Homeಮುಖಪುಟಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ಗೂ ಚುನಾವಣಾ ಆಯೋಗ ನೋಟಿಸ್ ನೀಡಿದೆ

- Advertisement -
- Advertisement -

ಪಶ್ಚಿಮ ಬಂಗಾಳದ ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲ್ಕು ಜನರಿಗಲ್ಲ 8 ಜನರಿಗೆ ಗುಂಡು ಹಾರಿಸಬೇಕಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ರಾಹುಲ್ ಸಿನ್ಹಾ ಅವರಿಗೆ ಪಶ್ಚಿಮ ಬಂಗಾಳದಲ್ಲಿ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.

ಚುನಾವಣಾ ರ್‍ಯಾಲಿಗಳಲ್ಲಿ ಕೋಮುವಾದಿ ಟೀಕೆಗಳ ಬಗ್ಗೆ ಆರೋಪ ಎದುರಿಸುತ್ತಿರುವ ಬಿಜೆಪಿಯ ಮತ್ತೊಬ್ಬ ನಾಯಕ ಸುವೇಂದು ಅಧಿಕಾರಿ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ.

ಕೂಚ್ ಬೆಹಾರ್‌ನ ಸೀತಾಲ್ಕುಚಿಯಲ್ಲಿ ಮತದಾನದ ಸಂದರ್ಭದಲ್ಲಿ ಗುಂಪೊಂದು ಮತಗಟ್ಟೆಯ ಮೇಲೆ ದಾಳಿ ಮಾಡಿತೆಂದು ಅರೆಸೇನಾ ಪಡೆಗಳು ನಡೆಸಿದ ಗೋಲಿಬಾರ್‌ನಲ್ಲಿ ನಾಲ್ವರು ಮೃತಪಟ್ಟಿದ್ದರು. ಈ ಕಾರ್ಯಾಚರಣೆ ಕುರಿತು ಪ್ರಚೋದನಾಕಾರಿ ಹೇಳಿಕೆ  ನೀಡಿದ್ದಕ್ಕಾಗಿ ರಾಹುಲ್ ಸಿನ್ಹಾ ಮತ್ತು ಬಿಜೆಪಿಯ ಬಂಗಾಳ ಮುಖ್ಯಸ್ಥ ದಿಲೀಪ್ ಘೋಷ್ ವಿರುದ್ಧ ಕ್ರಮಕೈಗೊಳ್ಳಲು ತೃಣಮೂಲ ಕಾಂಗ್ರೆಸ್ ಕೋರಿತ್ತು. ಬಿಜೆಪಿ ನಾಯಕರು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಹಬ್ರಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ರಾಹುಲ್ ಸಿನ್ಹಾ ಚುನಾವಣಾ ಪ್ರಚಾರದಲ್ಲಿ, ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ಗಲಭೆಯಲ್ಲಿ ನಾಲ್ಕು ಜನರನ್ನಲ್ಲ, ಎಂಟು ಜನರನ್ನು ಕೇಂದ್ರ ಪಡೆಗಳು ಗುಂಡಿಕ್ಕಿ ಕೊಂದಿರಬೇಕಿತ್ತು ಎಂದು ಹೇಳಿದ್ದರು.

ಗುರುವಾರ ಮಧ್ಯಾಹ್ನದವರೆಗೆ ಚುನಾವಣಾ ಪ್ರಚಾರ ನಡೆಸಲು ನಿಷೇಧ ಹೇರಿರುವ  ಚುನಾವಣಾ ಆಯೋಗವು ಅವರ ಹೇಳಿಕೆಗಳನ್ನು ಬಲವಾಗಿ ಖಂಡಿಸಿದೆ.  ಚುನಾವಣೆಯ ಸಮಯದಲ್ಲಿ “ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಅಂತಹ ಹೇಳಿಕೆಗಳನ್ನು ಬಳಸದಂತೆ ಎಚ್ಚರಿಕೆ ವಹಿಸಬೇಕು” ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದೆ.

ಸೀತಾಲ್ಕುಚ್ಚಿಯಲ್ಲಿನ ತುಂಟ ಹುಡುಗರು ಗುಂಡೇಟು ತಿಂದಿದ್ದಾರೆ. ಮುಂದಿನ ಹಂತದ ಮತದಾನದಲ್ಲಿ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರೆ ಮತ್ತಷ್ಟು ಗುಂಡೇಟು ತಿನ್ನಬೇಕಾಗುತ್ತದೆ. ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ತರಹದ ಹತ್ಯೆಗಳು ಸಂಭವಿಸಬಹುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಬೆದರಿಕೆ ಹಾಕಿದ್ದರು. ಇವರಿಗೂ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ನಾಳೆ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಂದಿಗ್ರಾಮದಲ್ಲಿ  ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ತೃಣಮೂಲ ನಾಯಕ ಸುವೇಂದು ಅಧಿಕಾರಿ  ಮಮತಾ ಅವರನ್ನು “ಬೇಗಂ” ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದರು. ಜೊತೆಗೆ ಅವರಿಗೆಗೆ ಮತ ಚಲಾಯಿಸುವುದು “ಮಿನಿ ಪಾಕಿಸ್ತಾನ”ಕ್ಕೆ ಮತ ಹಾಕಿದಂತೆ ಎಂದು ವಿವಾದಿತ ಹೇಳಿಕೆಯನ್ನು ನೀಡಿದ್ದರು. ಆದರೆ ಚುನಾವಣಾ ಆಯೋಗ ಸುವೇಮಧು ಅಧಿಕಾರಿಗೆ ಬರಿ ಎಚ್ಚರಿಕೆ ನೀಡಿದೆ.

ಕೇಂದ್ರ ಪಡೆಗಳ ವಿರುದ್ಧ ಮಾಡಿದ ಆರೋಪ ಹಾಗೂ ಅಲ್ಪಸಂಖ್ಯಾತ ಮತದಾರರು ತಮ್ಮ ಮತಗಳನ್ನು ವಿಂಗಡಿಸಲು ಅವಕಾಶ ನೀಡದಂತೆ ಮಾಡಿದ್ದ ಮನವಿಯು ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಆಯೋಗ ಮಮತಾ ಬ್ಯಾನರ್ಜಿ ಅವರಿಗೆ ಪ್ರಚಾರ ನಡೆಸದಂತೆ 24 ಗಂಟೆಗಳ ನಿಷೇಧ ಹೇರಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಕೋಲ್ಕತ್ತಾದ ಗಾಂಧಿ ಪ್ರತಿಮೆಯ ಬಳಿ ಧರಣಿ ಕುಳಿತಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...