Homeಮುಖಪುಟಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಅವರಿಗೆ ಅಗೌರವ ಸೂಚಿಸಬಾರದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯಲ್ಲಿ ರಾಜಕೀಯ ಸಲ್ಲದು: ರಾಹುಲ್ ಗಾಂಧಿ

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...