Homeಮುಖಪುಟಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

ಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಗರುಲಿಯಾ ಪುರಸಭೆ ಚುನಾವಣೆಯಿಂದ ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಭಾನುವಾರ ತೃಣಮೂಲ ಕಾಂಗ್ರೆಸ್‌ಗೆ ವಾಪಸ್ ಬಂದಿದ್ದಾರೆ. ಬಿಜೆಪಿ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗರುಲಿಯಾ ಸೇರಿದಂತೆ ಪಶ್ಚಿಮ ಬಂಗಾಳದ 108 ಪುರಸಭೆಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಈ ಮೂವರನ್ನು ಬಿಜೆಪಿಯಿಂದ ಗರುಲಿಯಾ ಪುರಸಭೆಯ ವಾರ್ಡ್ ಸಂಖ್ಯೆ 12, 17 ಮತ್ತು 18 ರಿಂದ ಕಣಕ್ಕಿಳಿಸಲಾಗಿತ್ತು.

ಬಿಜೆಪಿಯ ಬ್ಯಾರಕ್‌ಪೋರ್ ಸಂಸದ ಅರ್ಜುನ್ ಸಿಂಗ್ ಅವರ ಸಂಬಂಧಿಕರಾದ ಮಾಜಿ ಶಾಸಕ ಸುನಿಲ್ ಸಿಂಗ್, ಅವರ ಮಗ ಆದಿತ್ಯ ಮತ್ತು ಗರುಲಿಯಾ ಪುರಸಭೆಯ ಮಾಜಿ ಅಧ್ಯಕ್ಷ ಸೌರಭ್ ಸಿಂಗ್ ಶನಿವಾರ ಬಿಜೆಪಿಯಿಂದ ಸಲ್ಲಿಸಿದ್ದ ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದರು. ಇಂದು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಮತ್ತು ನೈಹಾಟಿ ಶಾಸಕ ಪಾರ್ಥ ಭೌಮಿಕ್ ಅವರ ಸಮ್ಮುಖದಲ್ಲಿ ತಿತಾಘರ್ ಪಕ್ಷದ ಕಚೇರಿಯಲ್ಲಿ ಟಿಎಂಸಿಗೆ ಮರು ಸೇರ್ಪಡೆಗೊಂಡರು.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

“ಬಿಜೆಪಿಯ ಉತ್ತರ 24 ಪರಗಣ ಘಟಕವು ಕಾರ್ಯನಿರ್ವಹಿಸುತ್ತಿರುವ ರೀತಿಯ ಬಗ್ಗೆ ನಮಗೆ ಅತೃಪ್ತಿ ಇದೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನಾ ನೆಲೆ ವೇಗವಾಗಿ ಕುಗ್ಗುತ್ತಿರುವಾಗಲೇ ಸ್ವಪಕ್ಷೀಯ ನಾಯಕರ ಸಂಖ್ಯೆ ಹೆಚ್ಚಿದೆ. ಅಂತಹ ಪಕ್ಷದೊಂದಿಗೆ ನಾವು ಸಂಬಂಧ ಹೊಂದಲು ಬಯಸುವುದಿಲ್ಲ” ಎಂದು ಸೌರಭ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಿಎಂಸಿ ತೊರೆದು ಬಿಜೆಪಿ ಸೇರಿದ್ದು ನಮ್ಮ ಕಡೆಯಿಂದ ತಪ್ಪಾಗಿದೆ ಎಂದು ಸುನಿಲ್ ಸಿಂಗ್ ಹೇಳಿದ್ದಾರೆ.

ಮೂವರ ನಡೆಯನ್ನು ಖಂಡಿಸಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರನ್ನು “ದೇಶದ್ರೋಹಿಗಳು” ಎಂದು ಕರೆದಿದ್ದಾರೆ. ಅರ್ಜುನ್ ಸಿಂಗ್ 2019 ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. “ಟಿಎಂಸಿಯಿಂದ ಕೊಡುಗೆಗಳನ್ನು ಪಡೆದ ಅವರು ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಇವರೆಲ್ಲ ಅಕ್ಷರಶಃ ಬಿಜೆಪಿಯಿಂದ ಮುನ್ಸಿಪಲ್ ಚುನಾವಣೆ ಟಿಕೆಟ್‌ಗಾಗಿ ಭಿಕ್ಷೆ ಬೇಡಿದ್ದರು. ಇನ್ನು ಮುಂದೆ ಅವರು ನನ್ನ ಕುಟುಂಬವಲ್ಲ. ಬಿಜೆಪಿಯಲ್ಲಿರುವವರು ನನ್ನ ಕುಟುಂಬದ ಸದಸ್ಯರು” ಎಂದಿದ್ದಾರೆ.

ಇನ್ನು, ಇತ್ತೀಚಿನ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಶ್ರಮಿಸುತ್ತಿದ್ದರೂ ತಮಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ ಎಂದು ಆರೋಪಿಸಿ 200 ಬಿಜೆಪಿ ಯುವ ಘಟಕದ ಸದಸ್ಯರು ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಖರಗ್‌ಪುರ ಪ್ರದೇಶದಲ್ಲಿ ಟಿಎಂಸಿಗೆ ಇತ್ತಿಚೇಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...