಕ ಸಂಬಂಧ ಹೊಂದಿದ್ದ ಗ್ರಾಮದ ವಿವಾಹಿತ ಮಹಿಳೆಯ ಕುಟುಂಬದವರು ಅವರನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬ ಹೇಳಿಕೊಂಡಿದೆ.

”ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಆಜ್ಞೆಯ ಮೇರೆಗೆ ಮಿಶ್ರಾ ಅವರನ್ನು ಕೊಲೆ ಮಾಡಲಾಗಿದೆ” ಎಂದು ಬಿಜೆಪಿ ಆರೋಪಿಸಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದೆ.

ಈ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ”ಟಿಎಂಸಿ ಗೂಂಡಾಗಳು ಸುಭದೀಪ್ ಮಿಶ್ರಾ ಅವರನ್ನು ಹತ್ಯೆಗೈದು ಕೈಗಳನ್ನು ಕಟ್ಟಿ ಮರಕ್ಕೆ ನೇತು ಹಾಕಿದ್ದಾರೆ. ಬಂಕುರಾ ಜಿಲ್ಲೆಯ ಸುಭದೀಪ್ ಮಿಶ್ರಾ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು, 2023ರ ಪಂಚಾಯತ್ ಚುನಾವಣೆಯಲ್ಲಿ ನಿಧಿರಾಂಪುರದಿಂದ ಸಾಲ್ತೋರಾ ವಿಧಾನಸಭಾ ಕ್ಷೇತ್ರದ ಗಂಗಾಜಲಘಾಟಿ ಬ್ಲಾಕ್‌ನ ಲೋಟಿಯಬೋನಿ ಆಂಚಲ್‌ನಲ್ಲಿ ಸ್ಪರ್ಧಿಸಿದ್ದರು. ಟಿಎಂಸಿ ಕಳ್ಳರು ಮತ್ತು ಗೂಂಡಾಗಳು ಅವರ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಭ್ರಷ್ಟಾಚಾರದ ವಿರುದ್ಧದ ನಿಲುವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಅವರನ್ನು ಹತ್ಯೆ ಮಾಡಲಾಗಿದೆ” ಎಂದು ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

”ಇದೊಂದು ಕೊಲೆ. ಶವದ ವಿಡಿಯೋವನ್ನು ಪೋಸ್ಟ್ ಮಾಡಿದ್ದೇನೆ, ಅದರಲ್ಲಿ ಮುಖವನ್ನು ಮಸುಕುಗೊಳಿಸಲಾಗಿದೆ. ಅವನ ಕೈಗಳನ್ನು ಕಟ್ಟಿಹಾಕಲಾಗಿದೆ ಎಂದು ಸ್ಪಷ್ಟವಾಗಿ ತೋರಿಸಲಾಗಿದೆ. ಯಾರೂ ತಮ್ಮ ಕೈಗಳನ್ನು ಕಟ್ಟಿದ ನಂತರ ಮರಕ್ಕೆ ನೇಣು ಹಾಕಿಕೊಳ್ಳಲು ಸಾಧ್ಯವಿಲ್ಲ. ಅವರ ಕೈಗಳನ್ನು ಕಟ್ಟಿರುವುದು ಸ್ಪಷ್ಟವಾಗಿ ಕಾಣುತ್ತದೆ. ಅವರ ಕೈಗಳನ್ನು ಕಟ್ಟಿಹಾಕಿ ನಂತರ ಮರಕ್ಕೆ ನೇಣು ಹಾಕಲಾಯಿತು.ಇದು ರಾಜಕೀಯ ಕೊಲೆ ಎಂದು ನಾವು ಭಾವಿಸುತ್ತೇವೆ. ಕುಟುಂಬದ ಬೇಡಿಕೆಯನ್ನು ನಾವು ಒಪ್ಪುತ್ತೇವೆ ಮತ್ತು ನಾವು ಕೂಡ ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ” ಎಂದು ಅಧಿಕಾರಿ  ಪೋಸ್ಟ್ ಮಾಡಿದ್ದಾರೆ.

ಅಧಿಕಾರಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡಲು ಹೋಗುತ್ತಿದೆ ಹೇಳಿದೆ.

ತೃಣಮೂಲದ ಹಿರಿಯ ನಾಯಕ ಹಾಗೂ ಸಂಪುಟ ಸಚಿವ ಶಶಿ ಪಂಜ ಸುದ್ದಿಗಾರರೊಂದಿಗೆ ಮಾತನಾಡಿ, ”ಇಲ್ಲಿ ಬಿಜೆಪಿಯ ಪಾತ್ರವೇನು? ಅದು ಬಿಜೆಪಿ ಬೆಂಬಲಿಗ ಅಥವಾ ಟಿಎಂಸಿ ಬೆಂಬಲಿಗರಾಗಿರಬಹುದು, ಆದರೆ ಕುಟುಂಬವು ಏನು ಹೇಳುತ್ತದೆ ಎಂಬುದನ್ನು ನಾವು ನೋಡಬೇಕು. ಕುಟುಂಬ ಸದಸ್ಯರು ಇನ್ನೊಬ್ಬರತ್ತ ಬೆರಳು ತೋರಿಸುತ್ತಿದ್ದಾರೆ. ವೈಯಕ್ತಿಕ ಸಮಸ್ಯೆ ಈ ಸಾವಿಗೆ ಕಾರಣವಾಯಿತು ಎಂದು ಹೇಳುತ್ತಿದ್ದಾರೆ,  ಈ ಸಾವು ಸಂಭವಿಸಿದ ಕೆಲವೇ ಕ್ಷಣದಲ್ಲಿ ಬಿಜೆಪಿ ಹೋರಾಟಕ್ಕೆ ಧುಮುಕುತ್ತದೆ, ಇದು ರಣಹದ್ದು ರಾಜಕೀಯ” ಎಂದು ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...