Homeಮುಖಪುಟಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕೊನೆಯ ದಿನವಾಗಿತ್ತು. ಈ ಹಿನ್ನೆಲೆ ಬಂಗಾಳದ ಚುನಾವಣಾ ಕೇಂದ್ರ ಬಿಂದುವಾಗಿರುವ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಮಿತ್ ಶಾ ಪ್ರಚಾರ ನಡೆಸಿದ್ದಾರೆ. ಮಹಿಳಾ ಸುರಕ್ಷತೆಯನ್ನು ಆಧಾರವಾಗಿಟ್ಟುಕೊಂಡು ಎರಡು ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸಿವೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದರೆ, ಬಿಜೆಪಿ ಪಕ್ಷದಲ್ಲೇ ಅಲ್ಲಿನ ಓರ್ವ ಮಹಿಳೆಯ ಹತ್ಯೆ ನಡೆಸಲು ಸಂಚು ರೂಪಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಬೆಂಬಲಿಗರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಆರೋಪಿಸಲಾಗಿದ್ದ ಬಿಜೆಪಿ ಕಾರ್ಯಕರ್ತೆಯೊಬ್ಬರ 85 ವರ್ಷದ ತಾಯಿಯ ಸಾವನ್ನು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪದೇ ಪದೇ ಪ್ರಸ್ತಾಪಿಸುತ್ತಿದೆ. ನಂದಿಗ್ರಾಮ್‌ನಲ್ಲಿ ರೋಡ್ ಶೋ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಘಟನೆಯನ್ನು ಉಲ್ಲೇಖಿಸಿ ಟಿಎಂಸಿಯನ್ನು ಸೋಲಿಸಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇನ್ನು 15 ದಿನ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್‍ಯಾಲಿ ನಡೆಸುವಂತಿಲ್ಲ- ಸಿಎಂ ಯಡಿಯೂರಪ್ಪ

ನಂದಿಗ್ರಾಮದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಅವರು (ಬಿಜೆಪಿ) ತಮ್ಮದೆ ಜನರನ್ನು ಕೊಲ್ಲುವ ಯೋಜನೆಯನ್ನು ಹೊಂದಿದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶಗಳಿಂದ ಗೂಂಡಾಗಳನ್ನು ಕರೆಸಿದ್ದಾರೆ. ನಂತರ ಅದನ್ನು ನಮ್ಮ ಕಾರ್ಯಕರ್ತರ ಮೇಲೆ ಹಾಕುವ ಯೋಜನೆ ಹೊಂದಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಮಾಹಿತಿ ಇದೆ. ಜಾಗರೂಕರಾಗಿರಿ” ಎಂದು ಆರೋಪಿಸಿದ್ದಾರೆ.

ಇತ್ತ, ಮತ್ತೊಂದು ರ್‍ಯಾಲಿಯಲ್ಲಿ ಮಾತನಾಡಿರುವ ಅಮಿತ್ ಶಾ, ‘ನಾನಿಲ್ಲಿಗೆ ತಲುಪಿದ ಕೂಡಲೇ ಒಂದು ದುಃಖದ ಸುದ್ದಿ ಕೇಳಿದೆ. ಮಮತಾ ಬ್ಯಾನರ್ಜಿ ಅವರು ಇರುವ ಸ್ಥಳದ 5 ಕಿ.ಮೀ ವ್ಯಾಪ್ತಿಯೊಳಗೆ ಮಹಿಳೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಇರುವ ಪ್ರದೇಶದಲ್ಲಿಯೇ ಅತ್ಯಾಚಾರ ನಡೆದಿದೆ ಎಂದಾದರೆ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿರಲು ಹೇಗೆ ಸಾಧ್ಯ’ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ಮಹಿಳೆಯರು ಸುರಕ್ಷತೆಯಿಂದ ಇರಬೇಕೆಂದರೆ, ಬಂಗಾಳದಲ್ಲಿ ಬದಲಾವಣೆ ತರಬೇಕೆಂದರೆ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲುವುದನ್ನು ಮುಖ್ಯ ಎಂದು ಅಮಿತ್ ಶಾ ಹೇಳಿದ್ದಾರೆ. ಒಟ್ಟಾರೆ ಏಪ್ರಿಲ್ 2 ರಂದು ನಡೆಯಲಿರುವ ನಂದಿಗ್ರಾಮ ಚುನಾವಣೆ ಮೇಲೆ ಎಲ್ಲ ಕಣ್ಣು ನೆಟ್ಟಿದೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನೊಬ್ಬ ಅತ್ಯಾಚಾರದ ಆರೋಪದಲ್ಲಿ ಬಂಧಿತನಾಗಿದ್ದಾನೆ. ಇಲ್ಲಿ ಬಿಜೆಪಿ ಬೇರೆಯವರಿಗೆ ಪಾಠ ಹೇಳುತ್ತಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಓ’ಬ್ರಿಯಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ. “ಅವರು ಮೊದಲ ಬಾರಿಗೆ ನಂದಿಗ್ರಾಮಕ್ಕೆ ಭೇಟಿ ನೀಡಿದರು, ರೋಡ್ ಶೋ ನಡೆಸಿದರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಅವರು ಮತ್ತೆಂದು ನಂದಿಗ್ರಾಮದಲ್ಲಿ ತಮ್ಮ ಮುಖ ತೋರಿಸಲಾರರು” ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...