Homeಮುಖಪುಟಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಪಕ್ಷ ಬಿಟ್ಟ ಕನಿಷ್ಠ 35 ಮುಖಂಡರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

- Advertisement -
- Advertisement -

ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಗೆ ಮುಕುಲ್‍ ರಾಯ್‍ ಗೈರುಹಾಜರಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ, ಆ ಸಭೆಯ ಬಗ್ಗೆ ನನಗೆ ಮಾಹಿತಿಯನ್ನೇ ನೀಡಿಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೇ ಇಲ್ಲ ಎಂದಿದ್ದಾರೆ. ಹಿಂದೊಮ್ಮೆ ಮಮತಾ ಬ್ಯಾನರ್ಜಿಯವರ ಬಲಗೈ ಬಂಟನಂತಿದ್ದು ಬಿಜೆಪಿಗೆ ಹಾರಿದ ಅವರು ಈಗ ಮರಳಿ ಟಿಎಂಸಿ ಕಡೆ ಹೊರಟಿದ್ದಾರೆಯೇ ಎಂಬ ಊಹಾಪೋಹಗಳಿಗೆ ಕಾರಣರಾಗಿದ್ದಾರೆ. ಅದು ಬಂಗಾಳ ರಾಜಕೀಯದಲ್ಲಿ ಮಹಾ ಪಲ್ಲಟ ಉಂಟು ಮಾಡಬಹುದಾದ, ಬಿಜೆಪಿಗೆ ಕಂಟಕ ಆಗಬಹುದಾದ ಸೂಚನೆಯೂ ಆಗಿದೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಈ ವಿಷಯದ ಬಗ್ಗೆ ಮೌನ ವಹಿಸಿವೆ. ಮುಕುಲ್‍ ರಾಯ್‍ ಕೂಡ ಸುಳಿವು ಬಿಟ್ಟು ಕೊಡುತ್ತಿಲ್ಲ. ಆದರೆ ಬುಧವಾರ ಸಂಜೆ ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಈ ಕುರಿತು ಸ್ಪಷ್ಟವಾದ ಸುಳಿವನ್ನು ಕೊಟ್ಟಿದ್ದಾರೆ.

“ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (ಮಮತಾ ಅವರ ಸೋದರಳಿಯ) ಅವರೊಂದಿಗೆ ಸಂಪರ್ಕದಲ್ಲಿರುವ ಅನೇಕ ಬಿಜೆಪಿಗರು ಮರಳಿ ಟಿಎಂಸಿಗೆ ಬರಲು ಬಯಸುತ್ತಿದ್ದಾರೆ. ಆದರೆ ಅಗತ್ಯವಿರುವ ಸಮಯದಲ್ಲಿ ಅವರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

“ಅಂತಿಮ ನಿರ್ಧಾರವನ್ನು ಮಮತಾ ದೀದಿ ತೆಗೆದುಕೊಳ್ಳುತ್ತಾರೆ. ಆದರೆ ಈ ಪಕ್ಷಾಂತರಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಬೇಕಾಗಿದೆ – ಸಾಫ್ಟ್‌ಲೈನರ್‌ಗಳು ಮತ್ತು ಹಾರ್ಡ್‍ಲೈನರ್‌ಗಳು…” ಎಂದು ಅವರು ಹೇಳಿದ್ದಾರೆ.

‘ಸಾಫ್ಟ್ಲೈನರ್‌ಗಳು, ಪಕ್ಷವನ್ನು ತೊರೆದವರು, ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವಮಾನಿಸದವರು ಎಂದು ಅವರು ವಿವರಿಸಿದರು. ಹಾರ್ಡ್‍ಲೈನರ್‌ಗಳು ಮಮತಾರನ್ನು ಸಾರ್ವಜನಿಕವಾಗಿ ಅವಮಾನಿಸಿದವರು’ ಎಂದು ಸೌಗಾತ ಹೇಳಿದ್ದಾರೆ.

“ಪಕ್ಷಾಂತರದ ನಂತರ  ಸುವೆಂದು ಅಧಿಕಾರಿ ಮಮತಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಮುಕುಲ್ ರಾಯ್ ಎಂದೂ ಮಮತಾರನ್ನು ಬಹಿರಂಗವಾಗಿ ನಿಂದಿಸಲಿಲ್ಲ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಈ ಹೇಳಿಕೆಯು ಮುಕುಲ್ ರಾಯ್ ಅವರಿಗೆ ಟಿಎಂಸಿಯಲ್ಲಿ ಸ್ವಾಗತವಿದೆ ಎಂಬುದನ್ನು ಸೂಚಿಸುತ್ತಿದೆ.

ಹಿಂದೊಮ್ಮೆ ಮಮತಾ ಅವರಿಗೆ ಆಪ್ತರಾಗಿದ್ದ  ಮುಕುಲ್‍ ರಾಯ್ ಅವರು 2017ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಉನ್ನತ ನಾಯಕರಾಗಿದ್ದರು. ನಂತರದ ವರ್ಷಗಳಲ್ಲಿ, ತೃಣಮೂಲ ಶಾಸಕರು ಮತ್ತು ನಾಯಕರ ನಿಷ್ಠೆಯನ್ನು ಬದಲಾಯಿಸಲು ಮನವೊಲಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಈ ನಾಯಕರಲ್ಲಿ ಕನಿಷ್ಠ 35 ಜನರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸುಬ್ರಂಗು ರಾಯ್ ಅವರ ತಾಯಿಯನ್ನು (ಮುಕುಲ್‍ ರಾಯ್‍ ಪತ್ನಿ) ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರನ್ನು ಜೂನ್ 3ರಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಭೇಟಿ ಮಾಡಿದರು. ಅಭಿಷೇಕ್ ಭೇಟಿಯ ನಂತರ ನೀಡಿದ ಸಂದರ್ಶನದಲ್ಲಿ ಸುಬ್ರಂಗು ರಾಯ್‍ ಅವರು, ‘ಅಭಿಷೇಕ್‍ ಅವರ ಸೌಜನ್ಯದ ಭೇಟಿ ನನ್ನ ಮನವನ್ನು ಕಲಕಿದೆ. ಫಲಿತಾಂಶದ ನಂತರ ಅಭಿಷೇಕ್‍ ರಾಷ್ಟ್ರೀಯ ನಾಯಕರಾಗಿದ್ದಾರೆ. ನನ್ನ ನಿಜವಾದ ಮಿತ್ರ ಯಾರೆಂದು ನನಗೀಗ ಅರ್ಥವಾಗಿದೆ. ನಾನು ಮಾಡಿದ ತಪ್ಪಿನಿಂದಾಗಿ ಈಗ ನನ್ನ ತಾಯಿ ಅನಾರೋಗ್ಯಕ್ಕೆ ಈಡಾಗಿದ್ದಾರೆ’ ಎಂದು ಪಶ್ಚಾತಾಪ ಪಟ್ಟಿದ್ದಾರೆ.

ಅಭಿಷೇಕ್‍ ಭೇಟಿಯ ನಂತರ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸುಬ್ರಂಗು ರಾಯ್ ಅವರ ತಾಯಿಯನ್ನು ನೋಡಲು ಅವಸರದಿಂದ ಹೋದರು. ಮರುದಿನ ಬೆಳಿಗ್ಗೆ ಪಿಎಂ ಮೋದಿ ವೈಯಕ್ತಿಕವಾಗಿ ಮುಕುಲ್ ರಾಯ್ ಅವರಿಗೆ ಫೋನ್‍ ಮಾಡಿ ಅವರ ಪತ್ನಿಯ ಆರೋಗ್ಯ ವಿಚಾರಿಸಿದರು.

ಮಂಗಳವಾರ ಸುವೆಂದು ಅಧಿಕಾರಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದರು. ಅದರ ನಂತರ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲಾಯಿತು. ಪ್ರತಿ ಸಭೆಯ ನಂತರ, ಸುವೆಂದು ಅಧಿಕಾರಿಯು ಈ ಭೇಟಿಯು ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯದ ಚರ್ಚೆಗಷ್ಟೇ ಸಂಬಂಧಿಸಿದ್ದು ಎಂದಿದ್ದಾರೆ.

ಬಂಗಾಳ ಚುನಾವಣೆ ಫಲಿತಾಂಶದ ವಿಚಾರ ಚರ್ಚಿಸಲು ನಡೆದ ಬಂಗಾಳದ ಬಿಜೆಪಿ ಸಭೆಯಲ್ಲಿ ರಾಯ್ ಅವರ ಅನುಪಸ್ಥಿತಿಯು ಎದ್ದು ಕಂಡಿದೆ. ಹಾಗೆಯೇ ಅವರ ಮತ್ತು ಸುವೆಂದು ಅಧಿಕಾರಿಯ ನಡುವಿನ ಬಿರುಕುಗಳನ್ನೂ ಸೂಚಿಸುತ್ತಿದೆ.

ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸಿದ ಸುವೆಂದು ಅವರಿಗೆ ಪಕ್ಷದಲ್ಲಿ ಪ್ರಾಮುಖ್ಯತೆಯನ್ನು ಬಂದಿದೆ. ಪ್ರತಿಪಕ್ಷದ ನಾಯಕನ ಸ್ಥಾನದ ಬಹುಮಾನ ದೊರಕಿದ್ದು ಮಾತ್ರವಲ್ಲ, ಚಂಡಮಾರುತ ಪರಿಹಾರ ಕುರಿತು ಪ್ರಧಾನಮಂತ್ರಿ ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಅವರನ್ನು ಆಹ್ವಾನಿಸಲಾಗಿತ್ತು.

ಸುವೆಂದು ಮುನ್ನೆಲೆಗೆ ಬಂದ ನಂತರ ಮುಕುಲ್‍ ರಾಯ್‍ ಟಿಎಂಸಿ ಕಡೆ ಒಲವು ತೋರಿಸುತ್ತಿದ್ದಾರೆ. ಟಿಎಂಸಿ ಕೂಡ ಧನಾತ್ಮಕ ಸಿಗ್ನಲ್‍ಗಳನ್ನು ನೀಡುತ್ತಿದೆ. ಇದು ಸಂಭವಿಸಿದರೆ ಬಿಜೆಪಿಗೆ ಅಲ್ಲಿ ದೊಡ್ಡ ಹೊಡೆತ ಬೀಳಬಹುದು. ಸಂಸದ ಅಭಿಷೇಕ್‍ ಬ್ಯಾನರ್ಜಿ ಹೇಳಿದಂತೆ, ಕೆಲವು ಬಿಜೆಪಿ ಶಾಸಕರು ಟಿಎಂಸಿ ಸೇರಬಹುದು. ಈ ಪ್ರಕ್ರಿಯೆ ಈಗಾಗಲೇ ತಳಮಟ್ಟದಲ್ಲಿ ಆರಂಭವಾಗಿದೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...