Homeಮುಖಪುಟಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

ಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

- Advertisement -
- Advertisement -

ಭಾರತೀಯ ನ್ಯಾಯ ಸಂಹಿತೆಗೆ (ಬಿಎನ್‌ಎಸ್) ಪ್ರಸ್ತಾವಿತ ಬದಲಾವಣೆಗಳ ಕುರಿತು ಕೇಂದ್ರವು ಎತ್ತಿರುವ ಗಂಭೀರ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ‘ಅಪರಾಜಿತ ಮಸೂದೆ’ಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂದಿರುಗಿಸಿದ್ದಾರೆ ಎಂದು ರಾಜಭವನದ ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸೆಪ್ಟೆಂಬರ್ 2024ರಲ್ಲಿ ವಿಧಾನಸಭೆ ಅಂಗೀಕರಿಸಿರುವ ‘ಅಪರಾಜಿತ ಮಹಿಳೆಯರು ಮತ್ತು ಮಕ್ಕಳ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ) ಮಸೂದೆಯು’ ಬಿಎನ್‌ಎಸ್‌ನ ಹಲವು ವಿಭಾಗಗಳ ಅಡಿಯಲ್ಲಿ ಅತ್ಯಾಚಾರಕ್ಕೆ ಶಿಕ್ಷೆ ವಿಧಿಸುವ ನಿಬಂಧನೆಗಳಲ್ಲಿ ಬದಲಾವಣೆ ಮಾಡಲಿವೆ ಎಂದು ಕೇಂದ್ರವು ಕಂಡುಕೊಂಡಿದೆ. ‘ಅತಿ ಕಠಿಣ ಮತ್ತು ಅಸಮಾನ’ ಶಿಕ್ಷೆಗಳನ್ನು ಪ್ರಸ್ತಾಪಿಸಿವೆ ಎಂದು ಕೇಂದ್ರ ಹೇಳಿದೆ.

ಬಿಎನ್‌ಎಸ್ ಸೆಕ್ಷನ್ 64ಕ್ಕೆ ತಿದ್ದುಪಡಿ ತರುವುದು ಮಸೂದೆಯ ಒಂದು ಪ್ರಮುಖ ವಿವಾದದ ಅಂಶವಾಗಿದೆ. ಮಸೂದೆಯು ಅತ್ಯಾಚಾರಕ್ಕೆ ಪ್ರಸ್ತುತ ಇರುವ ಕನಿಷ್ಠ 10 ವರ್ಷಗಳ ಶಿಕ್ಷೆಯನ್ನು ಅಪರಾಧಿಯ ಸಹಜ ಜೀವಿತಾವಧಿಯ ಉಳಿದ ಅವಧಿಗೆ ಜೈಲು ಶಿಕ್ಷೆ ಅಥವಾ ಮರಣದಂಡನೆಗೆ ಹೆಚ್ಚಿಸಲಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಇದು ಅನಗತ್ಯ ಕಠಿಣ ಮತ್ತು ನೈತಿಕ ತತ್ವಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಪರಿಗಣಿಸಿರುವುದಾಗಿ ವರದಿಯಾಗಿದೆ.

ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಯನ್ನು ಸೂಚಿಸುವ ಬಿಎನ್‌ಎಸ್ ಸೆಕ್ಷನ್ 65 ಅನ್ನು ತೆಗೆದುಹಾಕುವುದನ್ನು ಗೃಹ ಸಚಿವಾಲಯ ಆಕ್ಷೇಪಿಸಿದ್ದು ಮತ್ತೊಂದು ಕಾರಣವಾಗಿದೆ. ಮೂಲಗಳ ಪ್ರಕಾರ, ಈ ಸೆಕ್ಷನ್ ರದ್ದುಗೊಳಿಸುವುದರಿಂದ ದುರ್ಬಲ ಗುಂಪುಗಳಿಗೆ ರಕ್ಷಣೆ ದುರ್ಬಲಗೊಳ್ಳುತ್ತದೆ ಮತ್ತು ಅತ್ಯಾಚಾರ ಕಾನೂನುಗಳಲ್ಲಿ ವಯಸ್ಸಿನ ಆಧಾರಿತ ವರ್ಗೀಕರಣದ ಹಿಂದಿನ ಉದ್ದೇಶವನ್ನು ದುರ್ಬಲಗೊಳಿಸುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.

ಇನ್ನು, ಕೇಂದ್ರವು ಅತ್ಯಂತ ಸಮಸ್ಯಾತ್ಮಕವೆಂದು ಕಂಡುಕೊಂಡಿರುವ ನಿಬಂಧನೆ ಸೆಕ್ಷನ್ 66ರ ಅಡಿಯಲ್ಲಿದ್ದು, ಅತ್ಯಾಚಾರ ಪ್ರಕರಣಗಳಲ್ಲಿ ಬಲಿಪಶು ಸಾವನ್ನಪ್ಪಿದರೆ ಅಥವಾ ಅಸ್ವಸ್ಥ ಸ್ಥಿತಿಯಲ್ಲಿ ಉಳಿದರೆ ಇದು ಅಪರಾಧಿಗೆ ಮರಣದಂಡನೆಯನ್ನು ಕಡ್ಡಾಯಗೊಳಿಸುತ್ತದೆ.

ಮಸೂದೆಯ ಕುರಿತು ಗೃಹ ಸಚಿವಾಲಯವು ಸಾಂವಿಧಾನಿಕ ಕಳವಳಗಳನ್ನು ವ್ಯಕ್ತಪಡಿಸಿದ್ದು, ಶಿಕ್ಷೆ ವಿಧಿಸುವಲ್ಲಿ ನ್ಯಾಯಾಂಗದ ವಿವೇಚನೆಯನ್ನು ತೆಗೆದುಹಾಕುವುದು ಸ್ಥಾಪಿತ ಕಾನೂನು ಮಾನದಂಡಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಸೂದೆಯ ಕುರಿತ ಅವಲೋಕನಗಳ ಬಗ್ಗೆ ಕೇಂದ್ರ ಅಥವಾ ರಾಜ್ಯಪಾಲರ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಹಿಂದೆ, ಅಪರಾಜಿತ ಮಾದರಿಯಲ್ಲೇ ಎಲ್ಲಾ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳಿಗೆ ಕಡ್ಡಾಯ ಮರಣದಂಡನೆ ವಿಧಿಸಲು ಪ್ರಸ್ತಾಪಿಸಿದ್ದ ಆಂಧ್ರ ಪ್ರದೇಶ ‘ದಿಶಾ ಮಸೂದೆ, 2019’ ಮತ್ತು ಮಹಾರಾಷ್ಟ್ರದ ‘ಶಕ್ತಿ ಮಸೂದೆ, 2020’ ಅನ್ನು ಆಯಾ ರಾಜ್ಯ ಶಾಸಕಾಂಗಗಳು ಸರ್ವಾನುಮತದಿಂದ ಅಂಗೀಕರಿಸಿದ್ದವು, ಆದರೆ, ರಾಷ್ಟ್ರಪತಿ ಅಂಕಿ ಹಾಕಿರಲಿಲ್ಲ.

ತೃಣಮೂಲ ಕಾಂಗ್ರೆಸ್ ಪಕ್ಷವು ಇದನ್ನು ರಾಜಕೀಯ ವಿಷಯವನ್ನಾಗಿ ಮಾಡಲಿದೆ ಎಂದು ಅದರ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ. “ಅಪರಾಜಿತ ಮಸೂದೆಯನ್ನು ಹಿಂತಿರುಗಿಸಿರುವುದು ದುರದೃಷ್ಟಕರ, ಶೋಚನೀಯ ಮತ್ತು ಖಂಡನೀಯ. ಬಿಜೆಪಿ ಸದಸ್ಯರು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಗಳಲ್ಲಿ ಭಾಗಿಯಾಗಿರುವುದರಿಂದ ಈ ಪ್ರಕರಣಗಳಲ್ಲಿ ಗರಿಷ್ಠ ಶಿಕ್ಷೆಯನ್ನು ವಿಧಿಸಲು ಅವರು ಸಿದ್ಧರಿಲ್ಲ ಎಂಬುವುದನ್ನು ಇದು ಸಾಬೀತುಪಡಿಸಿದೆ” ಎಂದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆ: ಬಿಜೆಪಿಯ ಬಂಡಾರು ದತ್ತಾತ್ರೇಯ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಸಿಎಂ ರೇವಂತ್ ರೆಡ್ಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...