Homeಮುಖಪುಟಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

- Advertisement -
- Advertisement -

ಇತ್ತೀಚೆಗೆ ದೇಶದಾದ್ಯಂತ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಪಶ್ಚಿಮ ಬಂಗಾಳದ 4 ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದೆ. ಆರು ತಿಂಗಳ ಮುಂಚೆ ಚುನಾವಣೆ ನಡೆದಿದ್ದ ಈ ನಾಲ್ಕು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕೇವಲ ಆರು ತಿಂಗಳಲ್ಲಿ ಅಲ್ಲಿನ ಜನರು ತಮ್ಮ ತೀರ್ಮಾನವನ್ನು ಬದಲಿಸಿ ಟಿಎಂಸಿಯನ್ನು ಗೆಲ್ಲಿಸಿದ್ದಾರೆ.

ದೀನ್‌ಹಟಾ, ಶಾಂತಿಪುರ್‌, ಖಾರ್ದಹೊ ಮತ್ತು ಗೋಸಬಾದ ನಾಲ್ಕು ಕ್ಷೇತ್ರಗಳಲ್ಲೂ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದೆ.

ದೀನ್‌ಹಟಾ ಕ್ಷೇತ್ರದಲ್ಲಿ ಬಿಜೆಪಿಯ ನಿಸಿತ್ ಪ್ರಮಾಣಿಕ್ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ತಾನು ಗೆದ್ದದ್ದ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ಟಿಎಂಸಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, 1.89 ಲಕ್ಷ ಮತಗಳನ್ನು ಪಡೆದಿದೆ. ಬಿಜೆಪಿ ಇಲ್ಲಿ ಕೇವಲ 25 ಸಾವಿರ ಮತಗಳನ್ನಷ್ಟೇ ಪಡೆದಿದೆ. ಇಲ್ಲಿ ಟಿಎಂಸಿಯಲ್ಲಿ ಉದ್ಯಾನ್‌ ಗುಹಾ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಅಶೋಕ್ ಮಂಡಲ್‌ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ’ಇದು ರೈತರ ಗೆಲುವು’ ಎಂದ ಅಭ್ಯರ್ಥಿ ಅಭಯ್ ಚೌಟಾಲಾ

ಶಾಂತಿಪುರ್‌ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರು ತಾನು ಗೆದ್ದ ವಿಧಾನಸಭೆಗೆ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರವು ತೆರವಾಗಿತ್ತು. ಟಿಎಂಸಿಯ ಬ್ರಜಾ ಕಿಶೋರ್‌ ಗೋಸ್ವಾಮಿ 11.1 ಲಕ್ಷ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ನಿರಂಜನ್ ಬಿಸ್ವಾಸ್‌ ಕೇವಲ 47 ಸಾವಿರ ಮತಗಳನ್ನು ಪಡೆದಿದ್ದಾರೆ.

ಖಾರ್ದಹೊ ಕ್ಷೇತ್ರವು ಕೋಲ್ಕತ್ತಾದ ಮಾಜಿ ಮೇಯರ್ ಸೋವಂದೇಬ್ ಚಟ್ಟೋಪಾಧ್ಯಾಯ ಸ್ಪರ್ಧಿಸುತ್ತಿರುವ ಕ್ಷೇತ್ರವಾಗಿದೆ. ಅವರು ಮಮತಾ ಬ್ಯಾನರ್ಜಿಗಾಗಿ ಕೋಲ್ಕತ್ತಾದ ಭವಾನಿಪುರ್‌ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ಇಲ್ಲಿ ಅವರು 1.14 ಲಕ್ಷ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಸ್ಪರ್ಧಿಸಿದ್ದ ಜೋತ್‌ ಶಾ 20 ಸಾವಿರ ಮತಗಳನ್ನಷ್ಟೇ ಪಡೆದಿದ್ದಾರೆ.

ಗೋಸಬಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಸ್ಪರ್ಧಿಸಿದ್ದ ಸುಬ್ರತಾ ಮಂಡಲ್‌ 1.60 ಲಕ್ಷ ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಪಲಾಶಾ ರಾಣಾ 18 ಸಾವಿರ ಮತ ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಹಲವರು ಟಿಎಂಸಿಗೆ ಸೇರಿಕೊಂಡಿದ್ದರು. ಬಿಜೆಪಿಗೆ ಈ ಮುಖಭಂಗ ಉಪಚುನಾವಣೆಯಲ್ಲೂ ಮುಂದುವರೆದಿದೆ. ಜೊತೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಮುಂದುವರಿದಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ.

ಇದನ್ನೂ ಓದಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...