Homeಮುಖಪುಟಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಅವರಿಗೆ ಅಗೌರವ ಸೂಚಿಸಬಾರದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯಲ್ಲಿ ರಾಜಕೀಯ ಸಲ್ಲದು: ರಾಹುಲ್ ಗಾಂಧಿ

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...