Homeಮುಖಪುಟಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

- Advertisement -
- Advertisement -

ಇತ್ತೀಚೆಗೆ ದೇಶದಾದ್ಯಂತ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಪಶ್ಚಿಮ ಬಂಗಾಳದ 4 ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದೆ. ಆರು ತಿಂಗಳ ಮುಂಚೆ ಚುನಾವಣೆ ನಡೆದಿದ್ದ ಈ ನಾಲ್ಕು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕೇವಲ ಆರು ತಿಂಗಳಲ್ಲಿ ಅಲ್ಲಿನ ಜನರು ತಮ್ಮ ತೀರ್ಮಾನವನ್ನು ಬದಲಿಸಿ ಟಿಎಂಸಿಯನ್ನು ಗೆಲ್ಲಿಸಿದ್ದಾರೆ.

ದೀನ್‌ಹಟಾ, ಶಾಂತಿಪುರ್‌, ಖಾರ್ದಹೊ ಮತ್ತು ಗೋಸಬಾದ ನಾಲ್ಕು ಕ್ಷೇತ್ರಗಳಲ್ಲೂ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದೆ.

ದೀನ್‌ಹಟಾ ಕ್ಷೇತ್ರದಲ್ಲಿ ಬಿಜೆಪಿಯ ನಿಸಿತ್ ಪ್ರಮಾಣಿಕ್ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ತಾನು ಗೆದ್ದದ್ದ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ಟಿಎಂಸಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, 1.89 ಲಕ್ಷ ಮತಗಳನ್ನು ಪಡೆದಿದೆ. ಬಿಜೆಪಿ ಇಲ್ಲಿ ಕೇವಲ 25 ಸಾವಿರ ಮತಗಳನ್ನಷ್ಟೇ ಪಡೆದಿದೆ. ಇಲ್ಲಿ ಟಿಎಂಸಿಯಲ್ಲಿ ಉದ್ಯಾನ್‌ ಗುಹಾ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಅಶೋಕ್ ಮಂಡಲ್‌ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ’ಇದು ರೈತರ ಗೆಲುವು’ ಎಂದ ಅಭ್ಯರ್ಥಿ ಅಭಯ್ ಚೌಟಾಲಾ

ಶಾಂತಿಪುರ್‌ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರು ತಾನು ಗೆದ್ದ ವಿಧಾನಸಭೆಗೆ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರವು ತೆರವಾಗಿತ್ತು. ಟಿಎಂಸಿಯ ಬ್ರಜಾ ಕಿಶೋರ್‌ ಗೋಸ್ವಾಮಿ 11.1 ಲಕ್ಷ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ನಿರಂಜನ್ ಬಿಸ್ವಾಸ್‌ ಕೇವಲ 47 ಸಾವಿರ ಮತಗಳನ್ನು ಪಡೆದಿದ್ದಾರೆ.

ಖಾರ್ದಹೊ ಕ್ಷೇತ್ರವು ಕೋಲ್ಕತ್ತಾದ ಮಾಜಿ ಮೇಯರ್ ಸೋವಂದೇಬ್ ಚಟ್ಟೋಪಾಧ್ಯಾಯ ಸ್ಪರ್ಧಿಸುತ್ತಿರುವ ಕ್ಷೇತ್ರವಾಗಿದೆ. ಅವರು ಮಮತಾ ಬ್ಯಾನರ್ಜಿಗಾಗಿ ಕೋಲ್ಕತ್ತಾದ ಭವಾನಿಪುರ್‌ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ಇಲ್ಲಿ ಅವರು 1.14 ಲಕ್ಷ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಸ್ಪರ್ಧಿಸಿದ್ದ ಜೋತ್‌ ಶಾ 20 ಸಾವಿರ ಮತಗಳನ್ನಷ್ಟೇ ಪಡೆದಿದ್ದಾರೆ.

ಗೋಸಬಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಸ್ಪರ್ಧಿಸಿದ್ದ ಸುಬ್ರತಾ ಮಂಡಲ್‌ 1.60 ಲಕ್ಷ ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಪಲಾಶಾ ರಾಣಾ 18 ಸಾವಿರ ಮತ ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಹಲವರು ಟಿಎಂಸಿಗೆ ಸೇರಿಕೊಂಡಿದ್ದರು. ಬಿಜೆಪಿಗೆ ಈ ಮುಖಭಂಗ ಉಪಚುನಾವಣೆಯಲ್ಲೂ ಮುಂದುವರೆದಿದೆ. ಜೊತೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಮುಂದುವರಿದಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ.

ಇದನ್ನೂ ಓದಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...