Homeಮುಖಪುಟಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ಗೂ ಚುನಾವಣಾ ಆಯೋಗ ನೋಟಿಸ್ ನೀಡಿದೆ

- Advertisement -
- Advertisement -

ಪಶ್ಚಿಮ ಬಂಗಾಳದ ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲ್ಕು ಜನರಿಗಲ್ಲ 8 ಜನರಿಗೆ ಗುಂಡು ಹಾರಿಸಬೇಕಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ರಾಹುಲ್ ಸಿನ್ಹಾ ಅವರಿಗೆ ಪಶ್ಚಿಮ ಬಂಗಾಳದಲ್ಲಿ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.

ಚುನಾವಣಾ ರ್‍ಯಾಲಿಗಳಲ್ಲಿ ಕೋಮುವಾದಿ ಟೀಕೆಗಳ ಬಗ್ಗೆ ಆರೋಪ ಎದುರಿಸುತ್ತಿರುವ ಬಿಜೆಪಿಯ ಮತ್ತೊಬ್ಬ ನಾಯಕ ಸುವೇಂದು ಅಧಿಕಾರಿ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ.

ಕೂಚ್ ಬೆಹಾರ್‌ನ ಸೀತಾಲ್ಕುಚಿಯಲ್ಲಿ ಮತದಾನದ ಸಂದರ್ಭದಲ್ಲಿ ಗುಂಪೊಂದು ಮತಗಟ್ಟೆಯ ಮೇಲೆ ದಾಳಿ ಮಾಡಿತೆಂದು ಅರೆಸೇನಾ ಪಡೆಗಳು ನಡೆಸಿದ ಗೋಲಿಬಾರ್‌ನಲ್ಲಿ ನಾಲ್ವರು ಮೃತಪಟ್ಟಿದ್ದರು. ಈ ಕಾರ್ಯಾಚರಣೆ ಕುರಿತು ಪ್ರಚೋದನಾಕಾರಿ ಹೇಳಿಕೆ  ನೀಡಿದ್ದಕ್ಕಾಗಿ ರಾಹುಲ್ ಸಿನ್ಹಾ ಮತ್ತು ಬಿಜೆಪಿಯ ಬಂಗಾಳ ಮುಖ್ಯಸ್ಥ ದಿಲೀಪ್ ಘೋಷ್ ವಿರುದ್ಧ ಕ್ರಮಕೈಗೊಳ್ಳಲು ತೃಣಮೂಲ ಕಾಂಗ್ರೆಸ್ ಕೋರಿತ್ತು. ಬಿಜೆಪಿ ನಾಯಕರು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಹಬ್ರಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ರಾಹುಲ್ ಸಿನ್ಹಾ ಚುನಾವಣಾ ಪ್ರಚಾರದಲ್ಲಿ, ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ಗಲಭೆಯಲ್ಲಿ ನಾಲ್ಕು ಜನರನ್ನಲ್ಲ, ಎಂಟು ಜನರನ್ನು ಕೇಂದ್ರ ಪಡೆಗಳು ಗುಂಡಿಕ್ಕಿ ಕೊಂದಿರಬೇಕಿತ್ತು ಎಂದು ಹೇಳಿದ್ದರು.

ಗುರುವಾರ ಮಧ್ಯಾಹ್ನದವರೆಗೆ ಚುನಾವಣಾ ಪ್ರಚಾರ ನಡೆಸಲು ನಿಷೇಧ ಹೇರಿರುವ  ಚುನಾವಣಾ ಆಯೋಗವು ಅವರ ಹೇಳಿಕೆಗಳನ್ನು ಬಲವಾಗಿ ಖಂಡಿಸಿದೆ.  ಚುನಾವಣೆಯ ಸಮಯದಲ್ಲಿ “ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಅಂತಹ ಹೇಳಿಕೆಗಳನ್ನು ಬಳಸದಂತೆ ಎಚ್ಚರಿಕೆ ವಹಿಸಬೇಕು” ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದೆ.

ಸೀತಾಲ್ಕುಚ್ಚಿಯಲ್ಲಿನ ತುಂಟ ಹುಡುಗರು ಗುಂಡೇಟು ತಿಂದಿದ್ದಾರೆ. ಮುಂದಿನ ಹಂತದ ಮತದಾನದಲ್ಲಿ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರೆ ಮತ್ತಷ್ಟು ಗುಂಡೇಟು ತಿನ್ನಬೇಕಾಗುತ್ತದೆ. ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ತರಹದ ಹತ್ಯೆಗಳು ಸಂಭವಿಸಬಹುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಬೆದರಿಕೆ ಹಾಕಿದ್ದರು. ಇವರಿಗೂ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ನಾಳೆ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಂದಿಗ್ರಾಮದಲ್ಲಿ  ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ತೃಣಮೂಲ ನಾಯಕ ಸುವೇಂದು ಅಧಿಕಾರಿ  ಮಮತಾ ಅವರನ್ನು “ಬೇಗಂ” ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದರು. ಜೊತೆಗೆ ಅವರಿಗೆಗೆ ಮತ ಚಲಾಯಿಸುವುದು “ಮಿನಿ ಪಾಕಿಸ್ತಾನ”ಕ್ಕೆ ಮತ ಹಾಕಿದಂತೆ ಎಂದು ವಿವಾದಿತ ಹೇಳಿಕೆಯನ್ನು ನೀಡಿದ್ದರು. ಆದರೆ ಚುನಾವಣಾ ಆಯೋಗ ಸುವೇಮಧು ಅಧಿಕಾರಿಗೆ ಬರಿ ಎಚ್ಚರಿಕೆ ನೀಡಿದೆ.

ಕೇಂದ್ರ ಪಡೆಗಳ ವಿರುದ್ಧ ಮಾಡಿದ ಆರೋಪ ಹಾಗೂ ಅಲ್ಪಸಂಖ್ಯಾತ ಮತದಾರರು ತಮ್ಮ ಮತಗಳನ್ನು ವಿಂಗಡಿಸಲು ಅವಕಾಶ ನೀಡದಂತೆ ಮಾಡಿದ್ದ ಮನವಿಯು ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಆಯೋಗ ಮಮತಾ ಬ್ಯಾನರ್ಜಿ ಅವರಿಗೆ ಪ್ರಚಾರ ನಡೆಸದಂತೆ 24 ಗಂಟೆಗಳ ನಿಷೇಧ ಹೇರಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಕೋಲ್ಕತ್ತಾದ ಗಾಂಧಿ ಪ್ರತಿಮೆಯ ಬಳಿ ಧರಣಿ ಕುಳಿತಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...