Homeಮುಖಪುಟಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಬಂಗಾಳ: ಬಿಜೆಪಿಯ ಮುಕುಲ್‍ ರಾಯ್‍ ತವರುಮನೆ ಮಮತಾ ಪಕ್ಷದತ್ತ?

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಪಕ್ಷ ಬಿಟ್ಟ ಕನಿಷ್ಠ 35 ಮುಖಂಡರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

- Advertisement -
- Advertisement -

ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಗೆ ಮುಕುಲ್‍ ರಾಯ್‍ ಗೈರುಹಾಜರಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ, ಆ ಸಭೆಯ ಬಗ್ಗೆ ನನಗೆ ಮಾಹಿತಿಯನ್ನೇ ನೀಡಿಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೇ ಇಲ್ಲ ಎಂದಿದ್ದಾರೆ. ಹಿಂದೊಮ್ಮೆ ಮಮತಾ ಬ್ಯಾನರ್ಜಿಯವರ ಬಲಗೈ ಬಂಟನಂತಿದ್ದು ಬಿಜೆಪಿಗೆ ಹಾರಿದ ಅವರು ಈಗ ಮರಳಿ ಟಿಎಂಸಿ ಕಡೆ ಹೊರಟಿದ್ದಾರೆಯೇ ಎಂಬ ಊಹಾಪೋಹಗಳಿಗೆ ಕಾರಣರಾಗಿದ್ದಾರೆ. ಅದು ಬಂಗಾಳ ರಾಜಕೀಯದಲ್ಲಿ ಮಹಾ ಪಲ್ಲಟ ಉಂಟು ಮಾಡಬಹುದಾದ, ಬಿಜೆಪಿಗೆ ಕಂಟಕ ಆಗಬಹುದಾದ ಸೂಚನೆಯೂ ಆಗಿದೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಈ ವಿಷಯದ ಬಗ್ಗೆ ಮೌನ ವಹಿಸಿವೆ. ಮುಕುಲ್‍ ರಾಯ್‍ ಕೂಡ ಸುಳಿವು ಬಿಟ್ಟು ಕೊಡುತ್ತಿಲ್ಲ. ಆದರೆ ಬುಧವಾರ ಸಂಜೆ ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಈ ಕುರಿತು ಸ್ಪಷ್ಟವಾದ ಸುಳಿವನ್ನು ಕೊಟ್ಟಿದ್ದಾರೆ.

“ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (ಮಮತಾ ಅವರ ಸೋದರಳಿಯ) ಅವರೊಂದಿಗೆ ಸಂಪರ್ಕದಲ್ಲಿರುವ ಅನೇಕ ಬಿಜೆಪಿಗರು ಮರಳಿ ಟಿಎಂಸಿಗೆ ಬರಲು ಬಯಸುತ್ತಿದ್ದಾರೆ. ಆದರೆ ಅಗತ್ಯವಿರುವ ಸಮಯದಲ್ಲಿ ಅವರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

“ಅಂತಿಮ ನಿರ್ಧಾರವನ್ನು ಮಮತಾ ದೀದಿ ತೆಗೆದುಕೊಳ್ಳುತ್ತಾರೆ. ಆದರೆ ಈ ಪಕ್ಷಾಂತರಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಬೇಕಾಗಿದೆ – ಸಾಫ್ಟ್‌ಲೈನರ್‌ಗಳು ಮತ್ತು ಹಾರ್ಡ್‍ಲೈನರ್‌ಗಳು…” ಎಂದು ಅವರು ಹೇಳಿದ್ದಾರೆ.

‘ಸಾಫ್ಟ್ಲೈನರ್‌ಗಳು, ಪಕ್ಷವನ್ನು ತೊರೆದವರು, ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವಮಾನಿಸದವರು ಎಂದು ಅವರು ವಿವರಿಸಿದರು. ಹಾರ್ಡ್‍ಲೈನರ್‌ಗಳು ಮಮತಾರನ್ನು ಸಾರ್ವಜನಿಕವಾಗಿ ಅವಮಾನಿಸಿದವರು’ ಎಂದು ಸೌಗಾತ ಹೇಳಿದ್ದಾರೆ.

“ಪಕ್ಷಾಂತರದ ನಂತರ  ಸುವೆಂದು ಅಧಿಕಾರಿ ಮಮತಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಮುಕುಲ್ ರಾಯ್ ಎಂದೂ ಮಮತಾರನ್ನು ಬಹಿರಂಗವಾಗಿ ನಿಂದಿಸಲಿಲ್ಲ” ಎಂದು ಸೌಗತ ರಾಯ್ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಈ ಹೇಳಿಕೆಯು ಮುಕುಲ್ ರಾಯ್ ಅವರಿಗೆ ಟಿಎಂಸಿಯಲ್ಲಿ ಸ್ವಾಗತವಿದೆ ಎಂಬುದನ್ನು ಸೂಚಿಸುತ್ತಿದೆ.

ಹಿಂದೊಮ್ಮೆ ಮಮತಾ ಅವರಿಗೆ ಆಪ್ತರಾಗಿದ್ದ  ಮುಕುಲ್‍ ರಾಯ್ ಅವರು 2017ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಉನ್ನತ ನಾಯಕರಾಗಿದ್ದರು. ನಂತರದ ವರ್ಷಗಳಲ್ಲಿ, ತೃಣಮೂಲ ಶಾಸಕರು ಮತ್ತು ನಾಯಕರ ನಿಷ್ಠೆಯನ್ನು ಬದಲಾಯಿಸಲು ಮನವೊಲಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಈಗ ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳುವಂತೆ, ಈ ನಾಯಕರಲ್ಲಿ ಕನಿಷ್ಠ 35 ಜನರು ಟಿಎಂಸಿಗೆ ವಾಪಸ್ ಬರಲು ಬಯಸುತ್ತಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸುಬ್ರಂಗು ರಾಯ್ ಅವರ ತಾಯಿಯನ್ನು (ಮುಕುಲ್‍ ರಾಯ್‍ ಪತ್ನಿ) ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರನ್ನು ಜೂನ್ 3ರಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಭೇಟಿ ಮಾಡಿದರು. ಅಭಿಷೇಕ್ ಭೇಟಿಯ ನಂತರ ನೀಡಿದ ಸಂದರ್ಶನದಲ್ಲಿ ಸುಬ್ರಂಗು ರಾಯ್‍ ಅವರು, ‘ಅಭಿಷೇಕ್‍ ಅವರ ಸೌಜನ್ಯದ ಭೇಟಿ ನನ್ನ ಮನವನ್ನು ಕಲಕಿದೆ. ಫಲಿತಾಂಶದ ನಂತರ ಅಭಿಷೇಕ್‍ ರಾಷ್ಟ್ರೀಯ ನಾಯಕರಾಗಿದ್ದಾರೆ. ನನ್ನ ನಿಜವಾದ ಮಿತ್ರ ಯಾರೆಂದು ನನಗೀಗ ಅರ್ಥವಾಗಿದೆ. ನಾನು ಮಾಡಿದ ತಪ್ಪಿನಿಂದಾಗಿ ಈಗ ನನ್ನ ತಾಯಿ ಅನಾರೋಗ್ಯಕ್ಕೆ ಈಡಾಗಿದ್ದಾರೆ’ ಎಂದು ಪಶ್ಚಾತಾಪ ಪಟ್ಟಿದ್ದಾರೆ.

ಅಭಿಷೇಕ್‍ ಭೇಟಿಯ ನಂತರ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸುಬ್ರಂಗು ರಾಯ್ ಅವರ ತಾಯಿಯನ್ನು ನೋಡಲು ಅವಸರದಿಂದ ಹೋದರು. ಮರುದಿನ ಬೆಳಿಗ್ಗೆ ಪಿಎಂ ಮೋದಿ ವೈಯಕ್ತಿಕವಾಗಿ ಮುಕುಲ್ ರಾಯ್ ಅವರಿಗೆ ಫೋನ್‍ ಮಾಡಿ ಅವರ ಪತ್ನಿಯ ಆರೋಗ್ಯ ವಿಚಾರಿಸಿದರು.

ಮಂಗಳವಾರ ಸುವೆಂದು ಅಧಿಕಾರಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದರು. ಅದರ ನಂತರ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲಾಯಿತು. ಪ್ರತಿ ಸಭೆಯ ನಂತರ, ಸುವೆಂದು ಅಧಿಕಾರಿಯು ಈ ಭೇಟಿಯು ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯದ ಚರ್ಚೆಗಷ್ಟೇ ಸಂಬಂಧಿಸಿದ್ದು ಎಂದಿದ್ದಾರೆ.

ಬಂಗಾಳ ಚುನಾವಣೆ ಫಲಿತಾಂಶದ ವಿಚಾರ ಚರ್ಚಿಸಲು ನಡೆದ ಬಂಗಾಳದ ಬಿಜೆಪಿ ಸಭೆಯಲ್ಲಿ ರಾಯ್ ಅವರ ಅನುಪಸ್ಥಿತಿಯು ಎದ್ದು ಕಂಡಿದೆ. ಹಾಗೆಯೇ ಅವರ ಮತ್ತು ಸುವೆಂದು ಅಧಿಕಾರಿಯ ನಡುವಿನ ಬಿರುಕುಗಳನ್ನೂ ಸೂಚಿಸುತ್ತಿದೆ.

ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸಿದ ಸುವೆಂದು ಅವರಿಗೆ ಪಕ್ಷದಲ್ಲಿ ಪ್ರಾಮುಖ್ಯತೆಯನ್ನು ಬಂದಿದೆ. ಪ್ರತಿಪಕ್ಷದ ನಾಯಕನ ಸ್ಥಾನದ ಬಹುಮಾನ ದೊರಕಿದ್ದು ಮಾತ್ರವಲ್ಲ, ಚಂಡಮಾರುತ ಪರಿಹಾರ ಕುರಿತು ಪ್ರಧಾನಮಂತ್ರಿ ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಅವರನ್ನು ಆಹ್ವಾನಿಸಲಾಗಿತ್ತು.

ಸುವೆಂದು ಮುನ್ನೆಲೆಗೆ ಬಂದ ನಂತರ ಮುಕುಲ್‍ ರಾಯ್‍ ಟಿಎಂಸಿ ಕಡೆ ಒಲವು ತೋರಿಸುತ್ತಿದ್ದಾರೆ. ಟಿಎಂಸಿ ಕೂಡ ಧನಾತ್ಮಕ ಸಿಗ್ನಲ್‍ಗಳನ್ನು ನೀಡುತ್ತಿದೆ. ಇದು ಸಂಭವಿಸಿದರೆ ಬಿಜೆಪಿಗೆ ಅಲ್ಲಿ ದೊಡ್ಡ ಹೊಡೆತ ಬೀಳಬಹುದು. ಸಂಸದ ಅಭಿಷೇಕ್‍ ಬ್ಯಾನರ್ಜಿ ಹೇಳಿದಂತೆ, ಕೆಲವು ಬಿಜೆಪಿ ಶಾಸಕರು ಟಿಎಂಸಿ ಸೇರಬಹುದು. ಈ ಪ್ರಕ್ರಿಯೆ ಈಗಾಗಲೇ ತಳಮಟ್ಟದಲ್ಲಿ ಆರಂಭವಾಗಿದೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...