Homeಮುಖಪುಟಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಿಜೆಪಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ವ್ಯಂಗ್ಯವಾಡಿದ್ದಾರೆ. 

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಉಪಚುನಾವಣೆಗಳ ಮೂಲಕ ಮುಂದುವರಿಯುತ್ತಿದೆ. ಇತ್ತೀಚೆಗೆ ನಡೆದಿರುವ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಭದ್ರತಾ ಠೇವಣಿಯನ್ನೂ ಕಳೆದುಕೊಂಡಿದ್ದು, ಭಾರಿ ಮುಖಭಂಗಕ್ಕೆ ಒಳಗಾಗಿದೆ.

ರಾಜ್ಯದ ದೀನ್‌ಹಟಾ ಮತ್ತು ಶಾಂತಿಪುರ್‌ ಕ್ಷೇತ್ರಗಳು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ದೀನ್‌ಹಟಾದಲ್ಲಿ ಆರು ತಿಂಗಳ ಹಿಂದೆಯಷ್ಟೇ ಬಿಜೆಪಿಯಿಂದ ನಿಸಿತ್‌ ‌ಪ್ರಮಾಣಿಕ್ ಗೆದ್ದುಕೊಂಡಿದ್ದರು. ನಂತರ ಅವರಿಗೆ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ನೀಡಲಾಗಿತ್ತು. ಇದರಿಂದಾಗಿ ಅವರು ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಶಾಂತಿಪುರದಲ್ಲಿ ಗೆಲುವು ಕಂಡಿದ್ದ ಜಗನ್ನಾಥ್‌ ಸರ್ಕಾರ್‌‌ ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾಗಿದ್ದ ಅನಿವಾರ್ಯತೆ ಬಿಜೆಪಿಗೆ ಉಂಟಾಗಿತ್ತು. ಆದರೆ ಬಿಜೆಪಿ ಶಾಂತಿಪುರದಲ್ಲಿ ತನ್ನ ಠೇವಣಿಯನ್ನು ಮಾತ್ರವೇ ಉಳಿಸಿಕೊಂಡಿದೆ.

ಉಳಿದಂತೆ ಈ ಹಿಂದೆ ಒಕ್ಕೂಟ ಸರ್ಕಾರದ ಸಚಿವ ಗೆಲುವು ಕಂಡಿದ್ದ ದೀನ್‌ಹಟಾವಾಗಲಿ, ಖಾರ್ದಹೊ ಮತ್ತು ಗೋಸಬಾದ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದ್ದು, ತನ್ನ ಠೀವಣಿಯನ್ನೂ ಉಳಿಸಿಕೊಂಡಿಲ್ಲ.

ರಾಜ್ಯದ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಭರ್ಜರಿ ಗೆಲುವಿನ ಬಗ್ಗೆ ಪತ್ರಿಕ್ರಿಯಿಸಿರುವ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಬಿಜೆಪಿಯ ಜನರಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೂ ಮುಂಚೆ ಹಲವಾರು ಜನರು ಟಿಎಂಸಿಯಿಂದ ಬಿಜೆಪಿಗೆ ವಲಸೆ ಹೋಗಿದ್ದರು. ಆದರೆ ವಿಧಾನಸಭೆಯ ಚುನಾವಣೆ ನಡೆದು ಫಲಿತಾಂಶ ಘೋಷಿಣೆಯಾಗಿ ರಾಜ್ಯದಲ್ಲಿ ಟಿಎಂಸಿ ಸರ್ಕಾರ ರಚನೆಯಾದ ಸ್ವಲ್ಪ ಸಮಯದಲ್ಲೇ, ಇದು ಉಲ್ಟಾ ಆಗಿದೆ. ಬಿಜೆಪಿ ಸೇರಿದ್ದ ಟಿಎಂಸಿಯ ಕಾರ್ಯಕರ್ತರು, ಶಾಸಕರು, ಮಾಜಿ ನಾಯಕರು ಮತ್ತೇ ಟಿಎಂಸಿ ಸೇರಿದ್ದಾರೆ. ಈ ಸರಣಿ ಇನ್ನೂ ಮುಂದುವರೆದಿದ್ದು, ಇದು ಬಿಜೆಪಿಗೆ ತೀವ್ರ ಮುಖಭಂಗ ನೀಡಿದೆ. ಈ ನಡುವೆ ಮತ್ತೇ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಮೇವ ಪಕ್ಷವಾಗಿ ಮುನ್ನುಗ್ಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಷ್ಟೊಂದು ಒಳ್ಳೆಯ ಲಕ್ಷಣಗಳಲ್ಲ ಎಂಬ ಮಾತು ಕೂಡಾ ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಸಿರುವ ಕ್ರುಶಿಕ ಎವಿ ಅವರು, “ಬಂಗಾಳದಲ್ಲಿ ಮಂದಿಯಾಳ್ವಿಕೆಗೆ ಅನಾರೋಗ್ಯಕರವಾದ ಅಧಿಕಾರ ಕೇಂದ್ರೀಕರಣ ಆಗುತ್ತಿದೆ. ಒಂದೇ ಪಕ್ಷದ ಅಡಿಯಲ್ಲಿ ಭಾರೀ ಬಹುಮತ, ವಿಪಕ್ಷದಲ್ಲಿ ಬಿಜೆಪಿ ಒಂದೇ ಉಸಿರಾಡುತ್ತಿದೆ. ಬಾಕಿ ಯಾವುದೆ ಪಕ್ಷಗಳು ಇಲ್ಲವೇ ಇಲ್ಲ!. ಹೀಗಾದಲ್ಲಿ ವ್ಯವಸ್ಥೆ ಹೇಗೆ ವರ್ತಿಸಬಹುದು? ಇಂದಿರಾ ಗಾಂಧಿಯಂತೆ ಸರ್ವಾಧಿಕಾರಿಯಾಗಿ ಮಮತಾ ಸರ್ವಾಧಿಕಾರಿ ನರೇಂದ್ರ ಮೋದಿಯ ಎದುರು ಅವರೇ ಸರಿ ಅನ್ನೋ ಭಾವನೆ!.

ಬಿಜೆಪಿ ಮಾಡಿದ ಖರ್ಚು, ಮತಿಯವಾಗಿ ಒಡೆದ ಜನ ಸಮುದಾಯ, ಮಾಡಿದ ಕೀಟಲೆ ಎಲ್ಲಾ ಮಮತಾ ಅಧಿಕಾರ ಇನ್ನಷ್ಟು ಗಟ್ಟಿಯಾಗಿಸಿದೆ. ಇದು ಒಳ್ಳೆಯದು ಮಾಡಬಹುದು ಇಲ್ಲವೇ ಭಾರಿ ಕಷ್ಟವನ್ನೇ ಬಂಗಾಳಕ್ಕೆ ತರಬಹುದು!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...