Homeಮುಖಪುಟಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಪಕ್ಷ ಬಿಟ್ಟ ಕನಿಷ್ಠ 35 ಮುಖಂಡರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

- Advertisement -
- Advertisement -

ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಗೆ ಮುಕುಲ್‍ ರಾಯ್‍ ಗೈರುಹಾಜರಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ, ಆ ಸಭೆಯ ಬಗ್ಗೆ ನನಗೆ ಮಾಹಿತಿಯನ್ನೇ ನೀಡಿಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೇ ಇಲ್ಲ ಎಂದಿದ್ದಾರೆ. ಹಿಂದೊಮ್ಮೆ ಮಮತಾ ಬ್ಯಾನರ್ಜಿಯವರ ಬಲಗೈ ಬಂಟನಂತಿದ್ದು ಬಿಜೆಪಿಗೆ ಹಾರಿದ ಅವರು ಈಗ ಮರಳಿ ಟಿಎಂಸಿ ಕಡೆ ಹೊರಟಿದ್ದಾರೆಯೇ ಎಂಬ ಊಹಾಪೋಹಗಳಿಗೆ ಕಾರಣರಾಗಿದ್ದಾರೆ. ಅದು ಬಂಗಾಳ ರಾಜಕೀಯದಲ್ಲಿ ಮಹಾ ಪಲ್ಲಟ ಉಂಟು ಮಾಡಬಹುದಾದ, ಬಿಜೆಪಿಗೆ ಕಂಟಕ ಆಗಬಹುದಾದ ಸೂಚನೆಯೂ ಆಗಿದೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಈ ವಿಷಯದ ಬಗ್ಗೆ ಮೌನ ವಹಿಸಿವೆ. ಮುಕುಲ್‍ ರಾಯ್‍ ಕೂಡ ಸುಳಿವು ಬಿಟ್ಟು ಕೊಡುತ್ತಿಲ್ಲ. ಆದರೆ ಬುಧವಾರ ಸಂಜೆ ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಈ ಕುರಿತು ಸ್ಪಷ್ಟವಾದ ಸುಳಿವನ್ನು ಕೊಟ್ಟಿದ್ದಾರೆ.

“ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (ಮಮತಾ ಅವರ ಸೋದರಳಿಯ) ಅವರೊಂದಿಗೆ ಸಂಪರ್ಕದಲ್ಲಿರುವ ಅನೇಕ ಬಿಜೆಪಿಗರು ಮರಳಿ ಟಿಎಂಸಿಗೆ ಬರಲು ಬಯಸುತ್ತಿದ್ದಾರೆ. ಆದರೆ ಅಗತ್ಯವಿರುವ ಸಮಯದಲ್ಲಿ ಅವರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

“ಅಂತಿಮ ನಿರ್ಧಾರವನ್ನು ಮಮತಾ ದೀದಿ ತೆಗೆದುಕೊಳ್ಳುತ್ತಾರೆ. ಆದರೆ ಈ ಪಕ್ಷಾಂತರಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಬೇಕಾಗಿದೆ – ಸಾಫ್ಟ್‌ಲೈನರ್‌ಗಳು ಮತ್ತು ಹಾರ್ಡ್‍ಲೈನರ್‌ಗಳು…” ಎಂದು ಅವರು ಹೇಳಿದ್ದಾರೆ.

‘ಸಾಫ್ಟ್ಲೈನರ್‌ಗಳು, ಪಕ್ಷವನ್ನು ತೊರೆದವರು, ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವಮಾನಿಸದವರು ಎಂದು ಅವರು ವಿವರಿಸಿದರು. ಹಾರ್ಡ್‍ಲೈನರ್‌ಗಳು ಮಮತಾರನ್ನು ಸಾರ್ವಜನಿಕವಾಗಿ ಅವಮಾನಿಸಿದವರು’ ಎಂದು ಸೌಗಾತ ಹೇಳಿದ್ದಾರೆ.

“ಪಕ್ಷಾಂತರದ ನಂತರ  ಸುವೆಂದು ಅಧಿಕಾರಿ ಮಮತಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಮುಕುಲ್ ರಾಯ್ ಎಂದೂ ಮಮತಾರನ್ನು ಬಹಿರಂಗವಾಗಿ ನಿಂದಿಸಲಿಲ್ಲ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಈ ಹೇಳಿಕೆಯು ಮುಕುಲ್ ರಾಯ್ ಅವರಿಗೆ ಟಿಎಂಸಿಯಲ್ಲಿ ಸ್ವಾಗತವಿದೆ ಎಂಬುದನ್ನು ಸೂಚಿಸುತ್ತಿದೆ.

ಹಿಂದೊಮ್ಮೆ ಮಮತಾ ಅವರಿಗೆ ಆಪ್ತರಾಗಿದ್ದ  ಮುಕುಲ್‍ ರಾಯ್ ಅವರು 2017ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಉನ್ನತ ನಾಯಕರಾಗಿದ್ದರು. ನಂತರದ ವರ್ಷಗಳಲ್ಲಿ, ತೃಣಮೂಲ ಶಾಸಕರು ಮತ್ತು ನಾಯಕರ ನಿಷ್ಠೆಯನ್ನು ಬದಲಾಯಿಸಲು ಮನವೊಲಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಈ ನಾಯಕರಲ್ಲಿ ಕನಿಷ್ಠ 35 ಜನರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸುಬ್ರಂಗು ರಾಯ್ ಅವರ ತಾಯಿಯನ್ನು (ಮುಕುಲ್‍ ರಾಯ್‍ ಪತ್ನಿ) ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರನ್ನು ಜೂನ್ 3ರಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಭೇಟಿ ಮಾಡಿದರು. ಅಭಿಷೇಕ್ ಭೇಟಿಯ ನಂತರ ನೀಡಿದ ಸಂದರ್ಶನದಲ್ಲಿ ಸುಬ್ರಂಗು ರಾಯ್‍ ಅವರು, ‘ಅಭಿಷೇಕ್‍ ಅವರ ಸೌಜನ್ಯದ ಭೇಟಿ ನನ್ನ ಮನವನ್ನು ಕಲಕಿದೆ. ಫಲಿತಾಂಶದ ನಂತರ ಅಭಿಷೇಕ್‍ ರಾಷ್ಟ್ರೀಯ ನಾಯಕರಾಗಿದ್ದಾರೆ. ನನ್ನ ನಿಜವಾದ ಮಿತ್ರ ಯಾರೆಂದು ನನಗೀಗ ಅರ್ಥವಾಗಿದೆ. ನಾನು ಮಾಡಿದ ತಪ್ಪಿನಿಂದಾಗಿ ಈಗ ನನ್ನ ತಾಯಿ ಅನಾರೋಗ್ಯಕ್ಕೆ ಈಡಾಗಿದ್ದಾರೆ’ ಎಂದು ಪಶ್ಚಾತಾಪ ಪಟ್ಟಿದ್ದಾರೆ.

ಅಭಿಷೇಕ್‍ ಭೇಟಿಯ ನಂತರ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸುಬ್ರಂಗು ರಾಯ್ ಅವರ ತಾಯಿಯನ್ನು ನೋಡಲು ಅವಸರದಿಂದ ಹೋದರು. ಮರುದಿನ ಬೆಳಿಗ್ಗೆ ಪಿಎಂ ಮೋದಿ ವೈಯಕ್ತಿಕವಾಗಿ ಮುಕುಲ್ ರಾಯ್ ಅವರಿಗೆ ಫೋನ್‍ ಮಾಡಿ ಅವರ ಪತ್ನಿಯ ಆರೋಗ್ಯ ವಿಚಾರಿಸಿದರು.

ಮಂಗಳವಾರ ಸುವೆಂದು ಅಧಿಕಾರಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದರು. ಅದರ ನಂತರ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲಾಯಿತು. ಪ್ರತಿ ಸಭೆಯ ನಂತರ, ಸುವೆಂದು ಅಧಿಕಾರಿಯು ಈ ಭೇಟಿಯು ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯದ ಚರ್ಚೆಗಷ್ಟೇ ಸಂಬಂಧಿಸಿದ್ದು ಎಂದಿದ್ದಾರೆ.

ಬಂಗಾಳ ಚುನಾವಣೆ ಫಲಿತಾಂಶದ ವಿಚಾರ ಚರ್ಚಿಸಲು ನಡೆದ ಬಂಗಾಳದ ಬಿಜೆಪಿ ಸಭೆಯಲ್ಲಿ ರಾಯ್ ಅವರ ಅನುಪಸ್ಥಿತಿಯು ಎದ್ದು ಕಂಡಿದೆ. ಹಾಗೆಯೇ ಅವರ ಮತ್ತು ಸುವೆಂದು ಅಧಿಕಾರಿಯ ನಡುವಿನ ಬಿರುಕುಗಳನ್ನೂ ಸೂಚಿಸುತ್ತಿದೆ.

ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸಿದ ಸುವೆಂದು ಅವರಿಗೆ ಪಕ್ಷದಲ್ಲಿ ಪ್ರಾಮುಖ್ಯತೆಯನ್ನು ಬಂದಿದೆ. ಪ್ರತಿಪಕ್ಷದ ನಾಯಕನ ಸ್ಥಾನದ ಬಹುಮಾನ ದೊರಕಿದ್ದು ಮಾತ್ರವಲ್ಲ, ಚಂಡಮಾರುತ ಪರಿಹಾರ ಕುರಿತು ಪ್ರಧಾನಮಂತ್ರಿ ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಅವರನ್ನು ಆಹ್ವಾನಿಸಲಾಗಿತ್ತು.

ಸುವೆಂದು ಮುನ್ನೆಲೆಗೆ ಬಂದ ನಂತರ ಮುಕುಲ್‍ ರಾಯ್‍ ಟಿಎಂಸಿ ಕಡೆ ಒಲವು ತೋರಿಸುತ್ತಿದ್ದಾರೆ. ಟಿಎಂಸಿ ಕೂಡ ಧನಾತ್ಮಕ ಸಿಗ್ನಲ್‍ಗಳನ್ನು ನೀಡುತ್ತಿದೆ. ಇದು ಸಂಭವಿಸಿದರೆ ಬಿಜೆಪಿಗೆ ಅಲ್ಲಿ ದೊಡ್ಡ ಹೊಡೆತ ಬೀಳಬಹುದು. ಸಂಸದ ಅಭಿಷೇಕ್‍ ಬ್ಯಾನರ್ಜಿ ಹೇಳಿದಂತೆ, ಕೆಲವು ಬಿಜೆಪಿ ಶಾಸಕರು ಟಿಎಂಸಿ ಸೇರಬಹುದು. ಈ ಪ್ರಕ್ರಿಯೆ ಈಗಾಗಲೇ ತಳಮಟ್ಟದಲ್ಲಿ ಆರಂಭವಾಗಿದೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...