Homeಮುಖಪುಟಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಿಜೆಪಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ವ್ಯಂಗ್ಯವಾಡಿದ್ದಾರೆ. 

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಉಪಚುನಾವಣೆಗಳ ಮೂಲಕ ಮುಂದುವರಿಯುತ್ತಿದೆ. ಇತ್ತೀಚೆಗೆ ನಡೆದಿರುವ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಭದ್ರತಾ ಠೇವಣಿಯನ್ನೂ ಕಳೆದುಕೊಂಡಿದ್ದು, ಭಾರಿ ಮುಖಭಂಗಕ್ಕೆ ಒಳಗಾಗಿದೆ.

ರಾಜ್ಯದ ದೀನ್‌ಹಟಾ ಮತ್ತು ಶಾಂತಿಪುರ್‌ ಕ್ಷೇತ್ರಗಳು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ದೀನ್‌ಹಟಾದಲ್ಲಿ ಆರು ತಿಂಗಳ ಹಿಂದೆಯಷ್ಟೇ ಬಿಜೆಪಿಯಿಂದ ನಿಸಿತ್‌ ‌ಪ್ರಮಾಣಿಕ್ ಗೆದ್ದುಕೊಂಡಿದ್ದರು. ನಂತರ ಅವರಿಗೆ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ನೀಡಲಾಗಿತ್ತು. ಇದರಿಂದಾಗಿ ಅವರು ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಶಾಂತಿಪುರದಲ್ಲಿ ಗೆಲುವು ಕಂಡಿದ್ದ ಜಗನ್ನಾಥ್‌ ಸರ್ಕಾರ್‌‌ ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾಗಿದ್ದ ಅನಿವಾರ್ಯತೆ ಬಿಜೆಪಿಗೆ ಉಂಟಾಗಿತ್ತು. ಆದರೆ ಬಿಜೆಪಿ ಶಾಂತಿಪುರದಲ್ಲಿ ತನ್ನ ಠೇವಣಿಯನ್ನು ಮಾತ್ರವೇ ಉಳಿಸಿಕೊಂಡಿದೆ.

ಉಳಿದಂತೆ ಈ ಹಿಂದೆ ಒಕ್ಕೂಟ ಸರ್ಕಾರದ ಸಚಿವ ಗೆಲುವು ಕಂಡಿದ್ದ ದೀನ್‌ಹಟಾವಾಗಲಿ, ಖಾರ್ದಹೊ ಮತ್ತು ಗೋಸಬಾದ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದ್ದು, ತನ್ನ ಠೀವಣಿಯನ್ನೂ ಉಳಿಸಿಕೊಂಡಿಲ್ಲ.

ರಾಜ್ಯದ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಭರ್ಜರಿ ಗೆಲುವಿನ ಬಗ್ಗೆ ಪತ್ರಿಕ್ರಿಯಿಸಿರುವ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಬಿಜೆಪಿಯ ಜನರಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೂ ಮುಂಚೆ ಹಲವಾರು ಜನರು ಟಿಎಂಸಿಯಿಂದ ಬಿಜೆಪಿಗೆ ವಲಸೆ ಹೋಗಿದ್ದರು. ಆದರೆ ವಿಧಾನಸಭೆಯ ಚುನಾವಣೆ ನಡೆದು ಫಲಿತಾಂಶ ಘೋಷಿಣೆಯಾಗಿ ರಾಜ್ಯದಲ್ಲಿ ಟಿಎಂಸಿ ಸರ್ಕಾರ ರಚನೆಯಾದ ಸ್ವಲ್ಪ ಸಮಯದಲ್ಲೇ, ಇದು ಉಲ್ಟಾ ಆಗಿದೆ. ಬಿಜೆಪಿ ಸೇರಿದ್ದ ಟಿಎಂಸಿಯ ಕಾರ್ಯಕರ್ತರು, ಶಾಸಕರು, ಮಾಜಿ ನಾಯಕರು ಮತ್ತೇ ಟಿಎಂಸಿ ಸೇರಿದ್ದಾರೆ. ಈ ಸರಣಿ ಇನ್ನೂ ಮುಂದುವರೆದಿದ್ದು, ಇದು ಬಿಜೆಪಿಗೆ ತೀವ್ರ ಮುಖಭಂಗ ನೀಡಿದೆ. ಈ ನಡುವೆ ಮತ್ತೇ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಮೇವ ಪಕ್ಷವಾಗಿ ಮುನ್ನುಗ್ಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಷ್ಟೊಂದು ಒಳ್ಳೆಯ ಲಕ್ಷಣಗಳಲ್ಲ ಎಂಬ ಮಾತು ಕೂಡಾ ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಸಿರುವ ಕ್ರುಶಿಕ ಎವಿ ಅವರು, “ಬಂಗಾಳದಲ್ಲಿ ಮಂದಿಯಾಳ್ವಿಕೆಗೆ ಅನಾರೋಗ್ಯಕರವಾದ ಅಧಿಕಾರ ಕೇಂದ್ರೀಕರಣ ಆಗುತ್ತಿದೆ. ಒಂದೇ ಪಕ್ಷದ ಅಡಿಯಲ್ಲಿ ಭಾರೀ ಬಹುಮತ, ವಿಪಕ್ಷದಲ್ಲಿ ಬಿಜೆಪಿ ಒಂದೇ ಉಸಿರಾಡುತ್ತಿದೆ. ಬಾಕಿ ಯಾವುದೆ ಪಕ್ಷಗಳು ಇಲ್ಲವೇ ಇಲ್ಲ!. ಹೀಗಾದಲ್ಲಿ ವ್ಯವಸ್ಥೆ ಹೇಗೆ ವರ್ತಿಸಬಹುದು? ಇಂದಿರಾ ಗಾಂಧಿಯಂತೆ ಸರ್ವಾಧಿಕಾರಿಯಾಗಿ ಮಮತಾ ಸರ್ವಾಧಿಕಾರಿ ನರೇಂದ್ರ ಮೋದಿಯ ಎದುರು ಅವರೇ ಸರಿ ಅನ್ನೋ ಭಾವನೆ!.

ಬಿಜೆಪಿ ಮಾಡಿದ ಖರ್ಚು, ಮತಿಯವಾಗಿ ಒಡೆದ ಜನ ಸಮುದಾಯ, ಮಾಡಿದ ಕೀಟಲೆ ಎಲ್ಲಾ ಮಮತಾ ಅಧಿಕಾರ ಇನ್ನಷ್ಟು ಗಟ್ಟಿಯಾಗಿಸಿದೆ. ಇದು ಒಳ್ಳೆಯದು ಮಾಡಬಹುದು ಇಲ್ಲವೇ ಭಾರಿ ಕಷ್ಟವನ್ನೇ ಬಂಗಾಳಕ್ಕೆ ತರಬಹುದು!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...