Homeಮುಖಪುಟಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಪಕ್ಷ ಬಿಟ್ಟ ಕನಿಷ್ಠ 35 ಮುಖಂಡರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

- Advertisement -
- Advertisement -

ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಗೆ ಮುಕುಲ್‍ ರಾಯ್‍ ಗೈರುಹಾಜರಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ, ಆ ಸಭೆಯ ಬಗ್ಗೆ ನನಗೆ ಮಾಹಿತಿಯನ್ನೇ ನೀಡಿಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೇ ಇಲ್ಲ ಎಂದಿದ್ದಾರೆ. ಹಿಂದೊಮ್ಮೆ ಮಮತಾ ಬ್ಯಾನರ್ಜಿಯವರ ಬಲಗೈ ಬಂಟನಂತಿದ್ದು ಬಿಜೆಪಿಗೆ ಹಾರಿದ ಅವರು ಈಗ ಮರಳಿ ಟಿಎಂಸಿ ಕಡೆ ಹೊರಟಿದ್ದಾರೆಯೇ ಎಂಬ ಊಹಾಪೋಹಗಳಿಗೆ ಕಾರಣರಾಗಿದ್ದಾರೆ. ಅದು ಬಂಗಾಳ ರಾಜಕೀಯದಲ್ಲಿ ಮಹಾ ಪಲ್ಲಟ ಉಂಟು ಮಾಡಬಹುದಾದ, ಬಿಜೆಪಿಗೆ ಕಂಟಕ ಆಗಬಹುದಾದ ಸೂಚನೆಯೂ ಆಗಿದೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಈ ವಿಷಯದ ಬಗ್ಗೆ ಮೌನ ವಹಿಸಿವೆ. ಮುಕುಲ್‍ ರಾಯ್‍ ಕೂಡ ಸುಳಿವು ಬಿಟ್ಟು ಕೊಡುತ್ತಿಲ್ಲ. ಆದರೆ ಬುಧವಾರ ಸಂಜೆ ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಈ ಕುರಿತು ಸ್ಪಷ್ಟವಾದ ಸುಳಿವನ್ನು ಕೊಟ್ಟಿದ್ದಾರೆ.

“ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (ಮಮತಾ ಅವರ ಸೋದರಳಿಯ) ಅವರೊಂದಿಗೆ ಸಂಪರ್ಕದಲ್ಲಿರುವ ಅನೇಕ ಬಿಜೆಪಿಗರು ಮರಳಿ ಟಿಎಂಸಿಗೆ ಬರಲು ಬಯಸುತ್ತಿದ್ದಾರೆ. ಆದರೆ ಅಗತ್ಯವಿರುವ ಸಮಯದಲ್ಲಿ ಅವರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

“ಅಂತಿಮ ನಿರ್ಧಾರವನ್ನು ಮಮತಾ ದೀದಿ ತೆಗೆದುಕೊಳ್ಳುತ್ತಾರೆ. ಆದರೆ ಈ ಪಕ್ಷಾಂತರಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಬೇಕಾಗಿದೆ – ಸಾಫ್ಟ್‌ಲೈನರ್‌ಗಳು ಮತ್ತು ಹಾರ್ಡ್‍ಲೈನರ್‌ಗಳು…” ಎಂದು ಅವರು ಹೇಳಿದ್ದಾರೆ.

‘ಸಾಫ್ಟ್ಲೈನರ್‌ಗಳು, ಪಕ್ಷವನ್ನು ತೊರೆದವರು, ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವಮಾನಿಸದವರು ಎಂದು ಅವರು ವಿವರಿಸಿದರು. ಹಾರ್ಡ್‍ಲೈನರ್‌ಗಳು ಮಮತಾರನ್ನು ಸಾರ್ವಜನಿಕವಾಗಿ ಅವಮಾನಿಸಿದವರು’ ಎಂದು ಸೌಗಾತ ಹೇಳಿದ್ದಾರೆ.

“ಪಕ್ಷಾಂತರದ ನಂತರ  ಸುವೆಂದು ಅಧಿಕಾರಿ ಮಮತಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಮುಕುಲ್ ರಾಯ್ ಎಂದೂ ಮಮತಾರನ್ನು ಬಹಿರಂಗವಾಗಿ ನಿಂದಿಸಲಿಲ್ಲ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಈ ಹೇಳಿಕೆಯು ಮುಕುಲ್ ರಾಯ್ ಅವರಿಗೆ ಟಿಎಂಸಿಯಲ್ಲಿ ಸ್ವಾಗತವಿದೆ ಎಂಬುದನ್ನು ಸೂಚಿಸುತ್ತಿದೆ.

ಹಿಂದೊಮ್ಮೆ ಮಮತಾ ಅವರಿಗೆ ಆಪ್ತರಾಗಿದ್ದ  ಮುಕುಲ್‍ ರಾಯ್ ಅವರು 2017ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಉನ್ನತ ನಾಯಕರಾಗಿದ್ದರು. ನಂತರದ ವರ್ಷಗಳಲ್ಲಿ, ತೃಣಮೂಲ ಶಾಸಕರು ಮತ್ತು ನಾಯಕರ ನಿಷ್ಠೆಯನ್ನು ಬದಲಾಯಿಸಲು ಮನವೊಲಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಈ ನಾಯಕರಲ್ಲಿ ಕನಿಷ್ಠ 35 ಜನರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸುಬ್ರಂಗು ರಾಯ್ ಅವರ ತಾಯಿಯನ್ನು (ಮುಕುಲ್‍ ರಾಯ್‍ ಪತ್ನಿ) ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರನ್ನು ಜೂನ್ 3ರಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಭೇಟಿ ಮಾಡಿದರು. ಅಭಿಷೇಕ್ ಭೇಟಿಯ ನಂತರ ನೀಡಿದ ಸಂದರ್ಶನದಲ್ಲಿ ಸುಬ್ರಂಗು ರಾಯ್‍ ಅವರು, ‘ಅಭಿಷೇಕ್‍ ಅವರ ಸೌಜನ್ಯದ ಭೇಟಿ ನನ್ನ ಮನವನ್ನು ಕಲಕಿದೆ. ಫಲಿತಾಂಶದ ನಂತರ ಅಭಿಷೇಕ್‍ ರಾಷ್ಟ್ರೀಯ ನಾಯಕರಾಗಿದ್ದಾರೆ. ನನ್ನ ನಿಜವಾದ ಮಿತ್ರ ಯಾರೆಂದು ನನಗೀಗ ಅರ್ಥವಾಗಿದೆ. ನಾನು ಮಾಡಿದ ತಪ್ಪಿನಿಂದಾಗಿ ಈಗ ನನ್ನ ತಾಯಿ ಅನಾರೋಗ್ಯಕ್ಕೆ ಈಡಾಗಿದ್ದಾರೆ’ ಎಂದು ಪಶ್ಚಾತಾಪ ಪಟ್ಟಿದ್ದಾರೆ.

ಅಭಿಷೇಕ್‍ ಭೇಟಿಯ ನಂತರ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸುಬ್ರಂಗು ರಾಯ್ ಅವರ ತಾಯಿಯನ್ನು ನೋಡಲು ಅವಸರದಿಂದ ಹೋದರು. ಮರುದಿನ ಬೆಳಿಗ್ಗೆ ಪಿಎಂ ಮೋದಿ ವೈಯಕ್ತಿಕವಾಗಿ ಮುಕುಲ್ ರಾಯ್ ಅವರಿಗೆ ಫೋನ್‍ ಮಾಡಿ ಅವರ ಪತ್ನಿಯ ಆರೋಗ್ಯ ವಿಚಾರಿಸಿದರು.

ಮಂಗಳವಾರ ಸುವೆಂದು ಅಧಿಕಾರಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದರು. ಅದರ ನಂತರ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲಾಯಿತು. ಪ್ರತಿ ಸಭೆಯ ನಂತರ, ಸುವೆಂದು ಅಧಿಕಾರಿಯು ಈ ಭೇಟಿಯು ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯದ ಚರ್ಚೆಗಷ್ಟೇ ಸಂಬಂಧಿಸಿದ್ದು ಎಂದಿದ್ದಾರೆ.

ಬಂಗಾಳ ಚುನಾವಣೆ ಫಲಿತಾಂಶದ ವಿಚಾರ ಚರ್ಚಿಸಲು ನಡೆದ ಬಂಗಾಳದ ಬಿಜೆಪಿ ಸಭೆಯಲ್ಲಿ ರಾಯ್ ಅವರ ಅನುಪಸ್ಥಿತಿಯು ಎದ್ದು ಕಂಡಿದೆ. ಹಾಗೆಯೇ ಅವರ ಮತ್ತು ಸುವೆಂದು ಅಧಿಕಾರಿಯ ನಡುವಿನ ಬಿರುಕುಗಳನ್ನೂ ಸೂಚಿಸುತ್ತಿದೆ.

ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸಿದ ಸುವೆಂದು ಅವರಿಗೆ ಪಕ್ಷದಲ್ಲಿ ಪ್ರಾಮುಖ್ಯತೆಯನ್ನು ಬಂದಿದೆ. ಪ್ರತಿಪಕ್ಷದ ನಾಯಕನ ಸ್ಥಾನದ ಬಹುಮಾನ ದೊರಕಿದ್ದು ಮಾತ್ರವಲ್ಲ, ಚಂಡಮಾರುತ ಪರಿಹಾರ ಕುರಿತು ಪ್ರಧಾನಮಂತ್ರಿ ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಅವರನ್ನು ಆಹ್ವಾನಿಸಲಾಗಿತ್ತು.

ಸುವೆಂದು ಮುನ್ನೆಲೆಗೆ ಬಂದ ನಂತರ ಮುಕುಲ್‍ ರಾಯ್‍ ಟಿಎಂಸಿ ಕಡೆ ಒಲವು ತೋರಿಸುತ್ತಿದ್ದಾರೆ. ಟಿಎಂಸಿ ಕೂಡ ಧನಾತ್ಮಕ ಸಿಗ್ನಲ್‍ಗಳನ್ನು ನೀಡುತ್ತಿದೆ. ಇದು ಸಂಭವಿಸಿದರೆ ಬಿಜೆಪಿಗೆ ಅಲ್ಲಿ ದೊಡ್ಡ ಹೊಡೆತ ಬೀಳಬಹುದು. ಸಂಸದ ಅಭಿಷೇಕ್‍ ಬ್ಯಾನರ್ಜಿ ಹೇಳಿದಂತೆ, ಕೆಲವು ಬಿಜೆಪಿ ಶಾಸಕರು ಟಿಎಂಸಿ ಸೇರಬಹುದು. ಈ ಪ್ರಕ್ರಿಯೆ ಈಗಾಗಲೇ ತಳಮಟ್ಟದಲ್ಲಿ ಆರಂಭವಾಗಿದೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...