Homeಮುಖಪುಟಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

ಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಗರುಲಿಯಾ ಪುರಸಭೆ ಚುನಾವಣೆಯಿಂದ ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಭಾನುವಾರ ತೃಣಮೂಲ ಕಾಂಗ್ರೆಸ್‌ಗೆ ವಾಪಸ್ ಬಂದಿದ್ದಾರೆ. ಬಿಜೆಪಿ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗರುಲಿಯಾ ಸೇರಿದಂತೆ ಪಶ್ಚಿಮ ಬಂಗಾಳದ 108 ಪುರಸಭೆಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಈ ಮೂವರನ್ನು ಬಿಜೆಪಿಯಿಂದ ಗರುಲಿಯಾ ಪುರಸಭೆಯ ವಾರ್ಡ್ ಸಂಖ್ಯೆ 12, 17 ಮತ್ತು 18 ರಿಂದ ಕಣಕ್ಕಿಳಿಸಲಾಗಿತ್ತು.

ಬಿಜೆಪಿಯ ಬ್ಯಾರಕ್‌ಪೋರ್ ಸಂಸದ ಅರ್ಜುನ್ ಸಿಂಗ್ ಅವರ ಸಂಬಂಧಿಕರಾದ ಮಾಜಿ ಶಾಸಕ ಸುನಿಲ್ ಸಿಂಗ್, ಅವರ ಮಗ ಆದಿತ್ಯ ಮತ್ತು ಗರುಲಿಯಾ ಪುರಸಭೆಯ ಮಾಜಿ ಅಧ್ಯಕ್ಷ ಸೌರಭ್ ಸಿಂಗ್ ಶನಿವಾರ ಬಿಜೆಪಿಯಿಂದ ಸಲ್ಲಿಸಿದ್ದ ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದರು. ಇಂದು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಮತ್ತು ನೈಹಾಟಿ ಶಾಸಕ ಪಾರ್ಥ ಭೌಮಿಕ್ ಅವರ ಸಮ್ಮುಖದಲ್ಲಿ ತಿತಾಘರ್ ಪಕ್ಷದ ಕಚೇರಿಯಲ್ಲಿ ಟಿಎಂಸಿಗೆ ಮರು ಸೇರ್ಪಡೆಗೊಂಡರು.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

“ಬಿಜೆಪಿಯ ಉತ್ತರ 24 ಪರಗಣ ಘಟಕವು ಕಾರ್ಯನಿರ್ವಹಿಸುತ್ತಿರುವ ರೀತಿಯ ಬಗ್ಗೆ ನಮಗೆ ಅತೃಪ್ತಿ ಇದೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನಾ ನೆಲೆ ವೇಗವಾಗಿ ಕುಗ್ಗುತ್ತಿರುವಾಗಲೇ ಸ್ವಪಕ್ಷೀಯ ನಾಯಕರ ಸಂಖ್ಯೆ ಹೆಚ್ಚಿದೆ. ಅಂತಹ ಪಕ್ಷದೊಂದಿಗೆ ನಾವು ಸಂಬಂಧ ಹೊಂದಲು ಬಯಸುವುದಿಲ್ಲ” ಎಂದು ಸೌರಭ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಿಎಂಸಿ ತೊರೆದು ಬಿಜೆಪಿ ಸೇರಿದ್ದು ನಮ್ಮ ಕಡೆಯಿಂದ ತಪ್ಪಾಗಿದೆ ಎಂದು ಸುನಿಲ್ ಸಿಂಗ್ ಹೇಳಿದ್ದಾರೆ.

ಮೂವರ ನಡೆಯನ್ನು ಖಂಡಿಸಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರನ್ನು “ದೇಶದ್ರೋಹಿಗಳು” ಎಂದು ಕರೆದಿದ್ದಾರೆ. ಅರ್ಜುನ್ ಸಿಂಗ್ 2019 ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. “ಟಿಎಂಸಿಯಿಂದ ಕೊಡುಗೆಗಳನ್ನು ಪಡೆದ ಅವರು ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಇವರೆಲ್ಲ ಅಕ್ಷರಶಃ ಬಿಜೆಪಿಯಿಂದ ಮುನ್ಸಿಪಲ್ ಚುನಾವಣೆ ಟಿಕೆಟ್‌ಗಾಗಿ ಭಿಕ್ಷೆ ಬೇಡಿದ್ದರು. ಇನ್ನು ಮುಂದೆ ಅವರು ನನ್ನ ಕುಟುಂಬವಲ್ಲ. ಬಿಜೆಪಿಯಲ್ಲಿರುವವರು ನನ್ನ ಕುಟುಂಬದ ಸದಸ್ಯರು” ಎಂದಿದ್ದಾರೆ.

ಇನ್ನು, ಇತ್ತೀಚಿನ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಶ್ರಮಿಸುತ್ತಿದ್ದರೂ ತಮಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ ಎಂದು ಆರೋಪಿಸಿ 200 ಬಿಜೆಪಿ ಯುವ ಘಟಕದ ಸದಸ್ಯರು ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಖರಗ್‌ಪುರ ಪ್ರದೇಶದಲ್ಲಿ ಟಿಎಂಸಿಗೆ ಇತ್ತಿಚೇಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...