Homeಮುಖಪುಟಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಅವರಿಗೆ ಅಗೌರವ ಸೂಚಿಸಬಾರದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯಲ್ಲಿ ರಾಜಕೀಯ ಸಲ್ಲದು: ರಾಹುಲ್ ಗಾಂಧಿ

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...