Homeಮುಖಪುಟಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ಗೂ ಚುನಾವಣಾ ಆಯೋಗ ನೋಟಿಸ್ ನೀಡಿದೆ

- Advertisement -
- Advertisement -

ಪಶ್ಚಿಮ ಬಂಗಾಳದ ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲ್ಕು ಜನರಿಗಲ್ಲ 8 ಜನರಿಗೆ ಗುಂಡು ಹಾರಿಸಬೇಕಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ರಾಹುಲ್ ಸಿನ್ಹಾ ಅವರಿಗೆ ಪಶ್ಚಿಮ ಬಂಗಾಳದಲ್ಲಿ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.

ಚುನಾವಣಾ ರ್‍ಯಾಲಿಗಳಲ್ಲಿ ಕೋಮುವಾದಿ ಟೀಕೆಗಳ ಬಗ್ಗೆ ಆರೋಪ ಎದುರಿಸುತ್ತಿರುವ ಬಿಜೆಪಿಯ ಮತ್ತೊಬ್ಬ ನಾಯಕ ಸುವೇಂದು ಅಧಿಕಾರಿ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ.

ಕೂಚ್ ಬೆಹಾರ್‌ನ ಸೀತಾಲ್ಕುಚಿಯಲ್ಲಿ ಮತದಾನದ ಸಂದರ್ಭದಲ್ಲಿ ಗುಂಪೊಂದು ಮತಗಟ್ಟೆಯ ಮೇಲೆ ದಾಳಿ ಮಾಡಿತೆಂದು ಅರೆಸೇನಾ ಪಡೆಗಳು ನಡೆಸಿದ ಗೋಲಿಬಾರ್‌ನಲ್ಲಿ ನಾಲ್ವರು ಮೃತಪಟ್ಟಿದ್ದರು. ಈ ಕಾರ್ಯಾಚರಣೆ ಕುರಿತು ಪ್ರಚೋದನಾಕಾರಿ ಹೇಳಿಕೆ  ನೀಡಿದ್ದಕ್ಕಾಗಿ ರಾಹುಲ್ ಸಿನ್ಹಾ ಮತ್ತು ಬಿಜೆಪಿಯ ಬಂಗಾಳ ಮುಖ್ಯಸ್ಥ ದಿಲೀಪ್ ಘೋಷ್ ವಿರುದ್ಧ ಕ್ರಮಕೈಗೊಳ್ಳಲು ತೃಣಮೂಲ ಕಾಂಗ್ರೆಸ್ ಕೋರಿತ್ತು. ಬಿಜೆಪಿ ನಾಯಕರು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಹಬ್ರಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ರಾಹುಲ್ ಸಿನ್ಹಾ ಚುನಾವಣಾ ಪ್ರಚಾರದಲ್ಲಿ, ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ಗಲಭೆಯಲ್ಲಿ ನಾಲ್ಕು ಜನರನ್ನಲ್ಲ, ಎಂಟು ಜನರನ್ನು ಕೇಂದ್ರ ಪಡೆಗಳು ಗುಂಡಿಕ್ಕಿ ಕೊಂದಿರಬೇಕಿತ್ತು ಎಂದು ಹೇಳಿದ್ದರು.

ಗುರುವಾರ ಮಧ್ಯಾಹ್ನದವರೆಗೆ ಚುನಾವಣಾ ಪ್ರಚಾರ ನಡೆಸಲು ನಿಷೇಧ ಹೇರಿರುವ  ಚುನಾವಣಾ ಆಯೋಗವು ಅವರ ಹೇಳಿಕೆಗಳನ್ನು ಬಲವಾಗಿ ಖಂಡಿಸಿದೆ.  ಚುನಾವಣೆಯ ಸಮಯದಲ್ಲಿ “ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಅಂತಹ ಹೇಳಿಕೆಗಳನ್ನು ಬಳಸದಂತೆ ಎಚ್ಚರಿಕೆ ವಹಿಸಬೇಕು” ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದೆ.

ಸೀತಾಲ್ಕುಚ್ಚಿಯಲ್ಲಿನ ತುಂಟ ಹುಡುಗರು ಗುಂಡೇಟು ತಿಂದಿದ್ದಾರೆ. ಮುಂದಿನ ಹಂತದ ಮತದಾನದಲ್ಲಿ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರೆ ಮತ್ತಷ್ಟು ಗುಂಡೇಟು ತಿನ್ನಬೇಕಾಗುತ್ತದೆ. ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ತರಹದ ಹತ್ಯೆಗಳು ಸಂಭವಿಸಬಹುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಬೆದರಿಕೆ ಹಾಕಿದ್ದರು. ಇವರಿಗೂ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ನಾಳೆ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಂದಿಗ್ರಾಮದಲ್ಲಿ  ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ತೃಣಮೂಲ ನಾಯಕ ಸುವೇಂದು ಅಧಿಕಾರಿ  ಮಮತಾ ಅವರನ್ನು “ಬೇಗಂ” ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದರು. ಜೊತೆಗೆ ಅವರಿಗೆಗೆ ಮತ ಚಲಾಯಿಸುವುದು “ಮಿನಿ ಪಾಕಿಸ್ತಾನ”ಕ್ಕೆ ಮತ ಹಾಕಿದಂತೆ ಎಂದು ವಿವಾದಿತ ಹೇಳಿಕೆಯನ್ನು ನೀಡಿದ್ದರು. ಆದರೆ ಚುನಾವಣಾ ಆಯೋಗ ಸುವೇಮಧು ಅಧಿಕಾರಿಗೆ ಬರಿ ಎಚ್ಚರಿಕೆ ನೀಡಿದೆ.

ಕೇಂದ್ರ ಪಡೆಗಳ ವಿರುದ್ಧ ಮಾಡಿದ ಆರೋಪ ಹಾಗೂ ಅಲ್ಪಸಂಖ್ಯಾತ ಮತದಾರರು ತಮ್ಮ ಮತಗಳನ್ನು ವಿಂಗಡಿಸಲು ಅವಕಾಶ ನೀಡದಂತೆ ಮಾಡಿದ್ದ ಮನವಿಯು ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಆಯೋಗ ಮಮತಾ ಬ್ಯಾನರ್ಜಿ ಅವರಿಗೆ ಪ್ರಚಾರ ನಡೆಸದಂತೆ 24 ಗಂಟೆಗಳ ನಿಷೇಧ ಹೇರಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಕೋಲ್ಕತ್ತಾದ ಗಾಂಧಿ ಪ್ರತಿಮೆಯ ಬಳಿ ಧರಣಿ ಕುಳಿತಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...