Homeಮುಖಪುಟಟಿಎಂಸಿ ಮುಖಂಡರ ಭೇಟಿ - ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ದಿನದ ಹಿಂದೆಯಷ್ಟೇ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಟಿಎಂಸಿ ಸೇರಿದ್ದರು

- Advertisement -
- Advertisement -

2017 ರಲ್ಲಿ ತೃಣಮೂಲ ಪಕ್ಷ ತೊರೆದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್‌ ರಾಯ್ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದಾಗಿ ಒಂದು ದಿನದ ನಂತರ ಪಶ್ಚಿಮ ಬಂಗಾಳ ಬಿಜೆಪಿ ಮತ್ತೆ ಚಿಂತಿತವಾಗಿದೆ. ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಜೆಪಿಗೆ ಸೇರಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ, ಟಿಎಂಸಿ ನಾಯಕ ಕುನಾಲ್ ಘೋಷ್ ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಈ ಭೇಟಿಯ ಮೂಲಕ ತಮ್ಮ ಹಳೆಯ ಪಕ್ಷಕ್ಕೆ ಮರಳುವ ಊಹಾಪೋಹಗಳಿಗೆ ಅವರು ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜೀಬ್ ಬ್ಯಾನರ್ಜಿ ಅವರು ಡೊಮ್ಜೂರ್‌ನಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಶನಿವಾರ ರಾಜ್ಯ ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಅವರ ನಿವಾಸಕ್ಕೆ ತೆರಳಿದ ರಾಜೀಬ್‌, ಅಲ್ಲಿ ಸುದೀರ್ಘ ಮಾತುಕರೆ ನಡೆಸಿದ್ದಾರೆ. ಈ ಮಾತುಕತೆಯನ್ನು ಇಬ್ಬರೂ ನಾಯಕರೂ “ಸೌಜನ್ಯ ಮಾತು” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

“ದಯವಿಟ್ಟು ಈ ಭೇಟಿಯನ್ನು ಬೇರೆ ಯಾವುದೆ ದೃಷ್ಠಿಯಿಂದ ನೋಡಬೇಡಿ. ಕುನಾಲ್‌ ಅವರ ಮನೆಯ ಪಕ್ಕದಲ್ಲಿನ ನನ್ನ ಸಂಬಂಧಿಕರೊಬ್ಬರನ್ನು ನೋಡಲು ನಾನು ಬಂದಿದ್ದೆ. ಇದು ಸೌಜನ್ಯದ ಭೇಟಿಯೆ ಹೊರತು ಬೇರೇನೂ ಅಲ್ಲ. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ” ಎಂದು ಕುನಾಲ್ ಘೋಷ್ ಮನೆಯಿಂದ ಹೊರಬರುತ್ತಿರುವಾಗ ರಾಜೀಬ್‌ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕುನಾಲ್‌ ಘೋಷ್ ಕೂಡ ಇದೇ ರೀತಿಯ ಅಭಿಪ್ರಾಯಗಳನ್ನು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಕಾಲಿಟ್ಟ ಅನೇಕ ಟಿಎಂಸಿ ನಾಯಕರು ಮಾತೃ ಪಕ್ಷಕ್ಕೆ ಮರಳುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂಬ ಊಹಾಪೋಹಗಳು ಈಗಾಗಲೆ ಹರಿದಾಡುತ್ತಿವೆ.

ಮುಕುಲ್‌ ರಾಯ್ ಟಿಎಂಸಿಗೆ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಮುಕುಲ್ ಅವರೊಂದಿಗೆ ಟಿಎಂಸಿ ತೊರೆದವರನ್ನು ನಾವು ಪರಿಗಣಿಸುತ್ತೇವೆ. ಅವರು ಮತ್ತೆ ಪಕ್ಷಕ್ಕೆ ಮರಳಲಿ ಎಂದು ಬಯಸುತ್ತೇವೆ. ಆದರೆ, ಏಪ್ರಿಲ್-ಮೇ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಲು ತೆರಳಿದ್ದ ಟಿಎಂಸಿ ರಾಜಕಾರಣಿಗಳು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ತೆಗೆದುಕೊಳ್ಳಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

“ಪಕ್ಷದ ತತ್ವಗಳ (ಬಿಜೆಪಿ) ಬಗ್ಗೆ ನನಗೆ ಖಂಡಿತವಾಗಿಯೂ ತಕರಾರು ಇದೆ. ಇದನ್ನು ನನ್ನ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ಆದರೆ ಕುನಾಲ್‌ ಅವರೊಂದಿಗಿನ ಇಂದಿನ ಸಭೆಗೆ ಅದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರಾಜೀಬ್‌ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ರಾಜೀಬ್ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ, “ಭಾರಿ ಜನಾದೇಶದೊಂದಿಗೆ ಚುನಾಯಿತವಾದ ಸರ್ಕಾರದ ವಿರುದ್ಧ ರಾಷ್ಟ್ರಪತಿ ಆಡಳಿತ ಹೇರುವ ಬೆದರಿಕೆಗಳನ್ನು ಹಾಕಬಾರದು” ಎಂದು ಬಿಜೆಪಿಯ ಸದಸ್ಯರಿಗೆ ಎಚ್ಚರಿಕೆ ನೀಡಿದ್ದರು.

ಕುನಾಲ್‌‌ ಘೋಷ್ ಅವರ ನಿವಾಸಕ್ಕೆ ರಾಜೀಬ್‌ ಬ್ಯಾನರ್ಜಿ‌ ಪ್ರಯಾಣಿಸಿದ ವಾಹನದಲ್ಲಿ ಟಿಎಂಸಿಯ ಹಲವಾರು ಸ್ಟಿಕ್ಕರ್‌ಗಳು ಮತ್ತು ಶಾಲು ಇದ್ದವು ಎಂದು ವರದಿಯಾಗಿದೆ.

ರಾಜೀಬ್‌ ಬ್ಯಾನರ್ಜಿ 2011 ಮತ್ತು 2016 ರಲ್ಲಿ ಟಿಎಂಸಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಡಿಪೆಂಡು ಬಿಸ್ವಾಸ್ ಮತ್ತು ಸೋನಾಲಿ ಗುಹಾ ಸೇರಿದಂತೆ ಹಲವಾರು ಟಿಎಂಸಿಯ ಮಾಜಿ ಶಾಸಕರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದ ನಿರ್ಧಾರಕ್ಕೆ ವಿಷಾದಿಸುತ್ತಾ ಪತ್ರಗಳನ್ನು ಕಳುಹಿಸಿದ್ದು, ಮತ್ತೆ ಟಿಎಂಸಿಗೆ ಸೇರಲು ಪ್ರಯತ್ನಿಸಿದ್ದಾರೆ.

ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಗೆ ಆಪ್ತರಾಗಿದ್ದ ಸೋನಾಲಿ ಗುಹಾ, ಕ್ಯಾಮರಾ ಮುಂದೆ ಮುಖ್ಯಮಂತ್ರಿಯ ಕ್ಷಮೆ ಕೋರಿ ಮನವೊಲಿಸಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಸತ್ಗಾಚಿಯಾದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸೋನಾಲಿ ಗುಹಾ ಅವರು “ಮೀನುಗಳು ನೀರಿನಿಂದ ಹೊರಗುಳಿಯಲು ಹೇಗೆ ಸಾಧ್ಯವಿಲ್ಲವೋ, ಹಾಗೆಯೆ ನೀವು ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ, ದೀದಿ” ಎಂದು ಪತ್ರದಲ್ಲಿ ಬರೆದಿದ್ದರು.

ಇದನ್ನೂ ಓದಿ: ‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...