Homeಮುಖಪುಟಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಿಜೆಪಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ವ್ಯಂಗ್ಯವಾಡಿದ್ದಾರೆ. 

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಉಪಚುನಾವಣೆಗಳ ಮೂಲಕ ಮುಂದುವರಿಯುತ್ತಿದೆ. ಇತ್ತೀಚೆಗೆ ನಡೆದಿರುವ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಭದ್ರತಾ ಠೇವಣಿಯನ್ನೂ ಕಳೆದುಕೊಂಡಿದ್ದು, ಭಾರಿ ಮುಖಭಂಗಕ್ಕೆ ಒಳಗಾಗಿದೆ.

ರಾಜ್ಯದ ದೀನ್‌ಹಟಾ ಮತ್ತು ಶಾಂತಿಪುರ್‌ ಕ್ಷೇತ್ರಗಳು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ದೀನ್‌ಹಟಾದಲ್ಲಿ ಆರು ತಿಂಗಳ ಹಿಂದೆಯಷ್ಟೇ ಬಿಜೆಪಿಯಿಂದ ನಿಸಿತ್‌ ‌ಪ್ರಮಾಣಿಕ್ ಗೆದ್ದುಕೊಂಡಿದ್ದರು. ನಂತರ ಅವರಿಗೆ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ನೀಡಲಾಗಿತ್ತು. ಇದರಿಂದಾಗಿ ಅವರು ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಶಾಂತಿಪುರದಲ್ಲಿ ಗೆಲುವು ಕಂಡಿದ್ದ ಜಗನ್ನಾಥ್‌ ಸರ್ಕಾರ್‌‌ ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾಗಿದ್ದ ಅನಿವಾರ್ಯತೆ ಬಿಜೆಪಿಗೆ ಉಂಟಾಗಿತ್ತು. ಆದರೆ ಬಿಜೆಪಿ ಶಾಂತಿಪುರದಲ್ಲಿ ತನ್ನ ಠೇವಣಿಯನ್ನು ಮಾತ್ರವೇ ಉಳಿಸಿಕೊಂಡಿದೆ.

ಉಳಿದಂತೆ ಈ ಹಿಂದೆ ಒಕ್ಕೂಟ ಸರ್ಕಾರದ ಸಚಿವ ಗೆಲುವು ಕಂಡಿದ್ದ ದೀನ್‌ಹಟಾವಾಗಲಿ, ಖಾರ್ದಹೊ ಮತ್ತು ಗೋಸಬಾದ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದ್ದು, ತನ್ನ ಠೀವಣಿಯನ್ನೂ ಉಳಿಸಿಕೊಂಡಿಲ್ಲ.

ರಾಜ್ಯದ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಭರ್ಜರಿ ಗೆಲುವಿನ ಬಗ್ಗೆ ಪತ್ರಿಕ್ರಿಯಿಸಿರುವ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಬಿಜೆಪಿಯ ಜನರಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೂ ಮುಂಚೆ ಹಲವಾರು ಜನರು ಟಿಎಂಸಿಯಿಂದ ಬಿಜೆಪಿಗೆ ವಲಸೆ ಹೋಗಿದ್ದರು. ಆದರೆ ವಿಧಾನಸಭೆಯ ಚುನಾವಣೆ ನಡೆದು ಫಲಿತಾಂಶ ಘೋಷಿಣೆಯಾಗಿ ರಾಜ್ಯದಲ್ಲಿ ಟಿಎಂಸಿ ಸರ್ಕಾರ ರಚನೆಯಾದ ಸ್ವಲ್ಪ ಸಮಯದಲ್ಲೇ, ಇದು ಉಲ್ಟಾ ಆಗಿದೆ. ಬಿಜೆಪಿ ಸೇರಿದ್ದ ಟಿಎಂಸಿಯ ಕಾರ್ಯಕರ್ತರು, ಶಾಸಕರು, ಮಾಜಿ ನಾಯಕರು ಮತ್ತೇ ಟಿಎಂಸಿ ಸೇರಿದ್ದಾರೆ. ಈ ಸರಣಿ ಇನ್ನೂ ಮುಂದುವರೆದಿದ್ದು, ಇದು ಬಿಜೆಪಿಗೆ ತೀವ್ರ ಮುಖಭಂಗ ನೀಡಿದೆ. ಈ ನಡುವೆ ಮತ್ತೇ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಮೇವ ಪಕ್ಷವಾಗಿ ಮುನ್ನುಗ್ಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಷ್ಟೊಂದು ಒಳ್ಳೆಯ ಲಕ್ಷಣಗಳಲ್ಲ ಎಂಬ ಮಾತು ಕೂಡಾ ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಸಿರುವ ಕ್ರುಶಿಕ ಎವಿ ಅವರು, “ಬಂಗಾಳದಲ್ಲಿ ಮಂದಿಯಾಳ್ವಿಕೆಗೆ ಅನಾರೋಗ್ಯಕರವಾದ ಅಧಿಕಾರ ಕೇಂದ್ರೀಕರಣ ಆಗುತ್ತಿದೆ. ಒಂದೇ ಪಕ್ಷದ ಅಡಿಯಲ್ಲಿ ಭಾರೀ ಬಹುಮತ, ವಿಪಕ್ಷದಲ್ಲಿ ಬಿಜೆಪಿ ಒಂದೇ ಉಸಿರಾಡುತ್ತಿದೆ. ಬಾಕಿ ಯಾವುದೆ ಪಕ್ಷಗಳು ಇಲ್ಲವೇ ಇಲ್ಲ!. ಹೀಗಾದಲ್ಲಿ ವ್ಯವಸ್ಥೆ ಹೇಗೆ ವರ್ತಿಸಬಹುದು? ಇಂದಿರಾ ಗಾಂಧಿಯಂತೆ ಸರ್ವಾಧಿಕಾರಿಯಾಗಿ ಮಮತಾ ಸರ್ವಾಧಿಕಾರಿ ನರೇಂದ್ರ ಮೋದಿಯ ಎದುರು ಅವರೇ ಸರಿ ಅನ್ನೋ ಭಾವನೆ!.

ಬಿಜೆಪಿ ಮಾಡಿದ ಖರ್ಚು, ಮತಿಯವಾಗಿ ಒಡೆದ ಜನ ಸಮುದಾಯ, ಮಾಡಿದ ಕೀಟಲೆ ಎಲ್ಲಾ ಮಮತಾ ಅಧಿಕಾರ ಇನ್ನಷ್ಟು ಗಟ್ಟಿಯಾಗಿಸಿದೆ. ಇದು ಒಳ್ಳೆಯದು ಮಾಡಬಹುದು ಇಲ್ಲವೇ ಭಾರಿ ಕಷ್ಟವನ್ನೇ ಬಂಗಾಳಕ್ಕೆ ತರಬಹುದು!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...