Homeಮುಖಪುಟಟಿಎಂಸಿ ಮುಖಂಡರ ಭೇಟಿ - ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ದಿನದ ಹಿಂದೆಯಷ್ಟೇ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಟಿಎಂಸಿ ಸೇರಿದ್ದರು

- Advertisement -
- Advertisement -

2017 ರಲ್ಲಿ ತೃಣಮೂಲ ಪಕ್ಷ ತೊರೆದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್‌ ರಾಯ್ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದಾಗಿ ಒಂದು ದಿನದ ನಂತರ ಪಶ್ಚಿಮ ಬಂಗಾಳ ಬಿಜೆಪಿ ಮತ್ತೆ ಚಿಂತಿತವಾಗಿದೆ. ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಜೆಪಿಗೆ ಸೇರಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ, ಟಿಎಂಸಿ ನಾಯಕ ಕುನಾಲ್ ಘೋಷ್ ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಈ ಭೇಟಿಯ ಮೂಲಕ ತಮ್ಮ ಹಳೆಯ ಪಕ್ಷಕ್ಕೆ ಮರಳುವ ಊಹಾಪೋಹಗಳಿಗೆ ಅವರು ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜೀಬ್ ಬ್ಯಾನರ್ಜಿ ಅವರು ಡೊಮ್ಜೂರ್‌ನಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಶನಿವಾರ ರಾಜ್ಯ ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಅವರ ನಿವಾಸಕ್ಕೆ ತೆರಳಿದ ರಾಜೀಬ್‌, ಅಲ್ಲಿ ಸುದೀರ್ಘ ಮಾತುಕರೆ ನಡೆಸಿದ್ದಾರೆ. ಈ ಮಾತುಕತೆಯನ್ನು ಇಬ್ಬರೂ ನಾಯಕರೂ “ಸೌಜನ್ಯ ಮಾತು” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

“ದಯವಿಟ್ಟು ಈ ಭೇಟಿಯನ್ನು ಬೇರೆ ಯಾವುದೆ ದೃಷ್ಠಿಯಿಂದ ನೋಡಬೇಡಿ. ಕುನಾಲ್‌ ಅವರ ಮನೆಯ ಪಕ್ಕದಲ್ಲಿನ ನನ್ನ ಸಂಬಂಧಿಕರೊಬ್ಬರನ್ನು ನೋಡಲು ನಾನು ಬಂದಿದ್ದೆ. ಇದು ಸೌಜನ್ಯದ ಭೇಟಿಯೆ ಹೊರತು ಬೇರೇನೂ ಅಲ್ಲ. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ” ಎಂದು ಕುನಾಲ್ ಘೋಷ್ ಮನೆಯಿಂದ ಹೊರಬರುತ್ತಿರುವಾಗ ರಾಜೀಬ್‌ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕುನಾಲ್‌ ಘೋಷ್ ಕೂಡ ಇದೇ ರೀತಿಯ ಅಭಿಪ್ರಾಯಗಳನ್ನು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಕಾಲಿಟ್ಟ ಅನೇಕ ಟಿಎಂಸಿ ನಾಯಕರು ಮಾತೃ ಪಕ್ಷಕ್ಕೆ ಮರಳುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂಬ ಊಹಾಪೋಹಗಳು ಈಗಾಗಲೆ ಹರಿದಾಡುತ್ತಿವೆ.

ಮುಕುಲ್‌ ರಾಯ್ ಟಿಎಂಸಿಗೆ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಮುಕುಲ್ ಅವರೊಂದಿಗೆ ಟಿಎಂಸಿ ತೊರೆದವರನ್ನು ನಾವು ಪರಿಗಣಿಸುತ್ತೇವೆ. ಅವರು ಮತ್ತೆ ಪಕ್ಷಕ್ಕೆ ಮರಳಲಿ ಎಂದು ಬಯಸುತ್ತೇವೆ. ಆದರೆ, ಏಪ್ರಿಲ್-ಮೇ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಲು ತೆರಳಿದ್ದ ಟಿಎಂಸಿ ರಾಜಕಾರಣಿಗಳು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ತೆಗೆದುಕೊಳ್ಳಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

“ಪಕ್ಷದ ತತ್ವಗಳ (ಬಿಜೆಪಿ) ಬಗ್ಗೆ ನನಗೆ ಖಂಡಿತವಾಗಿಯೂ ತಕರಾರು ಇದೆ. ಇದನ್ನು ನನ್ನ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ಆದರೆ ಕುನಾಲ್‌ ಅವರೊಂದಿಗಿನ ಇಂದಿನ ಸಭೆಗೆ ಅದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರಾಜೀಬ್‌ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ರಾಜೀಬ್ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ, “ಭಾರಿ ಜನಾದೇಶದೊಂದಿಗೆ ಚುನಾಯಿತವಾದ ಸರ್ಕಾರದ ವಿರುದ್ಧ ರಾಷ್ಟ್ರಪತಿ ಆಡಳಿತ ಹೇರುವ ಬೆದರಿಕೆಗಳನ್ನು ಹಾಕಬಾರದು” ಎಂದು ಬಿಜೆಪಿಯ ಸದಸ್ಯರಿಗೆ ಎಚ್ಚರಿಕೆ ನೀಡಿದ್ದರು.

ಕುನಾಲ್‌‌ ಘೋಷ್ ಅವರ ನಿವಾಸಕ್ಕೆ ರಾಜೀಬ್‌ ಬ್ಯಾನರ್ಜಿ‌ ಪ್ರಯಾಣಿಸಿದ ವಾಹನದಲ್ಲಿ ಟಿಎಂಸಿಯ ಹಲವಾರು ಸ್ಟಿಕ್ಕರ್‌ಗಳು ಮತ್ತು ಶಾಲು ಇದ್ದವು ಎಂದು ವರದಿಯಾಗಿದೆ.

ರಾಜೀಬ್‌ ಬ್ಯಾನರ್ಜಿ 2011 ಮತ್ತು 2016 ರಲ್ಲಿ ಟಿಎಂಸಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಡಿಪೆಂಡು ಬಿಸ್ವಾಸ್ ಮತ್ತು ಸೋನಾಲಿ ಗುಹಾ ಸೇರಿದಂತೆ ಹಲವಾರು ಟಿಎಂಸಿಯ ಮಾಜಿ ಶಾಸಕರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದ ನಿರ್ಧಾರಕ್ಕೆ ವಿಷಾದಿಸುತ್ತಾ ಪತ್ರಗಳನ್ನು ಕಳುಹಿಸಿದ್ದು, ಮತ್ತೆ ಟಿಎಂಸಿಗೆ ಸೇರಲು ಪ್ರಯತ್ನಿಸಿದ್ದಾರೆ.

ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಗೆ ಆಪ್ತರಾಗಿದ್ದ ಸೋನಾಲಿ ಗುಹಾ, ಕ್ಯಾಮರಾ ಮುಂದೆ ಮುಖ್ಯಮಂತ್ರಿಯ ಕ್ಷಮೆ ಕೋರಿ ಮನವೊಲಿಸಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಸತ್ಗಾಚಿಯಾದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸೋನಾಲಿ ಗುಹಾ ಅವರು “ಮೀನುಗಳು ನೀರಿನಿಂದ ಹೊರಗುಳಿಯಲು ಹೇಗೆ ಸಾಧ್ಯವಿಲ್ಲವೋ, ಹಾಗೆಯೆ ನೀವು ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ, ದೀದಿ” ಎಂದು ಪತ್ರದಲ್ಲಿ ಬರೆದಿದ್ದರು.

ಇದನ್ನೂ ಓದಿ: ‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...