Homeಮುಖಪುಟಬಂಗಾಳ ಚುನಾವಣೆ: ಕೊರೊನಾ ಕರಿನೆರಳಿನಲ್ಲಿ 6ನೇ ಹಂತದ ಮತದಾನ

ಬಂಗಾಳ ಚುನಾವಣೆ: ಕೊರೊನಾ ಕರಿನೆರಳಿನಲ್ಲಿ 6ನೇ ಹಂತದ ಮತದಾನ

ಕೊರೊನಾ ಉಲ್ಬಣದ ನಡುವೆ ಬಂಗಾಳದಲ್ಲಿ ಅಮಿತ್ ಶಾ ಮೂರು ರ್‍ಯಾಲಿಗಳು, ದಿಲೀಪ್ ಘೋಷ್ 4 ರೋಡ್ ಶೋಗಳು, ಸುವೇಂಧು ಅಧಿಕಾರಿ ಕೋಲ್ಕತ್ತಾದಲ್ಲಿ 3 ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆಯಿಂದ ದೇಶದಲ್ಲಿ ಜನ ತತ್ತರಿಸಿದ್ದಾರೆ. ಇಂತಹ ಸಮಯದಲ್ಲೂ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಆರನೇ ಹಂತದ ಮತದಾನ ನಡೆಯುತ್ತಿದೆ. 8 ಹಂತಗಳ ಮತದಾನದಲ್ಲಿ ಇನ್ನೂ 2 ಹಂತಗಳು ಬಾಕಿ ಇವೆ.

ಮತದಾನದ ಹಂತಗಳನ್ನು ಕಡಿಮೆ ಮಾಡಿ ಒಂದೇ ದಿನ ಚುನಾವಣೆ ನಡೆಸಿ ಎಂದು ಹಲವು ಬಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಆದರೆ ಚುನಾವಣಾ ಆಯೋಗ ಅವರ ಮನವಿಯನ್ನು ತಿರಸ್ಕರಿಸಿದೆ.

ಕೊರೊನಾ ಪ್ರಕರಣಗಳ ಕರಿನೆರಳಿನಲ್ಲಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಚುನಾವಾಣ ರ್‍ಯಾಲಿಗಳಿಂದ ಕೊರೊನಾ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಬಂಗಾಳದಲ್ಲಿ ಪ್ರತಿದಿನದ ಕೊರೊನಾ ಪ್ರಕರಣಗಳು 10,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 10,748 ಹೊಸ ಪ್ರಕರಣಗಳನ್ನು ದಾಖಲಿಸಿದೆ. ಈ ಹಂತದಲ್ಲಿ ನಾಲ್ಕು ಜಿಲ್ಲೆಗಳಲ್ಲಿ 43 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಇದನ್ನೂ ಓದಿ: ಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಉತ್ತರ 24 ಪರಗಣ ಜಿಲ್ಲೆಯ 17 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ, ನಾಡಿಯಾ ಮತ್ತು ಉತ್ತರ ದಿನಾಜ್‌ಪುರದಲ್ಲಿ ತಲಾ ಒಂಬತ್ತು ಮತ್ತು ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ಎಂಟು ಮತದಾನ ಆರಂಭವಾಯಿತು.

ಆರನೇ ಹಂತದ ಮತದಾನ ಹಲವಾರು ಪ್ರಮುಖ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ. ಮೂವರು ಮಂತ್ರಿಗಳು, ಮೂವರು ಚಲನಚಿತ್ರ ತಾರೆಯರು, ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡ ಮೊದಲ ತೃಣಮೂಲ ನಾಯಕ ಮುಕುಲ್ ರಾಯ್ ಅವರ ಭವಿಷ್ಯ ಇಂದು ಮತ ಪೆಟ್ಟಿಗೆಯಲ್ಲಿ ಭದ್ರವಾಗಲಿದೆ.

ಮತದಾನ ನಡೆಯುತ್ತಿರುವ ಈ 43 ಸ್ಥಾನಗಳು, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮತ ಪಾಲನ್ನು ಹೆಚ್ಚಾಗಲು ಭಾರಿ ಕೊಡುಗೆ ನೀಡಿವೆ. 2016 ರ ವಿಧಾನಸಭಾ ಚುನಾವಣೆಯಲ್ಲಿ ಶೇ 10 ರಷ್ಟಿದ್ದ ಬಿಜೆಪಿಯ ಮತಗಳು 2019 ರಲ್ಲಿ ಶೇ 41 ರಷ್ಟು ಹೆಚ್ಚಾಗಲು ಈ 43 ಸ್ಥಾನಗಳ ಪಾತ್ರ ಅಧಿವಾಗಿದೆ.

ಕೊರೊನಾ ಹೆಚ್ಚಾಗುತ್ತಿದ್ದರೂ, ರಾಜಕೀಯ ನಾಯಕರು ಪ್ರಚಾರ ರ್‍ಯಾಲಿ ನಿಲ್ಲಿಸಿಲ್ಲ. ಕೇಂದ್ರ ಸಚಿವ ಅಮಿತ್ ಶಾ  ಬುಧವಾರ ಮೂರು ರ್‍ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ನಾಲ್ಕು ರೋಡ್ ಶೋಗಳನ್ನು ಮಾಡಲಿದ್ದಾರೆ. ಬಿಜೆಪಿಯ ಸುವೇಂಧು ಅಧಿಕಾರಿ ಕೋಲ್ಕತ್ತಾದಲ್ಲಿ ಮೂರು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...