Homeಮುಖಪುಟಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

ಬಿಜೆಪಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ವ್ಯಂಗ್ಯವಾಡಿದ್ದಾರೆ. 

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಉಪಚುನಾವಣೆಗಳ ಮೂಲಕ ಮುಂದುವರಿಯುತ್ತಿದೆ. ಇತ್ತೀಚೆಗೆ ನಡೆದಿರುವ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಭದ್ರತಾ ಠೇವಣಿಯನ್ನೂ ಕಳೆದುಕೊಂಡಿದ್ದು, ಭಾರಿ ಮುಖಭಂಗಕ್ಕೆ ಒಳಗಾಗಿದೆ.

ರಾಜ್ಯದ ದೀನ್‌ಹಟಾ ಮತ್ತು ಶಾಂತಿಪುರ್‌ ಕ್ಷೇತ್ರಗಳು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ದೀನ್‌ಹಟಾದಲ್ಲಿ ಆರು ತಿಂಗಳ ಹಿಂದೆಯಷ್ಟೇ ಬಿಜೆಪಿಯಿಂದ ನಿಸಿತ್‌ ‌ಪ್ರಮಾಣಿಕ್ ಗೆದ್ದುಕೊಂಡಿದ್ದರು. ನಂತರ ಅವರಿಗೆ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ನೀಡಲಾಗಿತ್ತು. ಇದರಿಂದಾಗಿ ಅವರು ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಶಾಂತಿಪುರದಲ್ಲಿ ಗೆಲುವು ಕಂಡಿದ್ದ ಜಗನ್ನಾಥ್‌ ಸರ್ಕಾರ್‌‌ ತನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾಗಿದ್ದ ಅನಿವಾರ್ಯತೆ ಬಿಜೆಪಿಗೆ ಉಂಟಾಗಿತ್ತು. ಆದರೆ ಬಿಜೆಪಿ ಶಾಂತಿಪುರದಲ್ಲಿ ತನ್ನ ಠೇವಣಿಯನ್ನು ಮಾತ್ರವೇ ಉಳಿಸಿಕೊಂಡಿದೆ.

ಉಳಿದಂತೆ ಈ ಹಿಂದೆ ಒಕ್ಕೂಟ ಸರ್ಕಾರದ ಸಚಿವ ಗೆಲುವು ಕಂಡಿದ್ದ ದೀನ್‌ಹಟಾವಾಗಲಿ, ಖಾರ್ದಹೊ ಮತ್ತು ಗೋಸಬಾದ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದ್ದು, ತನ್ನ ಠೀವಣಿಯನ್ನೂ ಉಳಿಸಿಕೊಂಡಿಲ್ಲ.

ರಾಜ್ಯದ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಭರ್ಜರಿ ಗೆಲುವಿನ ಬಗ್ಗೆ ಪತ್ರಿಕ್ರಿಯಿಸಿರುವ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಬಿಜೆಪಿಯ ಜನರಿಗೆ ನಿಜವಾದ ಅರ್ಥದಲ್ಲಿ ಪಟಾಕಿ ರಹಿತ ದೀಪಾವಳಿಯ ಶುಭವನ್ನು ಹಾರೈಸುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೂ ಮುಂಚೆ ಹಲವಾರು ಜನರು ಟಿಎಂಸಿಯಿಂದ ಬಿಜೆಪಿಗೆ ವಲಸೆ ಹೋಗಿದ್ದರು. ಆದರೆ ವಿಧಾನಸಭೆಯ ಚುನಾವಣೆ ನಡೆದು ಫಲಿತಾಂಶ ಘೋಷಿಣೆಯಾಗಿ ರಾಜ್ಯದಲ್ಲಿ ಟಿಎಂಸಿ ಸರ್ಕಾರ ರಚನೆಯಾದ ಸ್ವಲ್ಪ ಸಮಯದಲ್ಲೇ, ಇದು ಉಲ್ಟಾ ಆಗಿದೆ. ಬಿಜೆಪಿ ಸೇರಿದ್ದ ಟಿಎಂಸಿಯ ಕಾರ್ಯಕರ್ತರು, ಶಾಸಕರು, ಮಾಜಿ ನಾಯಕರು ಮತ್ತೇ ಟಿಎಂಸಿ ಸೇರಿದ್ದಾರೆ. ಈ ಸರಣಿ ಇನ್ನೂ ಮುಂದುವರೆದಿದ್ದು, ಇದು ಬಿಜೆಪಿಗೆ ತೀವ್ರ ಮುಖಭಂಗ ನೀಡಿದೆ. ಈ ನಡುವೆ ಮತ್ತೇ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಮೇವ ಪಕ್ಷವಾಗಿ ಮುನ್ನುಗ್ಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಷ್ಟೊಂದು ಒಳ್ಳೆಯ ಲಕ್ಷಣಗಳಲ್ಲ ಎಂಬ ಮಾತು ಕೂಡಾ ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಸಿರುವ ಕ್ರುಶಿಕ ಎವಿ ಅವರು, “ಬಂಗಾಳದಲ್ಲಿ ಮಂದಿಯಾಳ್ವಿಕೆಗೆ ಅನಾರೋಗ್ಯಕರವಾದ ಅಧಿಕಾರ ಕೇಂದ್ರೀಕರಣ ಆಗುತ್ತಿದೆ. ಒಂದೇ ಪಕ್ಷದ ಅಡಿಯಲ್ಲಿ ಭಾರೀ ಬಹುಮತ, ವಿಪಕ್ಷದಲ್ಲಿ ಬಿಜೆಪಿ ಒಂದೇ ಉಸಿರಾಡುತ್ತಿದೆ. ಬಾಕಿ ಯಾವುದೆ ಪಕ್ಷಗಳು ಇಲ್ಲವೇ ಇಲ್ಲ!. ಹೀಗಾದಲ್ಲಿ ವ್ಯವಸ್ಥೆ ಹೇಗೆ ವರ್ತಿಸಬಹುದು? ಇಂದಿರಾ ಗಾಂಧಿಯಂತೆ ಸರ್ವಾಧಿಕಾರಿಯಾಗಿ ಮಮತಾ ಸರ್ವಾಧಿಕಾರಿ ನರೇಂದ್ರ ಮೋದಿಯ ಎದುರು ಅವರೇ ಸರಿ ಅನ್ನೋ ಭಾವನೆ!.

ಬಿಜೆಪಿ ಮಾಡಿದ ಖರ್ಚು, ಮತಿಯವಾಗಿ ಒಡೆದ ಜನ ಸಮುದಾಯ, ಮಾಡಿದ ಕೀಟಲೆ ಎಲ್ಲಾ ಮಮತಾ ಅಧಿಕಾರ ಇನ್ನಷ್ಟು ಗಟ್ಟಿಯಾಗಿಸಿದೆ. ಇದು ಒಳ್ಳೆಯದು ಮಾಡಬಹುದು ಇಲ್ಲವೇ ಭಾರಿ ಕಷ್ಟವನ್ನೇ ಬಂಗಾಳಕ್ಕೆ ತರಬಹುದು!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...