Homeಮುಖಪುಟಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕೊನೆಯ ದಿನವಾಗಿತ್ತು. ಈ ಹಿನ್ನೆಲೆ ಬಂಗಾಳದ ಚುನಾವಣಾ ಕೇಂದ್ರ ಬಿಂದುವಾಗಿರುವ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಮಿತ್ ಶಾ ಪ್ರಚಾರ ನಡೆಸಿದ್ದಾರೆ. ಮಹಿಳಾ ಸುರಕ್ಷತೆಯನ್ನು ಆಧಾರವಾಗಿಟ್ಟುಕೊಂಡು ಎರಡು ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸಿವೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದರೆ, ಬಿಜೆಪಿ ಪಕ್ಷದಲ್ಲೇ ಅಲ್ಲಿನ ಓರ್ವ ಮಹಿಳೆಯ ಹತ್ಯೆ ನಡೆಸಲು ಸಂಚು ರೂಪಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಬೆಂಬಲಿಗರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಆರೋಪಿಸಲಾಗಿದ್ದ ಬಿಜೆಪಿ ಕಾರ್ಯಕರ್ತೆಯೊಬ್ಬರ 85 ವರ್ಷದ ತಾಯಿಯ ಸಾವನ್ನು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪದೇ ಪದೇ ಪ್ರಸ್ತಾಪಿಸುತ್ತಿದೆ. ನಂದಿಗ್ರಾಮ್‌ನಲ್ಲಿ ರೋಡ್ ಶೋ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಘಟನೆಯನ್ನು ಉಲ್ಲೇಖಿಸಿ ಟಿಎಂಸಿಯನ್ನು ಸೋಲಿಸಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇನ್ನು 15 ದಿನ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್‍ಯಾಲಿ ನಡೆಸುವಂತಿಲ್ಲ- ಸಿಎಂ ಯಡಿಯೂರಪ್ಪ

ನಂದಿಗ್ರಾಮದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಅವರು (ಬಿಜೆಪಿ) ತಮ್ಮದೆ ಜನರನ್ನು ಕೊಲ್ಲುವ ಯೋಜನೆಯನ್ನು ಹೊಂದಿದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶಗಳಿಂದ ಗೂಂಡಾಗಳನ್ನು ಕರೆಸಿದ್ದಾರೆ. ನಂತರ ಅದನ್ನು ನಮ್ಮ ಕಾರ್ಯಕರ್ತರ ಮೇಲೆ ಹಾಕುವ ಯೋಜನೆ ಹೊಂದಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಮಾಹಿತಿ ಇದೆ. ಜಾಗರೂಕರಾಗಿರಿ” ಎಂದು ಆರೋಪಿಸಿದ್ದಾರೆ.

ಇತ್ತ, ಮತ್ತೊಂದು ರ್‍ಯಾಲಿಯಲ್ಲಿ ಮಾತನಾಡಿರುವ ಅಮಿತ್ ಶಾ, ‘ನಾನಿಲ್ಲಿಗೆ ತಲುಪಿದ ಕೂಡಲೇ ಒಂದು ದುಃಖದ ಸುದ್ದಿ ಕೇಳಿದೆ. ಮಮತಾ ಬ್ಯಾನರ್ಜಿ ಅವರು ಇರುವ ಸ್ಥಳದ 5 ಕಿ.ಮೀ ವ್ಯಾಪ್ತಿಯೊಳಗೆ ಮಹಿಳೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಇರುವ ಪ್ರದೇಶದಲ್ಲಿಯೇ ಅತ್ಯಾಚಾರ ನಡೆದಿದೆ ಎಂದಾದರೆ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿರಲು ಹೇಗೆ ಸಾಧ್ಯ’ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ಮಹಿಳೆಯರು ಸುರಕ್ಷತೆಯಿಂದ ಇರಬೇಕೆಂದರೆ, ಬಂಗಾಳದಲ್ಲಿ ಬದಲಾವಣೆ ತರಬೇಕೆಂದರೆ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲುವುದನ್ನು ಮುಖ್ಯ ಎಂದು ಅಮಿತ್ ಶಾ ಹೇಳಿದ್ದಾರೆ. ಒಟ್ಟಾರೆ ಏಪ್ರಿಲ್ 2 ರಂದು ನಡೆಯಲಿರುವ ನಂದಿಗ್ರಾಮ ಚುನಾವಣೆ ಮೇಲೆ ಎಲ್ಲ ಕಣ್ಣು ನೆಟ್ಟಿದೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನೊಬ್ಬ ಅತ್ಯಾಚಾರದ ಆರೋಪದಲ್ಲಿ ಬಂಧಿತನಾಗಿದ್ದಾನೆ. ಇಲ್ಲಿ ಬಿಜೆಪಿ ಬೇರೆಯವರಿಗೆ ಪಾಠ ಹೇಳುತ್ತಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಓ’ಬ್ರಿಯಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ. “ಅವರು ಮೊದಲ ಬಾರಿಗೆ ನಂದಿಗ್ರಾಮಕ್ಕೆ ಭೇಟಿ ನೀಡಿದರು, ರೋಡ್ ಶೋ ನಡೆಸಿದರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಅವರು ಮತ್ತೆಂದು ನಂದಿಗ್ರಾಮದಲ್ಲಿ ತಮ್ಮ ಮುಖ ತೋರಿಸಲಾರರು” ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...