Homeಮುಖಪುಟಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಪಕ್ಷ ಬಿಟ್ಟ ಕನಿಷ್ಠ 35 ಮುಖಂಡರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

- Advertisement -
- Advertisement -

ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಗೆ ಮುಕುಲ್‍ ರಾಯ್‍ ಗೈರುಹಾಜರಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ, ಆ ಸಭೆಯ ಬಗ್ಗೆ ನನಗೆ ಮಾಹಿತಿಯನ್ನೇ ನೀಡಿಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೇ ಇಲ್ಲ ಎಂದಿದ್ದಾರೆ. ಹಿಂದೊಮ್ಮೆ ಮಮತಾ ಬ್ಯಾನರ್ಜಿಯವರ ಬಲಗೈ ಬಂಟನಂತಿದ್ದು ಬಿಜೆಪಿಗೆ ಹಾರಿದ ಅವರು ಈಗ ಮರಳಿ ಟಿಎಂಸಿ ಕಡೆ ಹೊರಟಿದ್ದಾರೆಯೇ ಎಂಬ ಊಹಾಪೋಹಗಳಿಗೆ ಕಾರಣರಾಗಿದ್ದಾರೆ. ಅದು ಬಂಗಾಳ ರಾಜಕೀಯದಲ್ಲಿ ಮಹಾ ಪಲ್ಲಟ ಉಂಟು ಮಾಡಬಹುದಾದ, ಬಿಜೆಪಿಗೆ ಕಂಟಕ ಆಗಬಹುದಾದ ಸೂಚನೆಯೂ ಆಗಿದೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಈ ವಿಷಯದ ಬಗ್ಗೆ ಮೌನ ವಹಿಸಿವೆ. ಮುಕುಲ್‍ ರಾಯ್‍ ಕೂಡ ಸುಳಿವು ಬಿಟ್ಟು ಕೊಡುತ್ತಿಲ್ಲ. ಆದರೆ ಬುಧವಾರ ಸಂಜೆ ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಈ ಕುರಿತು ಸ್ಪಷ್ಟವಾದ ಸುಳಿವನ್ನು ಕೊಟ್ಟಿದ್ದಾರೆ.

“ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (ಮಮತಾ ಅವರ ಸೋದರಳಿಯ) ಅವರೊಂದಿಗೆ ಸಂಪರ್ಕದಲ್ಲಿರುವ ಅನೇಕ ಬಿಜೆಪಿಗರು ಮರಳಿ ಟಿಎಂಸಿಗೆ ಬರಲು ಬಯಸುತ್ತಿದ್ದಾರೆ. ಆದರೆ ಅಗತ್ಯವಿರುವ ಸಮಯದಲ್ಲಿ ಅವರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

“ಅಂತಿಮ ನಿರ್ಧಾರವನ್ನು ಮಮತಾ ದೀದಿ ತೆಗೆದುಕೊಳ್ಳುತ್ತಾರೆ. ಆದರೆ ಈ ಪಕ್ಷಾಂತರಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಬೇಕಾಗಿದೆ – ಸಾಫ್ಟ್‌ಲೈನರ್‌ಗಳು ಮತ್ತು ಹಾರ್ಡ್‍ಲೈನರ್‌ಗಳು…” ಎಂದು ಅವರು ಹೇಳಿದ್ದಾರೆ.

‘ಸಾಫ್ಟ್ಲೈನರ್‌ಗಳು, ಪಕ್ಷವನ್ನು ತೊರೆದವರು, ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವಮಾನಿಸದವರು ಎಂದು ಅವರು ವಿವರಿಸಿದರು. ಹಾರ್ಡ್‍ಲೈನರ್‌ಗಳು ಮಮತಾರನ್ನು ಸಾರ್ವಜನಿಕವಾಗಿ ಅವಮಾನಿಸಿದವರು’ ಎಂದು ಸೌಗಾತ ಹೇಳಿದ್ದಾರೆ.

“ಪಕ್ಷಾಂತರದ ನಂತರ  ಸುವೆಂದು ಅಧಿಕಾರಿ ಮಮತಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಮುಕುಲ್ ರಾಯ್ ಎಂದೂ ಮಮತಾರನ್ನು ಬಹಿರಂಗವಾಗಿ ನಿಂದಿಸಲಿಲ್ಲ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಈ ಹೇಳಿಕೆಯು ಮುಕುಲ್ ರಾಯ್ ಅವರಿಗೆ ಟಿಎಂಸಿಯಲ್ಲಿ ಸ್ವಾಗತವಿದೆ ಎಂಬುದನ್ನು ಸೂಚಿಸುತ್ತಿದೆ.

ಹಿಂದೊಮ್ಮೆ ಮಮತಾ ಅವರಿಗೆ ಆಪ್ತರಾಗಿದ್ದ  ಮುಕುಲ್‍ ರಾಯ್ ಅವರು 2017ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಉನ್ನತ ನಾಯಕರಾಗಿದ್ದರು. ನಂತರದ ವರ್ಷಗಳಲ್ಲಿ, ತೃಣಮೂಲ ಶಾಸಕರು ಮತ್ತು ನಾಯಕರ ನಿಷ್ಠೆಯನ್ನು ಬದಲಾಯಿಸಲು ಮನವೊಲಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಈ ನಾಯಕರಲ್ಲಿ ಕನಿಷ್ಠ 35 ಜನರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸುಬ್ರಂಗು ರಾಯ್ ಅವರ ತಾಯಿಯನ್ನು (ಮುಕುಲ್‍ ರಾಯ್‍ ಪತ್ನಿ) ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರನ್ನು ಜೂನ್ 3ರಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಭೇಟಿ ಮಾಡಿದರು. ಅಭಿಷೇಕ್ ಭೇಟಿಯ ನಂತರ ನೀಡಿದ ಸಂದರ್ಶನದಲ್ಲಿ ಸುಬ್ರಂಗು ರಾಯ್‍ ಅವರು, ‘ಅಭಿಷೇಕ್‍ ಅವರ ಸೌಜನ್ಯದ ಭೇಟಿ ನನ್ನ ಮನವನ್ನು ಕಲಕಿದೆ. ಫಲಿತಾಂಶದ ನಂತರ ಅಭಿಷೇಕ್‍ ರಾಷ್ಟ್ರೀಯ ನಾಯಕರಾಗಿದ್ದಾರೆ. ನನ್ನ ನಿಜವಾದ ಮಿತ್ರ ಯಾರೆಂದು ನನಗೀಗ ಅರ್ಥವಾಗಿದೆ. ನಾನು ಮಾಡಿದ ತಪ್ಪಿನಿಂದಾಗಿ ಈಗ ನನ್ನ ತಾಯಿ ಅನಾರೋಗ್ಯಕ್ಕೆ ಈಡಾಗಿದ್ದಾರೆ’ ಎಂದು ಪಶ್ಚಾತಾಪ ಪಟ್ಟಿದ್ದಾರೆ.

ಅಭಿಷೇಕ್‍ ಭೇಟಿಯ ನಂತರ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸುಬ್ರಂಗು ರಾಯ್ ಅವರ ತಾಯಿಯನ್ನು ನೋಡಲು ಅವಸರದಿಂದ ಹೋದರು. ಮರುದಿನ ಬೆಳಿಗ್ಗೆ ಪಿಎಂ ಮೋದಿ ವೈಯಕ್ತಿಕವಾಗಿ ಮುಕುಲ್ ರಾಯ್ ಅವರಿಗೆ ಫೋನ್‍ ಮಾಡಿ ಅವರ ಪತ್ನಿಯ ಆರೋಗ್ಯ ವಿಚಾರಿಸಿದರು.

ಮಂಗಳವಾರ ಸುವೆಂದು ಅಧಿಕಾರಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದರು. ಅದರ ನಂತರ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲಾಯಿತು. ಪ್ರತಿ ಸಭೆಯ ನಂತರ, ಸುವೆಂದು ಅಧಿಕಾರಿಯು ಈ ಭೇಟಿಯು ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯದ ಚರ್ಚೆಗಷ್ಟೇ ಸಂಬಂಧಿಸಿದ್ದು ಎಂದಿದ್ದಾರೆ.

ಬಂಗಾಳ ಚುನಾವಣೆ ಫಲಿತಾಂಶದ ವಿಚಾರ ಚರ್ಚಿಸಲು ನಡೆದ ಬಂಗಾಳದ ಬಿಜೆಪಿ ಸಭೆಯಲ್ಲಿ ರಾಯ್ ಅವರ ಅನುಪಸ್ಥಿತಿಯು ಎದ್ದು ಕಂಡಿದೆ. ಹಾಗೆಯೇ ಅವರ ಮತ್ತು ಸುವೆಂದು ಅಧಿಕಾರಿಯ ನಡುವಿನ ಬಿರುಕುಗಳನ್ನೂ ಸೂಚಿಸುತ್ತಿದೆ.

ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸಿದ ಸುವೆಂದು ಅವರಿಗೆ ಪಕ್ಷದಲ್ಲಿ ಪ್ರಾಮುಖ್ಯತೆಯನ್ನು ಬಂದಿದೆ. ಪ್ರತಿಪಕ್ಷದ ನಾಯಕನ ಸ್ಥಾನದ ಬಹುಮಾನ ದೊರಕಿದ್ದು ಮಾತ್ರವಲ್ಲ, ಚಂಡಮಾರುತ ಪರಿಹಾರ ಕುರಿತು ಪ್ರಧಾನಮಂತ್ರಿ ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಅವರನ್ನು ಆಹ್ವಾನಿಸಲಾಗಿತ್ತು.

ಸುವೆಂದು ಮುನ್ನೆಲೆಗೆ ಬಂದ ನಂತರ ಮುಕುಲ್‍ ರಾಯ್‍ ಟಿಎಂಸಿ ಕಡೆ ಒಲವು ತೋರಿಸುತ್ತಿದ್ದಾರೆ. ಟಿಎಂಸಿ ಕೂಡ ಧನಾತ್ಮಕ ಸಿಗ್ನಲ್‍ಗಳನ್ನು ನೀಡುತ್ತಿದೆ. ಇದು ಸಂಭವಿಸಿದರೆ ಬಿಜೆಪಿಗೆ ಅಲ್ಲಿ ದೊಡ್ಡ ಹೊಡೆತ ಬೀಳಬಹುದು. ಸಂಸದ ಅಭಿಷೇಕ್‍ ಬ್ಯಾನರ್ಜಿ ಹೇಳಿದಂತೆ, ಕೆಲವು ಬಿಜೆಪಿ ಶಾಸಕರು ಟಿಎಂಸಿ ಸೇರಬಹುದು. ಈ ಪ್ರಕ್ರಿಯೆ ಈಗಾಗಲೇ ತಳಮಟ್ಟದಲ್ಲಿ ಆರಂಭವಾಗಿದೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...