Homeಮುಖಪುಟಬಂಗಾಳ ಚುನಾವಣೆ: ಕೊರೊನಾ ಕರಿನೆರಳಿನಲ್ಲಿ 6ನೇ ಹಂತದ ಮತದಾನ

ಬಂಗಾಳ ಚುನಾವಣೆ: ಕೊರೊನಾ ಕರಿನೆರಳಿನಲ್ಲಿ 6ನೇ ಹಂತದ ಮತದಾನ

ಕೊರೊನಾ ಉಲ್ಬಣದ ನಡುವೆ ಬಂಗಾಳದಲ್ಲಿ ಅಮಿತ್ ಶಾ ಮೂರು ರ್‍ಯಾಲಿಗಳು, ದಿಲೀಪ್ ಘೋಷ್ 4 ರೋಡ್ ಶೋಗಳು, ಸುವೇಂಧು ಅಧಿಕಾರಿ ಕೋಲ್ಕತ್ತಾದಲ್ಲಿ 3 ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆಯಿಂದ ದೇಶದಲ್ಲಿ ಜನ ತತ್ತರಿಸಿದ್ದಾರೆ. ಇಂತಹ ಸಮಯದಲ್ಲೂ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಆರನೇ ಹಂತದ ಮತದಾನ ನಡೆಯುತ್ತಿದೆ. 8 ಹಂತಗಳ ಮತದಾನದಲ್ಲಿ ಇನ್ನೂ 2 ಹಂತಗಳು ಬಾಕಿ ಇವೆ.

ಮತದಾನದ ಹಂತಗಳನ್ನು ಕಡಿಮೆ ಮಾಡಿ ಒಂದೇ ದಿನ ಚುನಾವಣೆ ನಡೆಸಿ ಎಂದು ಹಲವು ಬಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಆದರೆ ಚುನಾವಣಾ ಆಯೋಗ ಅವರ ಮನವಿಯನ್ನು ತಿರಸ್ಕರಿಸಿದೆ.

ಕೊರೊನಾ ಪ್ರಕರಣಗಳ ಕರಿನೆರಳಿನಲ್ಲಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಚುನಾವಾಣ ರ್‍ಯಾಲಿಗಳಿಂದ ಕೊರೊನಾ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಬಂಗಾಳದಲ್ಲಿ ಪ್ರತಿದಿನದ ಕೊರೊನಾ ಪ್ರಕರಣಗಳು 10,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 10,748 ಹೊಸ ಪ್ರಕರಣಗಳನ್ನು ದಾಖಲಿಸಿದೆ. ಈ ಹಂತದಲ್ಲಿ ನಾಲ್ಕು ಜಿಲ್ಲೆಗಳಲ್ಲಿ 43 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಇದನ್ನೂ ಓದಿ: ಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಉತ್ತರ 24 ಪರಗಣ ಜಿಲ್ಲೆಯ 17 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ, ನಾಡಿಯಾ ಮತ್ತು ಉತ್ತರ ದಿನಾಜ್‌ಪುರದಲ್ಲಿ ತಲಾ ಒಂಬತ್ತು ಮತ್ತು ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ಎಂಟು ಮತದಾನ ಆರಂಭವಾಯಿತು.

ಆರನೇ ಹಂತದ ಮತದಾನ ಹಲವಾರು ಪ್ರಮುಖ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ. ಮೂವರು ಮಂತ್ರಿಗಳು, ಮೂವರು ಚಲನಚಿತ್ರ ತಾರೆಯರು, ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡ ಮೊದಲ ತೃಣಮೂಲ ನಾಯಕ ಮುಕುಲ್ ರಾಯ್ ಅವರ ಭವಿಷ್ಯ ಇಂದು ಮತ ಪೆಟ್ಟಿಗೆಯಲ್ಲಿ ಭದ್ರವಾಗಲಿದೆ.

ಮತದಾನ ನಡೆಯುತ್ತಿರುವ ಈ 43 ಸ್ಥಾನಗಳು, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮತ ಪಾಲನ್ನು ಹೆಚ್ಚಾಗಲು ಭಾರಿ ಕೊಡುಗೆ ನೀಡಿವೆ. 2016 ರ ವಿಧಾನಸಭಾ ಚುನಾವಣೆಯಲ್ಲಿ ಶೇ 10 ರಷ್ಟಿದ್ದ ಬಿಜೆಪಿಯ ಮತಗಳು 2019 ರಲ್ಲಿ ಶೇ 41 ರಷ್ಟು ಹೆಚ್ಚಾಗಲು ಈ 43 ಸ್ಥಾನಗಳ ಪಾತ್ರ ಅಧಿವಾಗಿದೆ.

ಕೊರೊನಾ ಹೆಚ್ಚಾಗುತ್ತಿದ್ದರೂ, ರಾಜಕೀಯ ನಾಯಕರು ಪ್ರಚಾರ ರ್‍ಯಾಲಿ ನಿಲ್ಲಿಸಿಲ್ಲ. ಕೇಂದ್ರ ಸಚಿವ ಅಮಿತ್ ಶಾ  ಬುಧವಾರ ಮೂರು ರ್‍ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ನಾಲ್ಕು ರೋಡ್ ಶೋಗಳನ್ನು ಮಾಡಲಿದ್ದಾರೆ. ಬಿಜೆಪಿಯ ಸುವೇಂಧು ಅಧಿಕಾರಿ ಕೋಲ್ಕತ್ತಾದಲ್ಲಿ ಮೂರು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...