Homeಮುಖಪುಟಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಪಕ್ಷ ಬಿಟ್ಟ ಕನಿಷ್ಠ 35 ಮುಖಂಡರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

- Advertisement -
- Advertisement -

ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಗೆ ಮುಕುಲ್‍ ರಾಯ್‍ ಗೈರುಹಾಜರಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ, ಆ ಸಭೆಯ ಬಗ್ಗೆ ನನಗೆ ಮಾಹಿತಿಯನ್ನೇ ನೀಡಿಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೇ ಇಲ್ಲ ಎಂದಿದ್ದಾರೆ. ಹಿಂದೊಮ್ಮೆ ಮಮತಾ ಬ್ಯಾನರ್ಜಿಯವರ ಬಲಗೈ ಬಂಟನಂತಿದ್ದು ಬಿಜೆಪಿಗೆ ಹಾರಿದ ಅವರು ಈಗ ಮರಳಿ ಟಿಎಂಸಿ ಕಡೆ ಹೊರಟಿದ್ದಾರೆಯೇ ಎಂಬ ಊಹಾಪೋಹಗಳಿಗೆ ಕಾರಣರಾಗಿದ್ದಾರೆ. ಅದು ಬಂಗಾಳ ರಾಜಕೀಯದಲ್ಲಿ ಮಹಾ ಪಲ್ಲಟ ಉಂಟು ಮಾಡಬಹುದಾದ, ಬಿಜೆಪಿಗೆ ಕಂಟಕ ಆಗಬಹುದಾದ ಸೂಚನೆಯೂ ಆಗಿದೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಈ ವಿಷಯದ ಬಗ್ಗೆ ಮೌನ ವಹಿಸಿವೆ. ಮುಕುಲ್‍ ರಾಯ್‍ ಕೂಡ ಸುಳಿವು ಬಿಟ್ಟು ಕೊಡುತ್ತಿಲ್ಲ. ಆದರೆ ಬುಧವಾರ ಸಂಜೆ ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಈ ಕುರಿತು ಸ್ಪಷ್ಟವಾದ ಸುಳಿವನ್ನು ಕೊಟ್ಟಿದ್ದಾರೆ.

“ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (ಮಮತಾ ಅವರ ಸೋದರಳಿಯ) ಅವರೊಂದಿಗೆ ಸಂಪರ್ಕದಲ್ಲಿರುವ ಅನೇಕ ಬಿಜೆಪಿಗರು ಮರಳಿ ಟಿಎಂಸಿಗೆ ಬರಲು ಬಯಸುತ್ತಿದ್ದಾರೆ. ಆದರೆ ಅಗತ್ಯವಿರುವ ಸಮಯದಲ್ಲಿ ಅವರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

“ಅಂತಿಮ ನಿರ್ಧಾರವನ್ನು ಮಮತಾ ದೀದಿ ತೆಗೆದುಕೊಳ್ಳುತ್ತಾರೆ. ಆದರೆ ಈ ಪಕ್ಷಾಂತರಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಬೇಕಾಗಿದೆ – ಸಾಫ್ಟ್‌ಲೈನರ್‌ಗಳು ಮತ್ತು ಹಾರ್ಡ್‍ಲೈನರ್‌ಗಳು…” ಎಂದು ಅವರು ಹೇಳಿದ್ದಾರೆ.

‘ಸಾಫ್ಟ್ಲೈನರ್‌ಗಳು, ಪಕ್ಷವನ್ನು ತೊರೆದವರು, ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವಮಾನಿಸದವರು ಎಂದು ಅವರು ವಿವರಿಸಿದರು. ಹಾರ್ಡ್‍ಲೈನರ್‌ಗಳು ಮಮತಾರನ್ನು ಸಾರ್ವಜನಿಕವಾಗಿ ಅವಮಾನಿಸಿದವರು’ ಎಂದು ಸೌಗಾತ ಹೇಳಿದ್ದಾರೆ.

“ಪಕ್ಷಾಂತರದ ನಂತರ  ಸುವೆಂದು ಅಧಿಕಾರಿ ಮಮತಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಮುಕುಲ್ ರಾಯ್ ಎಂದೂ ಮಮತಾರನ್ನು ಬಹಿರಂಗವಾಗಿ ನಿಂದಿಸಲಿಲ್ಲ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಈ ಹೇಳಿಕೆಯು ಮುಕುಲ್ ರಾಯ್ ಅವರಿಗೆ ಟಿಎಂಸಿಯಲ್ಲಿ ಸ್ವಾಗತವಿದೆ ಎಂಬುದನ್ನು ಸೂಚಿಸುತ್ತಿದೆ.

ಹಿಂದೊಮ್ಮೆ ಮಮತಾ ಅವರಿಗೆ ಆಪ್ತರಾಗಿದ್ದ  ಮುಕುಲ್‍ ರಾಯ್ ಅವರು 2017ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಉನ್ನತ ನಾಯಕರಾಗಿದ್ದರು. ನಂತರದ ವರ್ಷಗಳಲ್ಲಿ, ತೃಣಮೂಲ ಶಾಸಕರು ಮತ್ತು ನಾಯಕರ ನಿಷ್ಠೆಯನ್ನು ಬದಲಾಯಿಸಲು ಮನವೊಲಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಈ ನಾಯಕರಲ್ಲಿ ಕನಿಷ್ಠ 35 ಜನರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸುಬ್ರಂಗು ರಾಯ್ ಅವರ ತಾಯಿಯನ್ನು (ಮುಕುಲ್‍ ರಾಯ್‍ ಪತ್ನಿ) ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರನ್ನು ಜೂನ್ 3ರಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಭೇಟಿ ಮಾಡಿದರು. ಅಭಿಷೇಕ್ ಭೇಟಿಯ ನಂತರ ನೀಡಿದ ಸಂದರ್ಶನದಲ್ಲಿ ಸುಬ್ರಂಗು ರಾಯ್‍ ಅವರು, ‘ಅಭಿಷೇಕ್‍ ಅವರ ಸೌಜನ್ಯದ ಭೇಟಿ ನನ್ನ ಮನವನ್ನು ಕಲಕಿದೆ. ಫಲಿತಾಂಶದ ನಂತರ ಅಭಿಷೇಕ್‍ ರಾಷ್ಟ್ರೀಯ ನಾಯಕರಾಗಿದ್ದಾರೆ. ನನ್ನ ನಿಜವಾದ ಮಿತ್ರ ಯಾರೆಂದು ನನಗೀಗ ಅರ್ಥವಾಗಿದೆ. ನಾನು ಮಾಡಿದ ತಪ್ಪಿನಿಂದಾಗಿ ಈಗ ನನ್ನ ತಾಯಿ ಅನಾರೋಗ್ಯಕ್ಕೆ ಈಡಾಗಿದ್ದಾರೆ’ ಎಂದು ಪಶ್ಚಾತಾಪ ಪಟ್ಟಿದ್ದಾರೆ.

ಅಭಿಷೇಕ್‍ ಭೇಟಿಯ ನಂತರ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸುಬ್ರಂಗು ರಾಯ್ ಅವರ ತಾಯಿಯನ್ನು ನೋಡಲು ಅವಸರದಿಂದ ಹೋದರು. ಮರುದಿನ ಬೆಳಿಗ್ಗೆ ಪಿಎಂ ಮೋದಿ ವೈಯಕ್ತಿಕವಾಗಿ ಮುಕುಲ್ ರಾಯ್ ಅವರಿಗೆ ಫೋನ್‍ ಮಾಡಿ ಅವರ ಪತ್ನಿಯ ಆರೋಗ್ಯ ವಿಚಾರಿಸಿದರು.

ಮಂಗಳವಾರ ಸುವೆಂದು ಅಧಿಕಾರಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದರು. ಅದರ ನಂತರ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲಾಯಿತು. ಪ್ರತಿ ಸಭೆಯ ನಂತರ, ಸುವೆಂದು ಅಧಿಕಾರಿಯು ಈ ಭೇಟಿಯು ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯದ ಚರ್ಚೆಗಷ್ಟೇ ಸಂಬಂಧಿಸಿದ್ದು ಎಂದಿದ್ದಾರೆ.

ಬಂಗಾಳ ಚುನಾವಣೆ ಫಲಿತಾಂಶದ ವಿಚಾರ ಚರ್ಚಿಸಲು ನಡೆದ ಬಂಗಾಳದ ಬಿಜೆಪಿ ಸಭೆಯಲ್ಲಿ ರಾಯ್ ಅವರ ಅನುಪಸ್ಥಿತಿಯು ಎದ್ದು ಕಂಡಿದೆ. ಹಾಗೆಯೇ ಅವರ ಮತ್ತು ಸುವೆಂದು ಅಧಿಕಾರಿಯ ನಡುವಿನ ಬಿರುಕುಗಳನ್ನೂ ಸೂಚಿಸುತ್ತಿದೆ.

ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸಿದ ಸುವೆಂದು ಅವರಿಗೆ ಪಕ್ಷದಲ್ಲಿ ಪ್ರಾಮುಖ್ಯತೆಯನ್ನು ಬಂದಿದೆ. ಪ್ರತಿಪಕ್ಷದ ನಾಯಕನ ಸ್ಥಾನದ ಬಹುಮಾನ ದೊರಕಿದ್ದು ಮಾತ್ರವಲ್ಲ, ಚಂಡಮಾರುತ ಪರಿಹಾರ ಕುರಿತು ಪ್ರಧಾನಮಂತ್ರಿ ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಅವರನ್ನು ಆಹ್ವಾನಿಸಲಾಗಿತ್ತು.

ಸುವೆಂದು ಮುನ್ನೆಲೆಗೆ ಬಂದ ನಂತರ ಮುಕುಲ್‍ ರಾಯ್‍ ಟಿಎಂಸಿ ಕಡೆ ಒಲವು ತೋರಿಸುತ್ತಿದ್ದಾರೆ. ಟಿಎಂಸಿ ಕೂಡ ಧನಾತ್ಮಕ ಸಿಗ್ನಲ್‍ಗಳನ್ನು ನೀಡುತ್ತಿದೆ. ಇದು ಸಂಭವಿಸಿದರೆ ಬಿಜೆಪಿಗೆ ಅಲ್ಲಿ ದೊಡ್ಡ ಹೊಡೆತ ಬೀಳಬಹುದು. ಸಂಸದ ಅಭಿಷೇಕ್‍ ಬ್ಯಾನರ್ಜಿ ಹೇಳಿದಂತೆ, ಕೆಲವು ಬಿಜೆಪಿ ಶಾಸಕರು ಟಿಎಂಸಿ ಸೇರಬಹುದು. ಈ ಪ್ರಕ್ರಿಯೆ ಈಗಾಗಲೇ ತಳಮಟ್ಟದಲ್ಲಿ ಆರಂಭವಾಗಿದೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...