Homeಮುಖಪುಟಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

ಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಗರುಲಿಯಾ ಪುರಸಭೆ ಚುನಾವಣೆಯಿಂದ ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಭಾನುವಾರ ತೃಣಮೂಲ ಕಾಂಗ್ರೆಸ್‌ಗೆ ವಾಪಸ್ ಬಂದಿದ್ದಾರೆ. ಬಿಜೆಪಿ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗರುಲಿಯಾ ಸೇರಿದಂತೆ ಪಶ್ಚಿಮ ಬಂಗಾಳದ 108 ಪುರಸಭೆಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಈ ಮೂವರನ್ನು ಬಿಜೆಪಿಯಿಂದ ಗರುಲಿಯಾ ಪುರಸಭೆಯ ವಾರ್ಡ್ ಸಂಖ್ಯೆ 12, 17 ಮತ್ತು 18 ರಿಂದ ಕಣಕ್ಕಿಳಿಸಲಾಗಿತ್ತು.

ಬಿಜೆಪಿಯ ಬ್ಯಾರಕ್‌ಪೋರ್ ಸಂಸದ ಅರ್ಜುನ್ ಸಿಂಗ್ ಅವರ ಸಂಬಂಧಿಕರಾದ ಮಾಜಿ ಶಾಸಕ ಸುನಿಲ್ ಸಿಂಗ್, ಅವರ ಮಗ ಆದಿತ್ಯ ಮತ್ತು ಗರುಲಿಯಾ ಪುರಸಭೆಯ ಮಾಜಿ ಅಧ್ಯಕ್ಷ ಸೌರಭ್ ಸಿಂಗ್ ಶನಿವಾರ ಬಿಜೆಪಿಯಿಂದ ಸಲ್ಲಿಸಿದ್ದ ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದರು. ಇಂದು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಮತ್ತು ನೈಹಾಟಿ ಶಾಸಕ ಪಾರ್ಥ ಭೌಮಿಕ್ ಅವರ ಸಮ್ಮುಖದಲ್ಲಿ ತಿತಾಘರ್ ಪಕ್ಷದ ಕಚೇರಿಯಲ್ಲಿ ಟಿಎಂಸಿಗೆ ಮರು ಸೇರ್ಪಡೆಗೊಂಡರು.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

“ಬಿಜೆಪಿಯ ಉತ್ತರ 24 ಪರಗಣ ಘಟಕವು ಕಾರ್ಯನಿರ್ವಹಿಸುತ್ತಿರುವ ರೀತಿಯ ಬಗ್ಗೆ ನಮಗೆ ಅತೃಪ್ತಿ ಇದೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನಾ ನೆಲೆ ವೇಗವಾಗಿ ಕುಗ್ಗುತ್ತಿರುವಾಗಲೇ ಸ್ವಪಕ್ಷೀಯ ನಾಯಕರ ಸಂಖ್ಯೆ ಹೆಚ್ಚಿದೆ. ಅಂತಹ ಪಕ್ಷದೊಂದಿಗೆ ನಾವು ಸಂಬಂಧ ಹೊಂದಲು ಬಯಸುವುದಿಲ್ಲ” ಎಂದು ಸೌರಭ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಿಎಂಸಿ ತೊರೆದು ಬಿಜೆಪಿ ಸೇರಿದ್ದು ನಮ್ಮ ಕಡೆಯಿಂದ ತಪ್ಪಾಗಿದೆ ಎಂದು ಸುನಿಲ್ ಸಿಂಗ್ ಹೇಳಿದ್ದಾರೆ.

ಮೂವರ ನಡೆಯನ್ನು ಖಂಡಿಸಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರನ್ನು “ದೇಶದ್ರೋಹಿಗಳು” ಎಂದು ಕರೆದಿದ್ದಾರೆ. ಅರ್ಜುನ್ ಸಿಂಗ್ 2019 ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. “ಟಿಎಂಸಿಯಿಂದ ಕೊಡುಗೆಗಳನ್ನು ಪಡೆದ ಅವರು ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಇವರೆಲ್ಲ ಅಕ್ಷರಶಃ ಬಿಜೆಪಿಯಿಂದ ಮುನ್ಸಿಪಲ್ ಚುನಾವಣೆ ಟಿಕೆಟ್‌ಗಾಗಿ ಭಿಕ್ಷೆ ಬೇಡಿದ್ದರು. ಇನ್ನು ಮುಂದೆ ಅವರು ನನ್ನ ಕುಟುಂಬವಲ್ಲ. ಬಿಜೆಪಿಯಲ್ಲಿರುವವರು ನನ್ನ ಕುಟುಂಬದ ಸದಸ್ಯರು” ಎಂದಿದ್ದಾರೆ.

ಇನ್ನು, ಇತ್ತೀಚಿನ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಶ್ರಮಿಸುತ್ತಿದ್ದರೂ ತಮಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ ಎಂದು ಆರೋಪಿಸಿ 200 ಬಿಜೆಪಿ ಯುವ ಘಟಕದ ಸದಸ್ಯರು ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಖರಗ್‌ಪುರ ಪ್ರದೇಶದಲ್ಲಿ ಟಿಎಂಸಿಗೆ ಇತ್ತಿಚೇಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...